ಕಾಡಾನೆಗಳ ಹಾವಳಿಗೆ ಪರಿಹಾರ ಯಾವಾಗ?
ಎಚ್.ಡಿ.ಕೋಟೆ ಭಾಗವು ಅರಣ್ಯ ಪ್ರದೇಶವನ್ನು ಹೆಚ್ಚಾಗಿ ಹೊಂದಿರುವುದರಿಂದ ಇಲ್ಲಿ ಕಾಡು ಪ್ರಾಣಿಗಳು ಕೂಡ ಹೆಚ್ಚಾಗಿ ಕಂಡು ಬರುತ್ತವೆ. ಅದರಲ್ಲೂ ಕಾಡಾನೆಗಳಂತೂ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುತ್ತವೆ. ಇದು ಒಂದೆಡೆ ಸಂತೋಷದ ವಿಚಾರವಾದರೆ, ಮತ್ತೊಂದು ದೃಷ್ಟಿಯಲ್ಲಿ ಇಲ್ಲಿನ ರೈತರಿಗೆ ತೀರಾ ಸಂಕಷ್ಟ ಎದುರಾಗುವಂತಾಗಿದೆ. ರೈತರ ಬೆಳೆಗಳು ಇನ್ನೇನು ಕೈ ಸೇರುವ ಹಂತದಲ್ಲಿ , ಕಾಡಾನೆಗಳು ದಾಳಿ ನಡೆಸಿ ತಿಂದು -ತುಳಿದು ನಾಶ ಮಾಡುತ್ತಿವೆ. ಈ ವೇಳೆ ಸಾಕಷ್ಟು ಬಾರಿ ರೈತರು ಹಾಗೂ ಸ್ಥಳೀಯ ಗ್ರಾಮಸ್ಥರ ಮೇಲೂ ದಾಳಿ ನಡೆಸಿ ಅವರನ್ನು ಬಲಿಪಡೆದಿರುವ ಉದಾಹರಣೆಗಳು ಸಾಕಷ್ಟಿವೆ. ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳ ಸಾಕಷ್ಟು ಗ್ರಾಮಗಳಲ್ಲಿ ಈ ರೀತಿಯ ಕಾಡಾನೆಗಳ ದಾಳಿ ನಿರಂತರವಾಗಿ ನಡೆಯುತ್ತಲೇ ಇದೆ. ವರ್ಷದ ಹಿಂದೆ ಕಾಡಾನೆಯೊಂದು ದಾಳಿ ನಡೆಸಿ ಕಲ್ಲಂಬಾಳು ಗ್ರಾಮದ ಸುಮಾರು 45 ವರ್ಷದ ಮಹಿಳೆಯನ್ನು ಸಾಯಿಸಿದ್ದು, ಇದಾದ ಕೆಲವು ತಿಂಗಳುಗಳ ಅಂತರದಲ್ಲೇ ಮತ್ತೆರಡು ಕಾಡಾನೆಗಳು ಬೆಳಗಿನ ಜಾವದಲ್ಲೆ ಗ್ರಾಮಕ್ಕೆ ನುಗ್ಗಿ ಡೇರಿಗೆ ಹಾಲುಹಾಕಲು ತೆರಳುತ್ತಿದ್ದ ಓರ್ವ ವೃದ್ಧನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದವು. ಅಲ್ಲದೆ ಕಳೆದ ಕೆಲದಿನಗಳಲ್ಲಿ ಕಲ್ಲಂಬಾಳು ಸೇರಿದಂತೆ ಸರಗೂರಿನ ವಿವಿಧ ಗ್ರಾಮಗಳ ಜಮೀನಿನಲ್ಲಿ ಕಾಡಾನೆಗಳು ಕಾಣಿಸಿಕೊಂಡು ಸಾರ್ವಜನಿಕರ ಆತಂಕವನ್ನು ಹೆಚ್ಚಿಸಿವೆ. ಹಾಗಾಗಿ ಈ ಭಾಗದ ಗ್ರಾಮಗಳ ಜನರು ತಮ್ಮ ತಮ್ಮ ಜಮೀನುಗಳಿಗೆ ತೆರಳಲು ಹಾಗೂ ಬೆಳಗಿನ ಜಾವ ಮತ್ತು ಸಂಜೆಯ ಸಮಯದಲ್ಲಿ ಓಡಾಡಲು ಸಹಜವಾಗಿ ಭಯಪಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಿ ಈ ಸಮಸ್ಯೆಗೆ ಸೂಕ್ತ ಪರಿಹಾರ ದೊರಕಿಸಬೇಕು ಎಂಬುದು ಈ ಭಾಗದ ಜನರ ಮನವಿಯಾಗಿದೆ.
–ಕೆ.ಎಂ.ಅಭಿಷೇಕ್, ಪತ್ರಿಕೋದ್ಯಮ ವಿಭಾಗ,
ಮಹಾರಾಜ ಕಾಲೇಜು, ಮೈಸೂರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…