ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 25 ಬುಧವಾರ 2023

ಮೈಸೂರು ಜಿಲ್ಲೆಯಲ್ಲಿ ಮಿತಿಮೀರಿದ ಚಿರತೆ ಹಾವಳಿ

ಸುಮಾರು ಮೂರು ತಿಂಗಳಿಂದ ಮೈಸೂರು ಜಿಲ್ಲಾದ್ಯಂತ ಚಿರತೆ ಹಾವಳಿಯು ಅತಿಯಾಗಿದೆ. ತಿ.ನರಸೀಪುರ ತಾಲ್ಲೂಕಿನಲ್ಲೇ ನಾಲ್ವರನ್ನು ಚಿರತೆ ಕೊಂದು ಹಾಕಿರುವುದು ಹೃದಯವಿದ್ರಾವಕ ಸಂಗತಿ. ಮೃತರ ಕುಟುಂಬಸ್ಥರ ನೋವಿಗೆ ಸಮಾಧಾನ ಹೇಳುವುದಾದರೂ ಹೇಗೆ? ಎಂಬ ಪ್ರಶ್ನೆ ಕಾಡುತ್ತದೆ. ಇತ್ತೀಚೆಗೆ ತಿ.ನರಸೀಪುರ ತಾಲ್ಲೂಕಿನ ಕನ್ನನಾಯಕನಹಳ್ಳಿಯ ವೃದ್ಧ ಮಹಿಳೆ ಚಿರತೆ ದಾಳಿಯಿಂದ ಅಸುನೀಗಿದರು. ಅದರ ಮರುದಿನವೇ ಹೊರಳಹಳ್ಳಿಯ ಬಾಲಕನನ್ನು ಚಿರತೆ ಕೊಂದು ಅರೆಬರೆ ತಿಂದು ಹಾಕಿರುವುದು ಎದೆ ನಡುಗಿಸುವಂತಹ ಸಂಗತಿ.

ನಂಜನಗೂಡು ತಾಲ್ಲೂಕಿನ ನಂದಿಗುಂದಪುರದಲ್ಲಿ ಕೂಡ ರೈತರೊಬ್ಬರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ ಎನ್ನಲಾಗಿದೆ. ಇಂತಹ ಘಟನೆಗಳಿಂದ ಕುಟುಂಬದವರು ಹಾಗೂ ಗ್ರಾಮಸ್ಥರ ನೋವು ಮುಗಿಲುಮುಟ್ಟಿದೆ. ಆತಂಕ ಮನೆ ಮಾಡಿದೆ. ಮುಂದಿನ ದಿನಗಳಲ್ಲಾದರೂ ಇಂತಹ ಅಮಾನುಷ ಘಟನೆಗಳು ಸಂಭವಿಸದಂತೆ ಅರಣ್ಯಇಲಾಖೆ ಅಽಕಾರಿಗಳು ಮುಂಜಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಜನರನ್ನು ಪ್ರಾಣಾಪಾಯದಿಂದ ಕಾಪಾಡಲು ಮುಂದಾಗಬೇಕು.

ಕೆ.ಎನ್.ಅನುಶ್ರೀ, ಪತ್ರಿಕೋದ್ಯಮ ವಿಭಾಗ,

ಮಾನಸ ಗಂಗೋತ್ರಿ, ಮೈಸೂರು.

 


ಸರ್ಕಾರದ್ದು ಸಂವಿಧಾನ ವಿರೋಧಿ ನಡೆ

ಪ್ರಸ್ತುತ ದಿನಗಳಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಉಚಿತ ವಾಗಿ ಸಿಗುವಂತಹ ಆಹಾರ ಪದಾರ್ಥ ಗಳನ್ನು ರಾಜ್ಯ ಸರ್ಕಾರವು ಕಸಿದುಕೊಂಡಿರು ವುದು ದೊಡ್ಡ ವಿಪರ್ಯಾಸವೇ ಸರಿ.

ಸಾಮಾನ್ಯವಾಗಿ ರಾಜ್ಯವು ಶೇ.೬೦ ರಷ್ಟು ಬಡ ಜನರನ್ನು ಕೂಲಿ ಕಾರ್ಮಿಕರನ್ನು ಹೊಂದಿದ್ದು, ಹಿಂದುಳಿದಿದೆ. ಹೆಚ್ಚಿನ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಮತ್ತು ಜನಜೀವನ ಹಾಗೂ ಆರ್ಥಿಕ ಸ್ಥಿತಿ ಕುಂಠಿತಗೊಂಡಿದೆ.ಇಷ್ಟೆಲ್ಲ ಸಮಸ್ಯೆಗಳಿದ್ದರೂ ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಕಾರ್ಡುದಾರರಿಗೆ ಉಚಿತವಾಗಿ ಸಿಗಬೇಕಿದ್ದ ಆಹಾರ ಪದಾರ್ಥಗಳನ್ನು ಕಡಿತಗೊಳಿಸಿ ಅಕ್ಕಿಯನ್ನು ಮಾತ್ರ ಕೊಡುತ್ತಿರುವುದು ವಿಪರ್ಯಾಸ.

ಜೀವನಾವಶ್ಯಕ ವಸ್ತುಗಳ ಬೆಲೆ ಪ್ರತಿದಿನ ಏರಿಕೆಯಾಗುತ್ತಿದೆ. ಇದರಿಂದಾಗಿ ಸಾಮಾನ್ಯ ಜನರ ಬದುಕಿನ ಸ್ಥಿತಿಗತಿ ಹೀನಾಯವಾಗುತ್ತಿದೆ. ಭಾರತ ಸಂವಿಧಾನದ ಪ್ರಕಾರ ‘ರಾಜ್ಯ ನೀತಿ ನಿರ್ದೇಶಕ ತತ್ವಗಳಡಿ’ ನೋಡುವುದಾದರೆ ಒಂದು ರಾಜ್ಯದ ನಾಗರಿಕರಿಗೆ ಸದೃಢವಾದ ಮತ್ತು ಪೌಷ್ಟಿಕಾಂಶವಾದ ಆಹಾರವನ್ನು ದೊರಕಿಸುವುದು ರಾಜ್ಯ ಸರ್ಕಾರದ ಹೊಣೆಗಾರಿಕೆ ಆಗಿದೆ.

ಈಗಲಾದರೂ ಸಾರ್ವಜನಿಕರು ಬದಲಾವಣೆಯ ದಾರಿಯನ್ನು ಹಿಡಿಯಬೇಕು, ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಮತ ಚಲಾಯಿಸುವಾಗ ತಮ್ಮ ಮತದ ಮೌಲ್ಯವನ್ನು ಅರಿತುಕೊಳ್ಳಬೇಕು ಹಾಗೂ ತಮ್ಮ ಕುಂದುಕೊರತೆಗಳಿಗೆ ತಮ್ಮ ಜೀವನಕ್ಕೆ ಯಾವುದೇ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು. ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಪ್ರಾಮಾಣಿಕತೆಯಿಂದ ಮತವನ್ನು ಹಾಕಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಗೃತರಾಗಬೇಕು.

– ಜಿ.ಎನ್.ಕಾರ್ತಿಕ್, ವಕೀಲರು, ಮೈಸೂರು.

andolanait

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

8 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

8 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

9 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

10 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

10 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

13 hours ago