ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 25 ಬುಧವಾರ 2023

ಮೈಸೂರು ಜಿಲ್ಲೆಯಲ್ಲಿ ಮಿತಿಮೀರಿದ ಚಿರತೆ ಹಾವಳಿ

ಸುಮಾರು ಮೂರು ತಿಂಗಳಿಂದ ಮೈಸೂರು ಜಿಲ್ಲಾದ್ಯಂತ ಚಿರತೆ ಹಾವಳಿಯು ಅತಿಯಾಗಿದೆ. ತಿ.ನರಸೀಪುರ ತಾಲ್ಲೂಕಿನಲ್ಲೇ ನಾಲ್ವರನ್ನು ಚಿರತೆ ಕೊಂದು ಹಾಕಿರುವುದು ಹೃದಯವಿದ್ರಾವಕ ಸಂಗತಿ. ಮೃತರ ಕುಟುಂಬಸ್ಥರ ನೋವಿಗೆ ಸಮಾಧಾನ ಹೇಳುವುದಾದರೂ ಹೇಗೆ? ಎಂಬ ಪ್ರಶ್ನೆ ಕಾಡುತ್ತದೆ. ಇತ್ತೀಚೆಗೆ ತಿ.ನರಸೀಪುರ ತಾಲ್ಲೂಕಿನ ಕನ್ನನಾಯಕನಹಳ್ಳಿಯ ವೃದ್ಧ ಮಹಿಳೆ ಚಿರತೆ ದಾಳಿಯಿಂದ ಅಸುನೀಗಿದರು. ಅದರ ಮರುದಿನವೇ ಹೊರಳಹಳ್ಳಿಯ ಬಾಲಕನನ್ನು ಚಿರತೆ ಕೊಂದು ಅರೆಬರೆ ತಿಂದು ಹಾಕಿರುವುದು ಎದೆ ನಡುಗಿಸುವಂತಹ ಸಂಗತಿ.

ನಂಜನಗೂಡು ತಾಲ್ಲೂಕಿನ ನಂದಿಗುಂದಪುರದಲ್ಲಿ ಕೂಡ ರೈತರೊಬ್ಬರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ ಎನ್ನಲಾಗಿದೆ. ಇಂತಹ ಘಟನೆಗಳಿಂದ ಕುಟುಂಬದವರು ಹಾಗೂ ಗ್ರಾಮಸ್ಥರ ನೋವು ಮುಗಿಲುಮುಟ್ಟಿದೆ. ಆತಂಕ ಮನೆ ಮಾಡಿದೆ. ಮುಂದಿನ ದಿನಗಳಲ್ಲಾದರೂ ಇಂತಹ ಅಮಾನುಷ ಘಟನೆಗಳು ಸಂಭವಿಸದಂತೆ ಅರಣ್ಯಇಲಾಖೆ ಅಽಕಾರಿಗಳು ಮುಂಜಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಜನರನ್ನು ಪ್ರಾಣಾಪಾಯದಿಂದ ಕಾಪಾಡಲು ಮುಂದಾಗಬೇಕು.

ಕೆ.ಎನ್.ಅನುಶ್ರೀ, ಪತ್ರಿಕೋದ್ಯಮ ವಿಭಾಗ,

ಮಾನಸ ಗಂಗೋತ್ರಿ, ಮೈಸೂರು.

 


ಸರ್ಕಾರದ್ದು ಸಂವಿಧಾನ ವಿರೋಧಿ ನಡೆ

ಪ್ರಸ್ತುತ ದಿನಗಳಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಉಚಿತ ವಾಗಿ ಸಿಗುವಂತಹ ಆಹಾರ ಪದಾರ್ಥ ಗಳನ್ನು ರಾಜ್ಯ ಸರ್ಕಾರವು ಕಸಿದುಕೊಂಡಿರು ವುದು ದೊಡ್ಡ ವಿಪರ್ಯಾಸವೇ ಸರಿ.

ಸಾಮಾನ್ಯವಾಗಿ ರಾಜ್ಯವು ಶೇ.೬೦ ರಷ್ಟು ಬಡ ಜನರನ್ನು ಕೂಲಿ ಕಾರ್ಮಿಕರನ್ನು ಹೊಂದಿದ್ದು, ಹಿಂದುಳಿದಿದೆ. ಹೆಚ್ಚಿನ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಮತ್ತು ಜನಜೀವನ ಹಾಗೂ ಆರ್ಥಿಕ ಸ್ಥಿತಿ ಕುಂಠಿತಗೊಂಡಿದೆ.ಇಷ್ಟೆಲ್ಲ ಸಮಸ್ಯೆಗಳಿದ್ದರೂ ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಕಾರ್ಡುದಾರರಿಗೆ ಉಚಿತವಾಗಿ ಸಿಗಬೇಕಿದ್ದ ಆಹಾರ ಪದಾರ್ಥಗಳನ್ನು ಕಡಿತಗೊಳಿಸಿ ಅಕ್ಕಿಯನ್ನು ಮಾತ್ರ ಕೊಡುತ್ತಿರುವುದು ವಿಪರ್ಯಾಸ.

ಜೀವನಾವಶ್ಯಕ ವಸ್ತುಗಳ ಬೆಲೆ ಪ್ರತಿದಿನ ಏರಿಕೆಯಾಗುತ್ತಿದೆ. ಇದರಿಂದಾಗಿ ಸಾಮಾನ್ಯ ಜನರ ಬದುಕಿನ ಸ್ಥಿತಿಗತಿ ಹೀನಾಯವಾಗುತ್ತಿದೆ. ಭಾರತ ಸಂವಿಧಾನದ ಪ್ರಕಾರ ‘ರಾಜ್ಯ ನೀತಿ ನಿರ್ದೇಶಕ ತತ್ವಗಳಡಿ’ ನೋಡುವುದಾದರೆ ಒಂದು ರಾಜ್ಯದ ನಾಗರಿಕರಿಗೆ ಸದೃಢವಾದ ಮತ್ತು ಪೌಷ್ಟಿಕಾಂಶವಾದ ಆಹಾರವನ್ನು ದೊರಕಿಸುವುದು ರಾಜ್ಯ ಸರ್ಕಾರದ ಹೊಣೆಗಾರಿಕೆ ಆಗಿದೆ.

ಈಗಲಾದರೂ ಸಾರ್ವಜನಿಕರು ಬದಲಾವಣೆಯ ದಾರಿಯನ್ನು ಹಿಡಿಯಬೇಕು, ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಮತ ಚಲಾಯಿಸುವಾಗ ತಮ್ಮ ಮತದ ಮೌಲ್ಯವನ್ನು ಅರಿತುಕೊಳ್ಳಬೇಕು ಹಾಗೂ ತಮ್ಮ ಕುಂದುಕೊರತೆಗಳಿಗೆ ತಮ್ಮ ಜೀವನಕ್ಕೆ ಯಾವುದೇ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು. ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಪ್ರಾಮಾಣಿಕತೆಯಿಂದ ಮತವನ್ನು ಹಾಕಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಗೃತರಾಗಬೇಕು.

– ಜಿ.ಎನ್.ಕಾರ್ತಿಕ್, ವಕೀಲರು, ಮೈಸೂರು.

andolanait

Share
Published by
andolanait

Recent Posts

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

26 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

1 hour ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

4 hours ago