ಭತ್ತದ ಖರೀದಿ ಕೇಂದ್ರ ತೆರೆಯಲು ವಿಳಂಬ ಏಕೆ?
ರಾಜ್ಯದಲ್ಲಿ ಭತ್ತದ ಕಣಜ ಎಂಬ ಹೆಸರು ಪಡೆದುಕೊಂಡಿರುವ ಕೃಷ್ಣರಾಜನಗರ ತಾಲ್ಲೂಕಿನಲ್ಲಿ ಭತ್ತ ಬೆಳೆದ ರೈತರು, ಅದರ ಮಾರಾಟಕ್ಕೆ ಒಂದು ಸೂಕ್ತ ಭತ್ತ ಖರೀದಿ ಕೇಂದ್ರವಿಲ್ಲದೆ ಪರದಾಡುವಂತಾಗಿದೆ. ತಾಲ್ಲೂಕಿನಲ್ಲಿ ಶೇ.70 ರಷ್ಟು ರೈತರು ಸಾಕಷ್ಟು ಖರ್ಚು ಮಾಡಿ ಮುಖ್ಯ ಬೆಳೆಯಾಗಿ ಭತ್ತವನ್ನು ಬೆಳೆಯುತ್ತಾರೆ. ಆದರೆ ಭತ್ತಕ್ಕೆ ಸೂಕ್ತ ಬೆಲೆ ಸಿಗದೆ ಪರದಾಡುವಂತಾಗಿದೆ. ಇದರೊಂದಿಗೆ ಭತ್ತದ ಕೆಲಸಗಳು ಮುಗಿದು ಎರಡು ತಿಂಗಳುಗಳಾದರೂ ತಾಲ್ಲೂಕಿನ ಯಾವ ಭಾಗದಲ್ಲೂ ಖರೀದಿ ಕೇಂದ್ರವನ್ನು ತಾಲ್ಲೂಕು ಮತ್ತು ಜಿಲ್ಲಾಡಳಿತ ತೆರೆಯದೇ ಇರುವುದು ರೈತರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಸರ್ಕಾರ ಕ್ವಿಂಟಾಲ್ ಭತ್ತಕ್ಕೆ ̧2000 ರೂ. ಬೆಲೆ ನಿಗದಿ ಮಾಡಿದ್ದರೂ, ರೈತರಿಗೆ ಆ ಬೆಲೆ ಸಿಗದೆ, ಮಧ್ಯವರ್ತಿಗಳ ಪಾಲಾಗುತ್ತಿದೆ ಎನ್ನಲಾಗಿದೆ. ರೈತರು ತಮ್ಮ ಬೆಳೆಗಳನ್ನು ರೈಸ್ಮಿಲ್ಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಆದ್ದರಿಂದ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಾಲ್ಲೂಕಿನಲ್ಲಿ ಭತ್ತ ಖರೀದಿ ಕೇಂದ್ರವನ್ನು ತೆರೆದು ಸರ್ಕಾರದ ನಿಗದಿಪಡಿಸಿರುವ ಬೆಲೆಯನ್ನು ನೀಡಲು ಕ್ರಮ ಕೈಗೊಳ್ಳಬೇಕು.
–ನವೀನ್ ಹಾಡ್ಯ, ಕೃಷ್ಣರಾಜನಗರ ತಾಲ್ಲೂಕು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…