ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 22 ಭಾನುವಾರ 2023

‘ಸುಂದರಿ

ಅಮೆರಿಕದ ಆರ್ಬಾನಿ

ಗೇಬ್ರಿಯಲ್

‘ಭುವನಸುಂದರಿ’ಯಾಗಿ ಆಯ್ಕೆಯಂತೆ.

ಆಗಲಿ-ಆದರೆ

ನಮ್ಮ ನಮ್ಮ ಮನೆಯಾಕೆಯರೇನು ಕಡಿಮೆ?

‘ಭವನ ಸುಂದರಿ’ಯರಲ್ಲವೆ?

-ಸಿಪಿಕೆ, ಮೈಸೂರು


ಡಿ.ಬಿ.ಕುಪ್ಪೆ ಶಾಲೆಗೆ ಆಟದ ಮೈದಾನ ಬೇಕು

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಡಿ.ಬಿ.ಕುಪ್ಪೆ  ಪಂಚಾಯಿತಿ  ವ್ಯಾಪ್ತಿಯಲ್ಲಿ ಗಿರಿಜನ ಹಾಡಿಗಳು ಸೇರಿದಂತೆ ಸುಮಾರು 13ಕ್ಕೂ ಅಧಿಕ ಹಳ್ಳಿಗಳಿದ್ದು, ಇದು  ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಂತಿದೆ. ಈ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ವಿದ್ಯಾರ್ಥಿಗಳಿಗೆ ಕೇವಲ ಒಂದೇ ಒಂದು ಪ್ರೌಢಶಾಲೆ ಈ ವ್ಯಾಪ್ತಿಯಲ್ಲಿದ್ದು, ಈ ಶಾಲೆಯಲ್ಲಿ ಸುಸಜ್ಜಿತ ಆಟದ ಮೈದಾನ ಇಲ್ಲದಂತಾಗಿದೆ. ಇತ್ತೀಚೆಗೆ ಡಿ.ಬಿ.ಕುಪ್ಪೆ ಶಾಲೆಯ ವಿದ್ಯಾರ್ಥಿನಿಯೊಬ್ಬರು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಬಹುಮಾನವನ್ನು ಗೆಲ್ಲುವ ಮೂಲಕ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹೀಗೆ ಸಾಧನೆಯ ಹಾದಿ ಹಿಡಿಯುವ ಮಕ್ಕಳಿಗೆ ಸರಿಯಾಗಿ ಅಭ್ಯಾಸ ಮಾಡಲು ಸರಿಯಾದ ಆಟದ ಮೈದಾನವಿಲ್ಲ .

ಇದೇ ರೀತಿ ಕಳೆದ ವರ್ಷವೂ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ನೂರು ಮೀಟರ್ ಓಟದ ಸ್ಪರ್ಧೆಯಲ್ಲಿ ಡಿ.ಬಿ.ಕುಪ್ಪೆ ಶಾಲೆಯ ವಿದ್ಯಾರ್ಥಿ ಪ್ರಥಮ ಸ್ಥಾನ ಪಡೆದು, ಸರಿಯಾಗಿ ಅಭ್ಯಾಸ ಮಾಡುವುದು ಸಾಧ್ಯವಾಗದೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸೋಲನ್ನು ಅನುಭವಿಸಬೇಕಾಯಿತು. ಇಲ್ಲಿನ ವಿದ್ಯಾರ್ಥಿಗಳ ಕ್ರೀಡಾ ಸಾಧನೆ ಯನ್ನು ಎಲ್ಲರೂ ಪತ್ರಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಲೇ ಇದ್ದರೇ ಹೊರತು ಸಂಬಂಧಪಟ್ಟ ಅಧಿಕಾರಿಗಳು, ಚುನಾಯಿತ ಪ್ರತಿನಿಽಗಳು ಮಾತ್ರ ಈ ಶಾಲೆಗೆ ಒಂದು ಆಟದ ಮೈದಾನವನ್ನು ಕಲ್ಪಿಸಲು ಸಾಧ್ಯವಾಗಿಲ್ಲ ಎಂಬುದು ಬೇಸರದ ಸಂಗತಿಯಾಗಿದೆ. ಇಲ್ಲಿನ ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಅನೇಕ ಬಾರಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ, ಮುಂದಿನ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟವು ಡಿ.ಬಿ.ಕುಪ್ಪೆ ಶಾಲೆಯಲ್ಲೇ ನಡೆಯುವ ಸಾಧ್ಯತೆ ಇದೆ. ಆದರೆ, ಶಾಲೆಯಲ್ಲಿ  ಸುಸಜ್ಜಿತ ಮೈದಾನ ಇಲ್ಲ. ಆದ್ದರಿಂದ ಶಾಲೆಗೆ ಆದಷ್ಟು ಬೇಗ ಮೈದಾನ ಅಭಿವೃದ್ಧಿಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕು.

 ಎಂ.ಕೆ.ಮಲ್ಲೇಶ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.

andolanait

Recent Posts

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

25 seconds ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 mins ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

1 hour ago

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

2 hours ago

ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು : ಸಚಿವ ಖಂಡ್ರೆ ಆಕ್ರೋಶ

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…

3 hours ago

ಸಿಎಂ ಬದಲಾವಣೆ ಸಮಯ ಬಂದಿದೆ: ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…

4 hours ago