ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 19 ಗುರುವಾರ 2023

ಕಾಡಾನೆಗಳ ಹಾವಳಿಗೆ ಪರಿಹಾರ ಯಾವಾಗ?

ಎಚ್.ಡಿ.ಕೋಟೆ ಭಾಗವು ಅರಣ್ಯ ಪ್ರದೇಶವನ್ನು ಹೆಚ್ಚಾಗಿ ಹೊಂದಿರುವುದರಿಂದ ಇಲ್ಲಿ ಕಾಡು ಪ್ರಾಣಿಗಳು ಕೂಡ ಹೆಚ್ಚಾಗಿ ಕಂಡು ಬರುತ್ತವೆ. ಅದರಲ್ಲೂ ಕಾಡಾನೆಗಳಂತೂ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುತ್ತವೆ. ಇದು ಒಂದೆಡೆ ಸಂತೋಷದ ವಿಚಾರವಾದರೆ, ಮತ್ತೊಂದು ದೃಷ್ಟಿಯಲ್ಲಿ  ಇಲ್ಲಿನ ರೈತರಿಗೆ ತೀರಾ ಸಂಕಷ್ಟ ಎದುರಾಗುವಂತಾಗಿದೆ. ರೈತರ ಬೆಳೆಗಳು ಇನ್ನೇನು ಕೈ ಸೇರುವ ಹಂತದಲ್ಲಿ , ಕಾಡಾನೆಗಳು ದಾಳಿ ನಡೆಸಿ  ತಿಂದು -ತುಳಿದು ನಾಶ ಮಾಡುತ್ತಿವೆ. ಈ ವೇಳೆ ಸಾಕಷ್ಟು ಬಾರಿ ರೈತರು ಹಾಗೂ ಸ್ಥಳೀಯ ಗ್ರಾಮಸ್ಥರ ಮೇಲೂ ದಾಳಿ ನಡೆಸಿ ಅವರನ್ನು ಬಲಿಪಡೆದಿರುವ ಉದಾಹರಣೆಗಳು ಸಾಕಷ್ಟಿವೆ. ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳ ಸಾಕಷ್ಟು  ಗ್ರಾಮಗಳಲ್ಲಿ ಈ ರೀತಿಯ ಕಾಡಾನೆಗಳ ದಾಳಿ ನಿರಂತರವಾಗಿ ನಡೆಯುತ್ತಲೇ ಇದೆ. ವರ್ಷದ ಹಿಂದೆ ಕಾಡಾನೆಯೊಂದು ದಾಳಿ ನಡೆಸಿ ಕಲ್ಲಂಬಾಳು ಗ್ರಾಮದ ಸುಮಾರು 45 ವರ್ಷದ ಮಹಿಳೆಯನ್ನು ಸಾಯಿಸಿದ್ದು, ಇದಾದ ಕೆಲವು ತಿಂಗಳುಗಳ ಅಂತರದಲ್ಲೇ ಮತ್ತೆರಡು ಕಾಡಾನೆಗಳು ಬೆಳಗಿನ ಜಾವದಲ್ಲೆ ಗ್ರಾಮಕ್ಕೆ ನುಗ್ಗಿ ಡೇರಿಗೆ ಹಾಲುಹಾಕಲು ತೆರಳುತ್ತಿದ್ದ ಓರ್ವ ವೃದ್ಧನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದವು.  ಅಲ್ಲದೆ ಕಳೆದ ಕೆಲದಿನಗಳಲ್ಲಿ  ಕಲ್ಲಂಬಾಳು ಸೇರಿದಂತೆ ಸರಗೂರಿನ ವಿವಿಧ ಗ್ರಾಮಗಳ ಜಮೀನಿನಲ್ಲಿ ಕಾಡಾನೆಗಳು ಕಾಣಿಸಿಕೊಂಡು ಸಾರ್ವಜನಿಕರ ಆತಂಕವನ್ನು ಹೆಚ್ಚಿಸಿವೆ. ಹಾಗಾಗಿ ಈ ಭಾಗದ ಗ್ರಾಮಗಳ ಜನರು ತಮ್ಮ ತಮ್ಮ ಜಮೀನುಗಳಿಗೆ ತೆರಳಲು ಹಾಗೂ ಬೆಳಗಿನ ಜಾವ ಮತ್ತು ಸಂಜೆಯ ಸಮಯದಲ್ಲಿ ಓಡಾಡಲು ಸಹಜವಾಗಿ ಭಯಪಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಿ ಈ ಸಮಸ್ಯೆಗೆ ಸೂಕ್ತ ಪರಿಹಾರ ದೊರಕಿಸಬೇಕು ಎಂಬುದು ಈ ಭಾಗದ ಜನರ ಮನವಿಯಾಗಿದೆ.

ಕೆ.ಎಂ.ಅಭಿಷೇಕ್, ಪತ್ರಿಕೋದ್ಯಮ ವಿಭಾಗ,

ಮಹಾರಾಜ ಕಾಲೇಜು, ಮೈಸೂರು.

andolanait

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

49 mins ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

1 hour ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

1 hour ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

2 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

2 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

3 hours ago