ನಿಷೇಧಿತ ಚಿತ್ರ ಪ್ರದರ್ಶನ ಒಳ್ಳೆಯ ಬೆಳವಣಿಗೆಯಲ್ಲ
ಬಿ.ಬಿ.ಸಿ. ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಹೊಸದಿಲ್ಲಿಯ ಜೆಎನ್ಯು, ಅಂಬೇಡ್ಕರ್ ವಿ.ವಿ, ಜಾಮಿಯಾ ವಿವಿ, ಹೈದರಾಬಾದ್ ವಿವಿ, ಕೊಲ್ಕತ್ತಾದ ಜೋಧಪುರ ವಿವಿ, ತಮಿಳುನಾಡು, ಕೇರಳದ ಅನೇಕ ವಿವಿಗಳು ಕೇಂದ್ರ ಸರ್ಕಾರದ ನಿರ್ಧಾರವನ್ನು ಧಿಕ್ಕರಿಸಿ ಪ್ರದರ್ಶನ ಏರ್ಪಡಿಸುತ್ತಿರುವುದು ಖಂಡನೀಯ. ರಿಚರ್ಡ್ ಕುಕ್ಸನ್ ಹಾಗೂ ಮೈಕ್ ರೇಡ್ ಫೋರ್ಡ್ ರವರು 2002ರ ಗೋಧ್ರಾ, ಮತ್ತು ಗೋಧ್ರೋತ್ತರ ಹತ್ಯಾಕಾಂಡಗಳ ಕುರಿತು 21 ವರ್ಷಗಳ ನಂತರ ಸಾಕ್ಷ್ಯಚಿತ್ರ ನಿರ್ಮಿಸಿರುವುದರ ಹಿಂದೆ ಯಾರದೋ ಕೈವಾಡವಿರುವ ಬಗ್ಗೆ ಅನುಮಾನ ಮೂಡುತ್ತದೆ. ಇಷ್ಟು ವರ್ಷ ಸುಮ್ಮನಿದ್ದವರಿಗೆ ಬಿಜೆಪಿ ಸರ್ಕಾರದ ೮ ವರ್ಷದ ಆಳ್ವಿಕೆಯ ನಂತರ ಹಾಗೂ ಮುಂದಿನ ಲೋಕಸಭಾ ಚುನಾವಣೆ ಒಂದು ವರ್ಷವಿರುವಾಗ ಏಕೆ ನೆನಪಾಯಿತು ಎಂಬ ಪ್ರಶ್ನೆ ಕೂಡ ಉದ್ಭವಿಸುವಂತೆ ಮಾಡಿದೆ. ಭಾರತದಲ್ಲಿ ಕೆಲ ವಿದ್ಯಾರ್ಥಿ ಸಂಘಟನೆಗಳು ಕೇಂದ್ರ ಸರ್ಕಾರ ನಿಷೇಽಸಿರುವ ಚಿತ್ರವನ್ನು ಪ್ರದರ್ಶನ ಮಾಡಲು ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ.
ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು.
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ 106ನೇ ಘಟಿಕೋತ್ಸವವು ಜ.5ರಂದು ಬೆಳಿಗ್ಗೆ 11:30ಕ್ಕೆ ಕ್ರಾಫರ್ಡ್ ಭವನದಲ್ಲಿ ನಡೆಯಲಿದೆ. ಒಟ್ಟು 30,966 ವಿದ್ಯಾರ್ಥಿಗಳಿಗೆ…
ಬಳ್ಳಾರಿ : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಕಟ್ಟುವ ವಿಚಾರವಾಗಿ ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ…
ಕೊಳ್ಳೇಗಾಲ : ಸುಪ್ರಸಿದ್ಧ ಚಿಕ್ಕಲ್ಲೂರು ಸಿದ್ದಪ್ಪಾಜಿ ಜಾತ್ರೆಯಲ್ಲಿ ಮೊದಲನೇ ದಿನವಾದ ಶನಿವಾರ ತಡರಾತ್ರಿ ಚಂದ್ರ ಮಂಡಲೋತ್ಸವದ ಮೂಲಕ ವಿದ್ಯುಕ್ತ ಚಾಲನೆ…
ಹೊಸದಿಲ್ಲಿ : ವೇಗ, ಸೌಲಭ್ಯ, ಆರಾಮಕ್ಕಾಗಿಯೇ ಜನಪ್ರಿಯವಾಗಿರುವ ವಂದೇ ಭಾರತ್ ಇದೀಗ ಸ್ಲೀಪರ್ ಆವೃತ್ತಿ ಮೂಲಕವೂ ಹಳಿಗಿಳಿಯಲು ಸಜ್ಜಾಗಿದೆ. ಪ್ರಯಾಣಿಕರ…
ರಾಯಚೂರು : ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮ-ನರೇಗಾ) ಕಾಯ್ದೆಯನ್ನು ಹೊಸ ಹೆಸರಲ್ಲಿ ಹೊಸ ಕಾಯ್ದೆಯೆಂದು ಘೋಷಿಸಿರುವ…
ಕ್ಯಾರಕಾಸ್ : ವೆನೆಜುವೆಲಾ ಮೇಲಿನ ವೈಮಾನಿಕ ದಾಳಿ ಬಳಿಕ ಅಮೆರಿಕ ಪಡೆಗಳು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು…