ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 20 ಶುಕ್ರವಾರ 2023

ನ್ಯಾಯಮೂರ್ತಿಗಳ ನೇಮಕ ನಿಷ್ಪಕ್ಷಪಾತವಾಗಿರಲಿ

ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳಿಗೆ ಅವುಗಳದೇ ಆದ ಕಾರ್ಯವ್ಯಾಪ್ತಿಗಳಿವೆ. ಕಾನೂನು ರಚಿಸುವುದು ಸರ್ಕಾರವೇ ಆದರೂ ಅದರ ಅನುಕೂಲ ಮತ್ತು ಅನನುಕೂಲಗಳನ್ನು ಪರಾಮರ್ಶೆ ಮಾಡುವುದು ನ್ಯಾಯಾಲಯದ ಕರ್ತವ್ಯ. ಅವುಗಳನ್ನು ಅರಿತು ಸಂವಿಧಾನದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೇ ಹೊರತು, ಒಂದರ ಮೇಲೆ ಮತ್ತೊಂದು ಸವಾರಿ ಮಾಡಲು ಹೋಗಬಾರದು. ಇತ್ತೀಚೆಗೆ ಉಪರಾಷ್ಟ್ರಪತಿ-ಗಳು ಹಾಗೂ ಕೇಂದ್ರದ ಕಾನೂನು ಸಚಿವರೇ ಕೊಲಿಜಿಯಂ ವಿರುದ್ಧ ಬಹಿರಂಗವಾಗಿ ಮಾತನಾಡುತ್ತಿರುವುದು ಮತ್ತು ಸುಪ್ರೀಂ ಕೋರ್ಟ್ ಕೊಲಿಜಿಯಂ ಅನ್ನು ಸಮರ್ಥಿಸಿಕೊಳ್ಳುತ್ತಿರುವುದು ಶಾಸಕಾಂಗ ಹಾಗೂ ನ್ಯಾಯಾಂಗದ ನಡುವಿನ ಶೀತಲ ಸಮರಕ್ಕೆ ಸಾಕ್ಷಿಯಾಗಿದೆ. ಕೊಲಿಜಿಯಂ ಅಂದರೆ ಉನ್ನತ ನ್ಯಾಯಾಲಯಗಳ ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆ ನಡೆಸುವ ವ್ಯವಸ್ಥೆ. ಕೇಂದ್ರ ಸರ್ಕಾರ ಕೊಲಿಜಿಯಂಗೆ ಬದಲಾಗಿ ರಚಿಸಿದ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿಗಳ ಆಯೋಗವನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಸುಪ್ರೀಂ ಕೋರ್ಟ್ ಕೂಡ ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ವ್ಯವಸ್ಥೆ ಅತ್ಯಂತ ಪಾರದರ್ಶಕ, ಅದರ ಹಳಿ ತಪ್ಪಿಸಬೇಡಿ, ಅದು ಈ ನೆಲದ ಕಾನೂನು, ಅದನ್ನು ಅನುಸರಿಸಬೇಕು ಎಂದು ತಾಕೀತು ಮಾಡಿತು. ಬಳಿಕ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು, ಕೊಲಿಜಿಯಂ ವ್ಯವಸ್ಥೆ ಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರತಿನಿಧಿಗಳಿಗೆ ಅವಕಾಶ ಇರಬೇಕೆಂದು ಹೇಳಿರುವುದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸರ್ಕಾರ ನ್ಯಾಯಾಂಗದ ಮೇಲೆ ಹಿಡಿತ ಸಾಧಿಸಲು ಹೊರಟಿದೆ ಎಂದಿರುವುದು ಶೀತಲ ಸಮರವನ್ನು ಜಾಹೀರುಗೊಳಿಸಿದೆ. ಅದೇನೇ ಇರಲಿ ನ್ಯಾಯಮೂರ್ತಿಗಳ ನೇಮಕ ನಿಷ್ಪಕ್ಷಪಾತವಾಗಿ ನಡೆಯಬೇಕು ಮತ್ತು ಕಾನೂನಿನ ಮಾನ್ಯತೆ ಇರುವಂತಹ ಸಂಸ್ಥೆ ಕಾರ್ಯರೂಪಕ್ಕೆ ಬರಬೇಕು.

ಹೃತೀನ್ ಶೆಟ್ಟಿ, ಪತ್ರಿಕೋದ್ಯಮ ವಿಭಾಗ, ಮಾನಸ ಗಂಗೋತ್ರಿ

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

5 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

6 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

7 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

8 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

9 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

10 hours ago