ಅಧಿಕಾರ ಬಯಸುವ ಪಕ್ಷಗಳು ಉದ್ಯೋಗದ ಭರವಸೆ ನೀಡಲಿ
ಕರ್ನಾಟಕದಲ್ಲೀಗ 2022ರ ಚುನಾವಣೆ ಸಂದರ್ಭ. ಚುನಾವಣೆ ಸಮೀಪಸುತ್ತಿದ್ದಂತೆ ಎಲ್ಲ ರಾಜಕೀಯ ಪಕ್ಷಗಳವರೂ ತಂತಮ್ಮ ಪಕ್ಷಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಭರವಸೆಗಳನ್ನು ನೀಡುತ್ತಿದ್ದಾರೆ. ಒಂದು ಪಕ್ಷ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಮಹಿಳಾ ಯಜಮಾನಿಗೆ ಮಾಸಿಕ 2,000 ರೂ., 1೦ ಕೆ.ಜಿ. ಅಕ್ಕಿ ಕೊಡುವ ಭರವಸೆ ನೀಡಿದರೆ, ಮತ್ತೊಂದು ಪಕ್ಷದವರು ‘ಲವ್ ಜಿಹಾದ್’, ‘ಆಜಾನ್, ‘ಹಿಜಾಬ್’, ‘ಹಲಾಲ್’ ಇಲ್ಲವಾಗಿಸಿ ‘ಹಿಂದುತ್ವ’ ಸ್ಥಾಪಿಸುತ್ತೇವೆ ಎನ್ನುತ್ತಾರೆ. ಮತ್ತೊಂದು ಪಕ್ಷದವರು ಜಲಧಾರೆ, ಪಂಚ ರತ್ನ ಯಾತ್ರೆ ಎನ್ನುತ್ತಾ ಮತದಾರರ ಮನ ಮುಟ್ಟಲು ಪ್ರಯತ್ನಿಸುತ್ತಿದ್ದಾರೆ. ಆದರೆ ಈ ಮೂರೂ ಪಕ್ಷಗಳಲ್ಲಿ ಯಾವ ಪಕ್ಷದವರೂ ನಾವು ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಕುಟುಂಬದ ಯುವಕ, ಯುವತಿಯರಿಗೆ ಅವರ ಅರ್ಹತೆಗೆ ತಕ್ಕಂತೆ ಸರ್ಕಾರಿ ನೌಕರಿಯನ್ನು ನೀಡುತ್ತೇವೆ ಎಂದು ಏಕೆ ಹೇಳುವುದಿಲ್ಲ? ಯುವ ಜನತೆಗೆ ಉದ್ಯೋಗ ನೀಡಿದರೆ ಅಽಕಾರಕ್ಕೆ ಬರುವ ಯಾವ ಸರ್ಕಾರವೂ ಯಾವ ಸೌಲಭ್ಯವನ್ನೂ ಉಚಿತವಾಗಿ ನೀಡುವ ಅನಿರ್ವಾತೆಯೇ ಇರುವುದಿಲ್ಲ. ಉದ್ಯೋಗ ನೀಡಿದರೆ ಸಾಕು ಯುವಜನತೆ ಉತ್ತಮ ಜೀವನವನ್ನು ಕಟ್ಟಿಕೊಳ್ಳುತ್ತಾರೆ. ಆ ಸಾಮರ್ಥ್ಯವನ್ನು ಅವರು ಹೊಂದುತ್ತಾರೆ. ಆದ್ದರಿಂದ ಸ್ವಾವಲಂಬ ನೆಯ, ಸ್ವಾಭಿಮಾನದ ಬದುಕನ್ನು ನೀಡುವಲ್ಲಿ ರಾಜಕೀಯ ಪಕ್ಷಗಳು ಮುಂದಾಗಬೇಕು. ತಾತ್ಕಾಲಿಕ ಬದಲಾವಣೆಗಳ ಬದಲು ಶಾಶ್ವತ ಪರಿಹಾರವನ್ನು ನೀಡುವ ಮೂಲಕ ಜನರ ಬದುಕನ್ನು ಸುಧಾರಿಸ ಬೇಕು. ಇದಕ್ಕಾಗಿ ಉದ್ಯೋಗ ನೀಡುವ ಕಡೆ ಆಲೋಚಿಸಬೇಕಿದೆ.
–ಮಾರುತಿ ನಡಿವಿಮನೆ, ಸಂಶೋಧನಾ ವಿದ್ಯಾರ್ಥಿ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಮಾನಸಗಂಗೋತ್ರಿ
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…