ಕಾಡಾನೆಗಳ ಹಾವಳಿಗೆ ಪರಿಹಾರ ಯಾವಾಗ?
ಎಚ್.ಡಿ.ಕೋಟೆ ಭಾಗವು ಅರಣ್ಯ ಪ್ರದೇಶವನ್ನು ಹೆಚ್ಚಾಗಿ ಹೊಂದಿರುವುದರಿಂದ ಇಲ್ಲಿ ಕಾಡು ಪ್ರಾಣಿಗಳು ಕೂಡ ಹೆಚ್ಚಾಗಿ ಕಂಡು ಬರುತ್ತವೆ. ಅದರಲ್ಲೂ ಕಾಡಾನೆಗಳಂತೂ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುತ್ತವೆ. ಇದು ಒಂದೆಡೆ ಸಂತೋಷದ ವಿಚಾರವಾದರೆ, ಮತ್ತೊಂದು ದೃಷ್ಟಿಯಲ್ಲಿ ಇಲ್ಲಿನ ರೈತರಿಗೆ ತೀರಾ ಸಂಕಷ್ಟ ಎದುರಾಗುವಂತಾಗಿದೆ. ರೈತರ ಬೆಳೆಗಳು ಇನ್ನೇನು ಕೈ ಸೇರುವ ಹಂತದಲ್ಲಿ , ಕಾಡಾನೆಗಳು ದಾಳಿ ನಡೆಸಿ ತಿಂದು -ತುಳಿದು ನಾಶ ಮಾಡುತ್ತಿವೆ. ಈ ವೇಳೆ ಸಾಕಷ್ಟು ಬಾರಿ ರೈತರು ಹಾಗೂ ಸ್ಥಳೀಯ ಗ್ರಾಮಸ್ಥರ ಮೇಲೂ ದಾಳಿ ನಡೆಸಿ ಅವರನ್ನು ಬಲಿಪಡೆದಿರುವ ಉದಾಹರಣೆಗಳು ಸಾಕಷ್ಟಿವೆ. ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳ ಸಾಕಷ್ಟು ಗ್ರಾಮಗಳಲ್ಲಿ ಈ ರೀತಿಯ ಕಾಡಾನೆಗಳ ದಾಳಿ ನಿರಂತರವಾಗಿ ನಡೆಯುತ್ತಲೇ ಇದೆ. ವರ್ಷದ ಹಿಂದೆ ಕಾಡಾನೆಯೊಂದು ದಾಳಿ ನಡೆಸಿ ಕಲ್ಲಂಬಾಳು ಗ್ರಾಮದ ಸುಮಾರು 45 ವರ್ಷದ ಮಹಿಳೆಯನ್ನು ಸಾಯಿಸಿದ್ದು, ಇದಾದ ಕೆಲವು ತಿಂಗಳುಗಳ ಅಂತರದಲ್ಲೇ ಮತ್ತೆರಡು ಕಾಡಾನೆಗಳು ಬೆಳಗಿನ ಜಾವದಲ್ಲೆ ಗ್ರಾಮಕ್ಕೆ ನುಗ್ಗಿ ಡೇರಿಗೆ ಹಾಲುಹಾಕಲು ತೆರಳುತ್ತಿದ್ದ ಓರ್ವ ವೃದ್ಧನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದವು. ಅಲ್ಲದೆ ಕಳೆದ ಕೆಲದಿನಗಳಲ್ಲಿ ಕಲ್ಲಂಬಾಳು ಸೇರಿದಂತೆ ಸರಗೂರಿನ ವಿವಿಧ ಗ್ರಾಮಗಳ ಜಮೀನಿನಲ್ಲಿ ಕಾಡಾನೆಗಳು ಕಾಣಿಸಿಕೊಂಡು ಸಾರ್ವಜನಿಕರ ಆತಂಕವನ್ನು ಹೆಚ್ಚಿಸಿವೆ. ಹಾಗಾಗಿ ಈ ಭಾಗದ ಗ್ರಾಮಗಳ ಜನರು ತಮ್ಮ ತಮ್ಮ ಜಮೀನುಗಳಿಗೆ ತೆರಳಲು ಹಾಗೂ ಬೆಳಗಿನ ಜಾವ ಮತ್ತು ಸಂಜೆಯ ಸಮಯದಲ್ಲಿ ಓಡಾಡಲು ಸಹಜವಾಗಿ ಭಯಪಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಿ ಈ ಸಮಸ್ಯೆಗೆ ಸೂಕ್ತ ಪರಿಹಾರ ದೊರಕಿಸಬೇಕು ಎಂಬುದು ಈ ಭಾಗದ ಜನರ ಮನವಿಯಾಗಿದೆ.
–ಕೆ.ಎಂ.ಅಭಿಷೇಕ್, ಪತ್ರಿಕೋದ್ಯಮ ವಿಭಾಗ,
ಮಹಾರಾಜ ಕಾಲೇಜು, ಮೈಸೂರು.
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…