ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 19 ಗುರುವಾರ 2023

ಕಾಡಾನೆಗಳ ಹಾವಳಿಗೆ ಪರಿಹಾರ ಯಾವಾಗ?

ಎಚ್.ಡಿ.ಕೋಟೆ ಭಾಗವು ಅರಣ್ಯ ಪ್ರದೇಶವನ್ನು ಹೆಚ್ಚಾಗಿ ಹೊಂದಿರುವುದರಿಂದ ಇಲ್ಲಿ ಕಾಡು ಪ್ರಾಣಿಗಳು ಕೂಡ ಹೆಚ್ಚಾಗಿ ಕಂಡು ಬರುತ್ತವೆ. ಅದರಲ್ಲೂ ಕಾಡಾನೆಗಳಂತೂ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುತ್ತವೆ. ಇದು ಒಂದೆಡೆ ಸಂತೋಷದ ವಿಚಾರವಾದರೆ, ಮತ್ತೊಂದು ದೃಷ್ಟಿಯಲ್ಲಿ  ಇಲ್ಲಿನ ರೈತರಿಗೆ ತೀರಾ ಸಂಕಷ್ಟ ಎದುರಾಗುವಂತಾಗಿದೆ. ರೈತರ ಬೆಳೆಗಳು ಇನ್ನೇನು ಕೈ ಸೇರುವ ಹಂತದಲ್ಲಿ , ಕಾಡಾನೆಗಳು ದಾಳಿ ನಡೆಸಿ  ತಿಂದು -ತುಳಿದು ನಾಶ ಮಾಡುತ್ತಿವೆ. ಈ ವೇಳೆ ಸಾಕಷ್ಟು ಬಾರಿ ರೈತರು ಹಾಗೂ ಸ್ಥಳೀಯ ಗ್ರಾಮಸ್ಥರ ಮೇಲೂ ದಾಳಿ ನಡೆಸಿ ಅವರನ್ನು ಬಲಿಪಡೆದಿರುವ ಉದಾಹರಣೆಗಳು ಸಾಕಷ್ಟಿವೆ. ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳ ಸಾಕಷ್ಟು  ಗ್ರಾಮಗಳಲ್ಲಿ ಈ ರೀತಿಯ ಕಾಡಾನೆಗಳ ದಾಳಿ ನಿರಂತರವಾಗಿ ನಡೆಯುತ್ತಲೇ ಇದೆ. ವರ್ಷದ ಹಿಂದೆ ಕಾಡಾನೆಯೊಂದು ದಾಳಿ ನಡೆಸಿ ಕಲ್ಲಂಬಾಳು ಗ್ರಾಮದ ಸುಮಾರು 45 ವರ್ಷದ ಮಹಿಳೆಯನ್ನು ಸಾಯಿಸಿದ್ದು, ಇದಾದ ಕೆಲವು ತಿಂಗಳುಗಳ ಅಂತರದಲ್ಲೇ ಮತ್ತೆರಡು ಕಾಡಾನೆಗಳು ಬೆಳಗಿನ ಜಾವದಲ್ಲೆ ಗ್ರಾಮಕ್ಕೆ ನುಗ್ಗಿ ಡೇರಿಗೆ ಹಾಲುಹಾಕಲು ತೆರಳುತ್ತಿದ್ದ ಓರ್ವ ವೃದ್ಧನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದವು.  ಅಲ್ಲದೆ ಕಳೆದ ಕೆಲದಿನಗಳಲ್ಲಿ  ಕಲ್ಲಂಬಾಳು ಸೇರಿದಂತೆ ಸರಗೂರಿನ ವಿವಿಧ ಗ್ರಾಮಗಳ ಜಮೀನಿನಲ್ಲಿ ಕಾಡಾನೆಗಳು ಕಾಣಿಸಿಕೊಂಡು ಸಾರ್ವಜನಿಕರ ಆತಂಕವನ್ನು ಹೆಚ್ಚಿಸಿವೆ. ಹಾಗಾಗಿ ಈ ಭಾಗದ ಗ್ರಾಮಗಳ ಜನರು ತಮ್ಮ ತಮ್ಮ ಜಮೀನುಗಳಿಗೆ ತೆರಳಲು ಹಾಗೂ ಬೆಳಗಿನ ಜಾವ ಮತ್ತು ಸಂಜೆಯ ಸಮಯದಲ್ಲಿ ಓಡಾಡಲು ಸಹಜವಾಗಿ ಭಯಪಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಿ ಈ ಸಮಸ್ಯೆಗೆ ಸೂಕ್ತ ಪರಿಹಾರ ದೊರಕಿಸಬೇಕು ಎಂಬುದು ಈ ಭಾಗದ ಜನರ ಮನವಿಯಾಗಿದೆ.

ಕೆ.ಎಂ.ಅಭಿಷೇಕ್, ಪತ್ರಿಕೋದ್ಯಮ ವಿಭಾಗ,

ಮಹಾರಾಜ ಕಾಲೇಜು, ಮೈಸೂರು.

andolanait

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago