Mysore
27
few clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಆಂದೋಲನ ಓದುಗರ ಪತ್ರ: 02 ಗುರುವಾರ 2023

ನಿಷೇಧಿತ ಚಿತ್ರ ಪ್ರದರ್ಶನ ಒಳ್ಳೆಯ ಬೆಳವಣಿಗೆಯಲ್ಲ

ಬಿ.ಬಿ.ಸಿ. ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಹೊಸದಿಲ್ಲಿಯ ಜೆಎನ್‌ಯು, ಅಂಬೇಡ್ಕರ್ ವಿ.ವಿ, ಜಾಮಿಯಾ ವಿವಿ, ಹೈದರಾಬಾದ್ ವಿವಿ, ಕೊಲ್ಕತ್ತಾದ ಜೋಧಪುರ ವಿವಿ, ತಮಿಳುನಾಡು, ಕೇರಳದ ಅನೇಕ ವಿವಿಗಳು ಕೇಂದ್ರ ಸರ್ಕಾರದ ನಿರ್ಧಾರವನ್ನು ಧಿಕ್ಕರಿಸಿ ಪ್ರದರ್ಶನ ಏರ್ಪಡಿಸುತ್ತಿರುವುದು ಖಂಡನೀಯ. ರಿಚರ್ಡ್ ಕುಕ್ಸನ್ ಹಾಗೂ ಮೈಕ್ ರೇಡ್ ಫೋರ್ಡ್ ರವರು 2002ರ ಗೋಧ್ರಾ, ಮತ್ತು ಗೋಧ್ರೋತ್ತರ ಹತ್ಯಾಕಾಂಡಗಳ ಕುರಿತು 21 ವರ್ಷಗಳ ನಂತರ ಸಾಕ್ಷ್ಯಚಿತ್ರ ನಿರ್ಮಿಸಿರುವುದರ ಹಿಂದೆ ಯಾರದೋ ಕೈವಾಡವಿರುವ ಬಗ್ಗೆ ಅನುಮಾನ ಮೂಡುತ್ತದೆ. ಇಷ್ಟು ವರ್ಷ ಸುಮ್ಮನಿದ್ದವರಿಗೆ ಬಿಜೆಪಿ ಸರ್ಕಾರದ ೮ ವರ್ಷದ ಆಳ್ವಿಕೆಯ ನಂತರ ಹಾಗೂ ಮುಂದಿನ ಲೋಕಸಭಾ ಚುನಾವಣೆ ಒಂದು ವರ್ಷವಿರುವಾಗ ಏಕೆ ನೆನಪಾಯಿತು ಎಂಬ ಪ್ರಶ್ನೆ ಕೂಡ ಉದ್ಭವಿಸುವಂತೆ ಮಾಡಿದೆ. ಭಾರತದಲ್ಲಿ ಕೆಲ ವಿದ್ಯಾರ್ಥಿ ಸಂಘಟನೆಗಳು ಕೇಂದ್ರ ಸರ್ಕಾರ ನಿಷೇಽಸಿರುವ ಚಿತ್ರವನ್ನು ಪ್ರದರ್ಶನ ಮಾಡಲು ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ.

ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!