ಕಾಡಾನೆಗಳ ಹಾವಳಿಗೆ ಪರಿಹಾರ ಯಾವಾಗ?
ಎಚ್.ಡಿ.ಕೋಟೆ ಭಾಗವು ಅರಣ್ಯ ಪ್ರದೇಶವನ್ನು ಹೆಚ್ಚಾಗಿ ಹೊಂದಿರುವುದರಿಂದ ಇಲ್ಲಿ ಕಾಡು ಪ್ರಾಣಿಗಳು ಕೂಡ ಹೆಚ್ಚಾಗಿ ಕಂಡು ಬರುತ್ತವೆ. ಅದರಲ್ಲೂ ಕಾಡಾನೆಗಳಂತೂ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುತ್ತವೆ. ಇದು ಒಂದೆಡೆ ಸಂತೋಷದ ವಿಚಾರವಾದರೆ, ಮತ್ತೊಂದು ದೃಷ್ಟಿಯಲ್ಲಿ ಇಲ್ಲಿನ ರೈತರಿಗೆ ತೀರಾ ಸಂಕಷ್ಟ ಎದುರಾಗುವಂತಾಗಿದೆ. ರೈತರ ಬೆಳೆಗಳು ಇನ್ನೇನು ಕೈ ಸೇರುವ ಹಂತದಲ್ಲಿ , ಕಾಡಾನೆಗಳು ದಾಳಿ ನಡೆಸಿ ತಿಂದು -ತುಳಿದು ನಾಶ ಮಾಡುತ್ತಿವೆ. ಈ ವೇಳೆ ಸಾಕಷ್ಟು ಬಾರಿ ರೈತರು ಹಾಗೂ ಸ್ಥಳೀಯ ಗ್ರಾಮಸ್ಥರ ಮೇಲೂ ದಾಳಿ ನಡೆಸಿ ಅವರನ್ನು ಬಲಿಪಡೆದಿರುವ ಉದಾಹರಣೆಗಳು ಸಾಕಷ್ಟಿವೆ. ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳ ಸಾಕಷ್ಟು ಗ್ರಾಮಗಳಲ್ಲಿ ಈ ರೀತಿಯ ಕಾಡಾನೆಗಳ ದಾಳಿ ನಿರಂತರವಾಗಿ ನಡೆಯುತ್ತಲೇ ಇದೆ. ವರ್ಷದ ಹಿಂದೆ ಕಾಡಾನೆಯೊಂದು ದಾಳಿ ನಡೆಸಿ ಕಲ್ಲಂಬಾಳು ಗ್ರಾಮದ ಸುಮಾರು 45 ವರ್ಷದ ಮಹಿಳೆಯನ್ನು ಸಾಯಿಸಿದ್ದು, ಇದಾದ ಕೆಲವು ತಿಂಗಳುಗಳ ಅಂತರದಲ್ಲೇ ಮತ್ತೆರಡು ಕಾಡಾನೆಗಳು ಬೆಳಗಿನ ಜಾವದಲ್ಲೆ ಗ್ರಾಮಕ್ಕೆ ನುಗ್ಗಿ ಡೇರಿಗೆ ಹಾಲುಹಾಕಲು ತೆರಳುತ್ತಿದ್ದ ಓರ್ವ ವೃದ್ಧನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದವು. ಅಲ್ಲದೆ ಕಳೆದ ಕೆಲದಿನಗಳಲ್ಲಿ ಕಲ್ಲಂಬಾಳು ಸೇರಿದಂತೆ ಸರಗೂರಿನ ವಿವಿಧ ಗ್ರಾಮಗಳ ಜಮೀನಿನಲ್ಲಿ ಕಾಡಾನೆಗಳು ಕಾಣಿಸಿಕೊಂಡು ಸಾರ್ವಜನಿಕರ ಆತಂಕವನ್ನು ಹೆಚ್ಚಿಸಿವೆ. ಹಾಗಾಗಿ ಈ ಭಾಗದ ಗ್ರಾಮಗಳ ಜನರು ತಮ್ಮ ತಮ್ಮ ಜಮೀನುಗಳಿಗೆ ತೆರಳಲು ಹಾಗೂ ಬೆಳಗಿನ ಜಾವ ಮತ್ತು ಸಂಜೆಯ ಸಮಯದಲ್ಲಿ ಓಡಾಡಲು ಸಹಜವಾಗಿ ಭಯಪಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಿ ಈ ಸಮಸ್ಯೆಗೆ ಸೂಕ್ತ ಪರಿಹಾರ ದೊರಕಿಸಬೇಕು ಎಂಬುದು ಈ ಭಾಗದ ಜನರ ಮನವಿಯಾಗಿದೆ.
–ಕೆ.ಎಂ.ಅಭಿಷೇಕ್, ಪತ್ರಿಕೋದ್ಯಮ ವಿಭಾಗ,
ಮಹಾರಾಜ ಕಾಲೇಜು, ಮೈಸೂರು.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…