ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 25 ಬುಧವಾರ 2023

ಮೈಸೂರು ಜಿಲ್ಲೆಯಲ್ಲಿ ಮಿತಿಮೀರಿದ ಚಿರತೆ ಹಾವಳಿ

ಸುಮಾರು ಮೂರು ತಿಂಗಳಿಂದ ಮೈಸೂರು ಜಿಲ್ಲಾದ್ಯಂತ ಚಿರತೆ ಹಾವಳಿಯು ಅತಿಯಾಗಿದೆ. ತಿ.ನರಸೀಪುರ ತಾಲ್ಲೂಕಿನಲ್ಲೇ ನಾಲ್ವರನ್ನು ಚಿರತೆ ಕೊಂದು ಹಾಕಿರುವುದು ಹೃದಯವಿದ್ರಾವಕ ಸಂಗತಿ. ಮೃತರ ಕುಟುಂಬಸ್ಥರ ನೋವಿಗೆ ಸಮಾಧಾನ ಹೇಳುವುದಾದರೂ ಹೇಗೆ? ಎಂಬ ಪ್ರಶ್ನೆ ಕಾಡುತ್ತದೆ. ಇತ್ತೀಚೆಗೆ ತಿ.ನರಸೀಪುರ ತಾಲ್ಲೂಕಿನ ಕನ್ನನಾಯಕನಹಳ್ಳಿಯ ವೃದ್ಧ ಮಹಿಳೆ ಚಿರತೆ ದಾಳಿಯಿಂದ ಅಸುನೀಗಿದರು. ಅದರ ಮರುದಿನವೇ ಹೊರಳಹಳ್ಳಿಯ ಬಾಲಕನನ್ನು ಚಿರತೆ ಕೊಂದು ಅರೆಬರೆ ತಿಂದು ಹಾಕಿರುವುದು ಎದೆ ನಡುಗಿಸುವಂತಹ ಸಂಗತಿ.

ನಂಜನಗೂಡು ತಾಲ್ಲೂಕಿನ ನಂದಿಗುಂದಪುರದಲ್ಲಿ ಕೂಡ ರೈತರೊಬ್ಬರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ ಎನ್ನಲಾಗಿದೆ. ಇಂತಹ ಘಟನೆಗಳಿಂದ ಕುಟುಂಬದವರು ಹಾಗೂ ಗ್ರಾಮಸ್ಥರ ನೋವು ಮುಗಿಲುಮುಟ್ಟಿದೆ. ಆತಂಕ ಮನೆ ಮಾಡಿದೆ. ಮುಂದಿನ ದಿನಗಳಲ್ಲಾದರೂ ಇಂತಹ ಅಮಾನುಷ ಘಟನೆಗಳು ಸಂಭವಿಸದಂತೆ ಅರಣ್ಯಇಲಾಖೆ ಅಽಕಾರಿಗಳು ಮುಂಜಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಜನರನ್ನು ಪ್ರಾಣಾಪಾಯದಿಂದ ಕಾಪಾಡಲು ಮುಂದಾಗಬೇಕು.

ಕೆ.ಎನ್.ಅನುಶ್ರೀ, ಪತ್ರಿಕೋದ್ಯಮ ವಿಭಾಗ,

ಮಾನಸ ಗಂಗೋತ್ರಿ, ಮೈಸೂರು.

 


ಸರ್ಕಾರದ್ದು ಸಂವಿಧಾನ ವಿರೋಧಿ ನಡೆ

ಪ್ರಸ್ತುತ ದಿನಗಳಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಉಚಿತ ವಾಗಿ ಸಿಗುವಂತಹ ಆಹಾರ ಪದಾರ್ಥ ಗಳನ್ನು ರಾಜ್ಯ ಸರ್ಕಾರವು ಕಸಿದುಕೊಂಡಿರು ವುದು ದೊಡ್ಡ ವಿಪರ್ಯಾಸವೇ ಸರಿ.

ಸಾಮಾನ್ಯವಾಗಿ ರಾಜ್ಯವು ಶೇ.೬೦ ರಷ್ಟು ಬಡ ಜನರನ್ನು ಕೂಲಿ ಕಾರ್ಮಿಕರನ್ನು ಹೊಂದಿದ್ದು, ಹಿಂದುಳಿದಿದೆ. ಹೆಚ್ಚಿನ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಮತ್ತು ಜನಜೀವನ ಹಾಗೂ ಆರ್ಥಿಕ ಸ್ಥಿತಿ ಕುಂಠಿತಗೊಂಡಿದೆ.ಇಷ್ಟೆಲ್ಲ ಸಮಸ್ಯೆಗಳಿದ್ದರೂ ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಕಾರ್ಡುದಾರರಿಗೆ ಉಚಿತವಾಗಿ ಸಿಗಬೇಕಿದ್ದ ಆಹಾರ ಪದಾರ್ಥಗಳನ್ನು ಕಡಿತಗೊಳಿಸಿ ಅಕ್ಕಿಯನ್ನು ಮಾತ್ರ ಕೊಡುತ್ತಿರುವುದು ವಿಪರ್ಯಾಸ.

ಜೀವನಾವಶ್ಯಕ ವಸ್ತುಗಳ ಬೆಲೆ ಪ್ರತಿದಿನ ಏರಿಕೆಯಾಗುತ್ತಿದೆ. ಇದರಿಂದಾಗಿ ಸಾಮಾನ್ಯ ಜನರ ಬದುಕಿನ ಸ್ಥಿತಿಗತಿ ಹೀನಾಯವಾಗುತ್ತಿದೆ. ಭಾರತ ಸಂವಿಧಾನದ ಪ್ರಕಾರ ‘ರಾಜ್ಯ ನೀತಿ ನಿರ್ದೇಶಕ ತತ್ವಗಳಡಿ’ ನೋಡುವುದಾದರೆ ಒಂದು ರಾಜ್ಯದ ನಾಗರಿಕರಿಗೆ ಸದೃಢವಾದ ಮತ್ತು ಪೌಷ್ಟಿಕಾಂಶವಾದ ಆಹಾರವನ್ನು ದೊರಕಿಸುವುದು ರಾಜ್ಯ ಸರ್ಕಾರದ ಹೊಣೆಗಾರಿಕೆ ಆಗಿದೆ.

ಈಗಲಾದರೂ ಸಾರ್ವಜನಿಕರು ಬದಲಾವಣೆಯ ದಾರಿಯನ್ನು ಹಿಡಿಯಬೇಕು, ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಮತ ಚಲಾಯಿಸುವಾಗ ತಮ್ಮ ಮತದ ಮೌಲ್ಯವನ್ನು ಅರಿತುಕೊಳ್ಳಬೇಕು ಹಾಗೂ ತಮ್ಮ ಕುಂದುಕೊರತೆಗಳಿಗೆ ತಮ್ಮ ಜೀವನಕ್ಕೆ ಯಾವುದೇ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು. ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಪ್ರಾಮಾಣಿಕತೆಯಿಂದ ಮತವನ್ನು ಹಾಕಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಗೃತರಾಗಬೇಕು.

– ಜಿ.ಎನ್.ಕಾರ್ತಿಕ್, ವಕೀಲರು, ಮೈಸೂರು.

andolanait

Recent Posts

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

34 mins ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

35 mins ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

2 hours ago

ವಿಜಯೇಂದ್ರ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿ ಇರಲಿದೆ: ವಿಜಯೇಂದ್ರ ಅಭಿಮಾನಿ ಬಳಗದ ಶಶಿಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…

2 hours ago

ಒಳ ಮೀಸಲಾತಿಯಲ್ಲಿರುವ ಗೊಂದಲ ನಿವಾರಣೆ ಮಾಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್‍ಗೆ…

2 hours ago

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…

2 hours ago