ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 01 ಬುಧವಾರ 2023

ಭತ್ತದ ಖರೀದಿ ಕೇಂದ್ರ ತೆರೆಯಲು ವಿಳಂಬ ಏಕೆ?

ರಾಜ್ಯದಲ್ಲಿ ಭತ್ತದ ಕಣಜ ಎಂಬ ಹೆಸರು ಪಡೆದುಕೊಂಡಿರುವ ಕೃಷ್ಣರಾಜನಗರ ತಾಲ್ಲೂಕಿನಲ್ಲಿ ಭತ್ತ ಬೆಳೆದ ರೈತರು, ಅದರ ಮಾರಾಟಕ್ಕೆ ಒಂದು ಸೂಕ್ತ ಭತ್ತ ಖರೀದಿ ಕೇಂದ್ರವಿಲ್ಲದೆ ಪರದಾಡುವಂತಾಗಿದೆ. ತಾಲ್ಲೂಕಿನಲ್ಲಿ ಶೇ.70 ರಷ್ಟು ರೈತರು ಸಾಕಷ್ಟು ಖರ್ಚು ಮಾಡಿ ಮುಖ್ಯ ಬೆಳೆಯಾಗಿ ಭತ್ತವನ್ನು ಬೆಳೆಯುತ್ತಾರೆ. ಆದರೆ ಭತ್ತಕ್ಕೆ ಸೂಕ್ತ ಬೆಲೆ ಸಿಗದೆ ಪರದಾಡುವಂತಾಗಿದೆ. ಇದರೊಂದಿಗೆ ಭತ್ತದ ಕೆಲಸಗಳು ಮುಗಿದು ಎರಡು ತಿಂಗಳುಗಳಾದರೂ ತಾಲ್ಲೂಕಿನ ಯಾವ ಭಾಗದಲ್ಲೂ ಖರೀದಿ ಕೇಂದ್ರವನ್ನು ತಾಲ್ಲೂಕು ಮತ್ತು ಜಿಲ್ಲಾಡಳಿತ ತೆರೆಯದೇ ಇರುವುದು ರೈತರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಸರ್ಕಾರ ಕ್ವಿಂಟಾಲ್ ಭತ್ತಕ್ಕೆ ̧2000 ರೂ. ಬೆಲೆ ನಿಗದಿ ಮಾಡಿದ್ದರೂ, ರೈತರಿಗೆ ಆ ಬೆಲೆ ಸಿಗದೆ, ಮಧ್ಯವರ್ತಿಗಳ ಪಾಲಾಗುತ್ತಿದೆ ಎನ್ನಲಾಗಿದೆ. ರೈತರು ತಮ್ಮ ಬೆಳೆಗಳನ್ನು ರೈಸ್‌ಮಿಲ್‌ಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಾಲ್ಲೂಕಿನಲ್ಲಿ ಭತ್ತ ಖರೀದಿ ಕೇಂದ್ರವನ್ನು ತೆರೆದು ಸರ್ಕಾರದ ನಿಗದಿಪಡಿಸಿರುವ ಬೆಲೆಯನ್ನು ನೀಡಲು ಕ್ರಮ ಕೈಗೊಳ್ಳಬೇಕು.

ನವೀನ್ ಹಾಡ್ಯ, ಕೃಷ್ಣರಾಜನಗರ ತಾಲ್ಲೂಕು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

13 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

13 hours ago