ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 25 ಬುಧವಾರ 2023

ಮೈಸೂರು ಜಿಲ್ಲೆಯಲ್ಲಿ ಮಿತಿಮೀರಿದ ಚಿರತೆ ಹಾವಳಿ

ಸುಮಾರು ಮೂರು ತಿಂಗಳಿಂದ ಮೈಸೂರು ಜಿಲ್ಲಾದ್ಯಂತ ಚಿರತೆ ಹಾವಳಿಯು ಅತಿಯಾಗಿದೆ. ತಿ.ನರಸೀಪುರ ತಾಲ್ಲೂಕಿನಲ್ಲೇ ನಾಲ್ವರನ್ನು ಚಿರತೆ ಕೊಂದು ಹಾಕಿರುವುದು ಹೃದಯವಿದ್ರಾವಕ ಸಂಗತಿ. ಮೃತರ ಕುಟುಂಬಸ್ಥರ ನೋವಿಗೆ ಸಮಾಧಾನ ಹೇಳುವುದಾದರೂ ಹೇಗೆ? ಎಂಬ ಪ್ರಶ್ನೆ ಕಾಡುತ್ತದೆ. ಇತ್ತೀಚೆಗೆ ತಿ.ನರಸೀಪುರ ತಾಲ್ಲೂಕಿನ ಕನ್ನನಾಯಕನಹಳ್ಳಿಯ ವೃದ್ಧ ಮಹಿಳೆ ಚಿರತೆ ದಾಳಿಯಿಂದ ಅಸುನೀಗಿದರು. ಅದರ ಮರುದಿನವೇ ಹೊರಳಹಳ್ಳಿಯ ಬಾಲಕನನ್ನು ಚಿರತೆ ಕೊಂದು ಅರೆಬರೆ ತಿಂದು ಹಾಕಿರುವುದು ಎದೆ ನಡುಗಿಸುವಂತಹ ಸಂಗತಿ.

ನಂಜನಗೂಡು ತಾಲ್ಲೂಕಿನ ನಂದಿಗುಂದಪುರದಲ್ಲಿ ಕೂಡ ರೈತರೊಬ್ಬರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ ಎನ್ನಲಾಗಿದೆ. ಇಂತಹ ಘಟನೆಗಳಿಂದ ಕುಟುಂಬದವರು ಹಾಗೂ ಗ್ರಾಮಸ್ಥರ ನೋವು ಮುಗಿಲುಮುಟ್ಟಿದೆ. ಆತಂಕ ಮನೆ ಮಾಡಿದೆ. ಮುಂದಿನ ದಿನಗಳಲ್ಲಾದರೂ ಇಂತಹ ಅಮಾನುಷ ಘಟನೆಗಳು ಸಂಭವಿಸದಂತೆ ಅರಣ್ಯಇಲಾಖೆ ಅಽಕಾರಿಗಳು ಮುಂಜಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಜನರನ್ನು ಪ್ರಾಣಾಪಾಯದಿಂದ ಕಾಪಾಡಲು ಮುಂದಾಗಬೇಕು.

ಕೆ.ಎನ್.ಅನುಶ್ರೀ, ಪತ್ರಿಕೋದ್ಯಮ ವಿಭಾಗ,

ಮಾನಸ ಗಂಗೋತ್ರಿ, ಮೈಸೂರು.

 


ಸರ್ಕಾರದ್ದು ಸಂವಿಧಾನ ವಿರೋಧಿ ನಡೆ

ಪ್ರಸ್ತುತ ದಿನಗಳಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಉಚಿತ ವಾಗಿ ಸಿಗುವಂತಹ ಆಹಾರ ಪದಾರ್ಥ ಗಳನ್ನು ರಾಜ್ಯ ಸರ್ಕಾರವು ಕಸಿದುಕೊಂಡಿರು ವುದು ದೊಡ್ಡ ವಿಪರ್ಯಾಸವೇ ಸರಿ.

ಸಾಮಾನ್ಯವಾಗಿ ರಾಜ್ಯವು ಶೇ.೬೦ ರಷ್ಟು ಬಡ ಜನರನ್ನು ಕೂಲಿ ಕಾರ್ಮಿಕರನ್ನು ಹೊಂದಿದ್ದು, ಹಿಂದುಳಿದಿದೆ. ಹೆಚ್ಚಿನ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ ಮತ್ತು ಜನಜೀವನ ಹಾಗೂ ಆರ್ಥಿಕ ಸ್ಥಿತಿ ಕುಂಠಿತಗೊಂಡಿದೆ.ಇಷ್ಟೆಲ್ಲ ಸಮಸ್ಯೆಗಳಿದ್ದರೂ ಬಿಪಿಎಲ್ (ಆದ್ಯತಾ ಪಡಿತರ ಚೀಟಿ) ಕಾರ್ಡುದಾರರಿಗೆ ಉಚಿತವಾಗಿ ಸಿಗಬೇಕಿದ್ದ ಆಹಾರ ಪದಾರ್ಥಗಳನ್ನು ಕಡಿತಗೊಳಿಸಿ ಅಕ್ಕಿಯನ್ನು ಮಾತ್ರ ಕೊಡುತ್ತಿರುವುದು ವಿಪರ್ಯಾಸ.

ಜೀವನಾವಶ್ಯಕ ವಸ್ತುಗಳ ಬೆಲೆ ಪ್ರತಿದಿನ ಏರಿಕೆಯಾಗುತ್ತಿದೆ. ಇದರಿಂದಾಗಿ ಸಾಮಾನ್ಯ ಜನರ ಬದುಕಿನ ಸ್ಥಿತಿಗತಿ ಹೀನಾಯವಾಗುತ್ತಿದೆ. ಭಾರತ ಸಂವಿಧಾನದ ಪ್ರಕಾರ ‘ರಾಜ್ಯ ನೀತಿ ನಿರ್ದೇಶಕ ತತ್ವಗಳಡಿ’ ನೋಡುವುದಾದರೆ ಒಂದು ರಾಜ್ಯದ ನಾಗರಿಕರಿಗೆ ಸದೃಢವಾದ ಮತ್ತು ಪೌಷ್ಟಿಕಾಂಶವಾದ ಆಹಾರವನ್ನು ದೊರಕಿಸುವುದು ರಾಜ್ಯ ಸರ್ಕಾರದ ಹೊಣೆಗಾರಿಕೆ ಆಗಿದೆ.

ಈಗಲಾದರೂ ಸಾರ್ವಜನಿಕರು ಬದಲಾವಣೆಯ ದಾರಿಯನ್ನು ಹಿಡಿಯಬೇಕು, ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಮತ ಚಲಾಯಿಸುವಾಗ ತಮ್ಮ ಮತದ ಮೌಲ್ಯವನ್ನು ಅರಿತುಕೊಳ್ಳಬೇಕು ಹಾಗೂ ತಮ್ಮ ಕುಂದುಕೊರತೆಗಳಿಗೆ ತಮ್ಮ ಜೀವನಕ್ಕೆ ಯಾವುದೇ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳುವ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು. ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಪ್ರಾಮಾಣಿಕತೆಯಿಂದ ಮತವನ್ನು ಹಾಕಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರು ಜಗೃತರಾಗಬೇಕು.

– ಜಿ.ಎನ್.ಕಾರ್ತಿಕ್, ವಕೀಲರು, ಮೈಸೂರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

20 mins ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

2 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

3 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago