ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 01 ಬುಧವಾರ 2023

ಭತ್ತದ ಖರೀದಿ ಕೇಂದ್ರ ತೆರೆಯಲು ವಿಳಂಬ ಏಕೆ?

ರಾಜ್ಯದಲ್ಲಿ ಭತ್ತದ ಕಣಜ ಎಂಬ ಹೆಸರು ಪಡೆದುಕೊಂಡಿರುವ ಕೃಷ್ಣರಾಜನಗರ ತಾಲ್ಲೂಕಿನಲ್ಲಿ ಭತ್ತ ಬೆಳೆದ ರೈತರು, ಅದರ ಮಾರಾಟಕ್ಕೆ ಒಂದು ಸೂಕ್ತ ಭತ್ತ ಖರೀದಿ ಕೇಂದ್ರವಿಲ್ಲದೆ ಪರದಾಡುವಂತಾಗಿದೆ. ತಾಲ್ಲೂಕಿನಲ್ಲಿ ಶೇ.70 ರಷ್ಟು ರೈತರು ಸಾಕಷ್ಟು ಖರ್ಚು ಮಾಡಿ ಮುಖ್ಯ ಬೆಳೆಯಾಗಿ ಭತ್ತವನ್ನು ಬೆಳೆಯುತ್ತಾರೆ. ಆದರೆ ಭತ್ತಕ್ಕೆ ಸೂಕ್ತ ಬೆಲೆ ಸಿಗದೆ ಪರದಾಡುವಂತಾಗಿದೆ. ಇದರೊಂದಿಗೆ ಭತ್ತದ ಕೆಲಸಗಳು ಮುಗಿದು ಎರಡು ತಿಂಗಳುಗಳಾದರೂ ತಾಲ್ಲೂಕಿನ ಯಾವ ಭಾಗದಲ್ಲೂ ಖರೀದಿ ಕೇಂದ್ರವನ್ನು ತಾಲ್ಲೂಕು ಮತ್ತು ಜಿಲ್ಲಾಡಳಿತ ತೆರೆಯದೇ ಇರುವುದು ರೈತರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಸರ್ಕಾರ ಕ್ವಿಂಟಾಲ್ ಭತ್ತಕ್ಕೆ ̧2000 ರೂ. ಬೆಲೆ ನಿಗದಿ ಮಾಡಿದ್ದರೂ, ರೈತರಿಗೆ ಆ ಬೆಲೆ ಸಿಗದೆ, ಮಧ್ಯವರ್ತಿಗಳ ಪಾಲಾಗುತ್ತಿದೆ ಎನ್ನಲಾಗಿದೆ. ರೈತರು ತಮ್ಮ ಬೆಳೆಗಳನ್ನು ರೈಸ್‌ಮಿಲ್‌ಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಾಲ್ಲೂಕಿನಲ್ಲಿ ಭತ್ತ ಖರೀದಿ ಕೇಂದ್ರವನ್ನು ತೆರೆದು ಸರ್ಕಾರದ ನಿಗದಿಪಡಿಸಿರುವ ಬೆಲೆಯನ್ನು ನೀಡಲು ಕ್ರಮ ಕೈಗೊಳ್ಳಬೇಕು.

ನವೀನ್ ಹಾಡ್ಯ, ಕೃಷ್ಣರಾಜನಗರ ತಾಲ್ಲೂಕು.

andolanait

Recent Posts

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…

50 mins ago

ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆ: ಆತಂಕದಲ್ಲಿ ರೈತರು

ಬೆಂಗಳೂರು: ಒಂದೆಡೆ ಜೂನ್‍ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ…

1 hour ago

ನಾನು ಜೆಡಿಎಸ್‌ಗೆ ಹೋಗ್ತೀನಿ ಅನ್ನೋದು ಊಹಾಪೋಹ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಬಿಟ್ಟುಬಂದಿರುವ ನಾನು ಮತ್ತೆ ಆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ. ಇಂತಹ ವಿಚಾರಗಳು ಊಹಾಪೋಹ ಹಾಗೂ…

1 hour ago

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು: ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಟಿ.ನರಸೀಪುರ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು ಜಿಲ್ಲೆ ತಲಕಾಡಿನ…

2 hours ago

ಹನೂರು: ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಆನೆಗೆ ಮುಂದುವರೆದ ಚಿಕಿತ್ಸೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಣೆ ಮಾಡಿ…

2 hours ago

ರಾಜ್ಯಾದ್ಯಂತ ಇನ್ನೊಂದು ವಾರ ಹೆಚ್ಚಾಗಲಿದೆ ರಣ ಬಿಸಿಲು

ಬೆಂಗಳೂರು: ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲಿ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರುನಾಡು ಬಿಸಿಲ ಧಗೆಗೆ ಬಳಲಿ…

2 hours ago