ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 02 ಗುರುವಾರ 2023

ನಿಷೇಧಿತ ಚಿತ್ರ ಪ್ರದರ್ಶನ ಒಳ್ಳೆಯ ಬೆಳವಣಿಗೆಯಲ್ಲ

ಬಿ.ಬಿ.ಸಿ. ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಹೊಸದಿಲ್ಲಿಯ ಜೆಎನ್‌ಯು, ಅಂಬೇಡ್ಕರ್ ವಿ.ವಿ, ಜಾಮಿಯಾ ವಿವಿ, ಹೈದರಾಬಾದ್ ವಿವಿ, ಕೊಲ್ಕತ್ತಾದ ಜೋಧಪುರ ವಿವಿ, ತಮಿಳುನಾಡು, ಕೇರಳದ ಅನೇಕ ವಿವಿಗಳು ಕೇಂದ್ರ ಸರ್ಕಾರದ ನಿರ್ಧಾರವನ್ನು ಧಿಕ್ಕರಿಸಿ ಪ್ರದರ್ಶನ ಏರ್ಪಡಿಸುತ್ತಿರುವುದು ಖಂಡನೀಯ. ರಿಚರ್ಡ್ ಕುಕ್ಸನ್ ಹಾಗೂ ಮೈಕ್ ರೇಡ್ ಫೋರ್ಡ್ ರವರು 2002ರ ಗೋಧ್ರಾ, ಮತ್ತು ಗೋಧ್ರೋತ್ತರ ಹತ್ಯಾಕಾಂಡಗಳ ಕುರಿತು 21 ವರ್ಷಗಳ ನಂತರ ಸಾಕ್ಷ್ಯಚಿತ್ರ ನಿರ್ಮಿಸಿರುವುದರ ಹಿಂದೆ ಯಾರದೋ ಕೈವಾಡವಿರುವ ಬಗ್ಗೆ ಅನುಮಾನ ಮೂಡುತ್ತದೆ. ಇಷ್ಟು ವರ್ಷ ಸುಮ್ಮನಿದ್ದವರಿಗೆ ಬಿಜೆಪಿ ಸರ್ಕಾರದ ೮ ವರ್ಷದ ಆಳ್ವಿಕೆಯ ನಂತರ ಹಾಗೂ ಮುಂದಿನ ಲೋಕಸಭಾ ಚುನಾವಣೆ ಒಂದು ವರ್ಷವಿರುವಾಗ ಏಕೆ ನೆನಪಾಯಿತು ಎಂಬ ಪ್ರಶ್ನೆ ಕೂಡ ಉದ್ಭವಿಸುವಂತೆ ಮಾಡಿದೆ. ಭಾರತದಲ್ಲಿ ಕೆಲ ವಿದ್ಯಾರ್ಥಿ ಸಂಘಟನೆಗಳು ಕೇಂದ್ರ ಸರ್ಕಾರ ನಿಷೇಽಸಿರುವ ಚಿತ್ರವನ್ನು ಪ್ರದರ್ಶನ ಮಾಡಲು ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ.

ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು.

andolanait

Recent Posts

ರೈತರ ಹಿತರಕ್ಷಣೆಗೆ ಕೇಂದ್ರದ ಕದ ತಟ್ಟಿದ ಚಲುವರಾಯಸ್ವಾಮಿ : ತುರ್ತು ಪರಿಹಾರಕ್ಕೆ ಮನವಿ

ಬೆಂಗಳೂರು :  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7)  ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…

7 hours ago

ಮೈಸೂರು | ಪಿಸಿ ಮೇಲೆ ಹಲ್ಲೆ, ಮೊಬೈಲ್‌ ದೋಚಿದ ಖದೀಮರು ; ನಾಲ್ವರ ಬಂಧನ

ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…

7 hours ago

ಫಿಟ್‌ ಮೈಸೂರು ವಾಕ್‌ಥಾನ್‌ಗೆ ಮೈಸೂರು ಸಜ್ಜು

 ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…

7 hours ago

ಹಿಮದಿಂದ ಆವೃತವಾದ ಕೇದರನಾಥ

ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…

7 hours ago

ಹುಲಿ ದಾಳಿಗೆ ಹಸು ಬಲಿ : ವ್ಯಾಘ್ರ ಸೆರೆಗೆ ಗ್ರಾಮಸ್ಥರ ಒತ್ತಾಯ

ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…

7 hours ago

ಹಂತ ಹಂತವಾಗಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ,ಟ್ರಾಮಾ ಸೆಂಟರ್ ಸ್ಥಾಪನೆ : ಸಿಎಂ ಭರವಸೆ

ಹಾವೇರಿ  : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…

8 hours ago