ನಿಷೇಧಿತ ಚಿತ್ರ ಪ್ರದರ್ಶನ ಒಳ್ಳೆಯ ಬೆಳವಣಿಗೆಯಲ್ಲ
ಬಿ.ಬಿ.ಸಿ. ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಹೊಸದಿಲ್ಲಿಯ ಜೆಎನ್ಯು, ಅಂಬೇಡ್ಕರ್ ವಿ.ವಿ, ಜಾಮಿಯಾ ವಿವಿ, ಹೈದರಾಬಾದ್ ವಿವಿ, ಕೊಲ್ಕತ್ತಾದ ಜೋಧಪುರ ವಿವಿ, ತಮಿಳುನಾಡು, ಕೇರಳದ ಅನೇಕ ವಿವಿಗಳು ಕೇಂದ್ರ ಸರ್ಕಾರದ ನಿರ್ಧಾರವನ್ನು ಧಿಕ್ಕರಿಸಿ ಪ್ರದರ್ಶನ ಏರ್ಪಡಿಸುತ್ತಿರುವುದು ಖಂಡನೀಯ. ರಿಚರ್ಡ್ ಕುಕ್ಸನ್ ಹಾಗೂ ಮೈಕ್ ರೇಡ್ ಫೋರ್ಡ್ ರವರು 2002ರ ಗೋಧ್ರಾ, ಮತ್ತು ಗೋಧ್ರೋತ್ತರ ಹತ್ಯಾಕಾಂಡಗಳ ಕುರಿತು 21 ವರ್ಷಗಳ ನಂತರ ಸಾಕ್ಷ್ಯಚಿತ್ರ ನಿರ್ಮಿಸಿರುವುದರ ಹಿಂದೆ ಯಾರದೋ ಕೈವಾಡವಿರುವ ಬಗ್ಗೆ ಅನುಮಾನ ಮೂಡುತ್ತದೆ. ಇಷ್ಟು ವರ್ಷ ಸುಮ್ಮನಿದ್ದವರಿಗೆ ಬಿಜೆಪಿ ಸರ್ಕಾರದ ೮ ವರ್ಷದ ಆಳ್ವಿಕೆಯ ನಂತರ ಹಾಗೂ ಮುಂದಿನ ಲೋಕಸಭಾ ಚುನಾವಣೆ ಒಂದು ವರ್ಷವಿರುವಾಗ ಏಕೆ ನೆನಪಾಯಿತು ಎಂಬ ಪ್ರಶ್ನೆ ಕೂಡ ಉದ್ಭವಿಸುವಂತೆ ಮಾಡಿದೆ. ಭಾರತದಲ್ಲಿ ಕೆಲ ವಿದ್ಯಾರ್ಥಿ ಸಂಘಟನೆಗಳು ಕೇಂದ್ರ ಸರ್ಕಾರ ನಿಷೇಽಸಿರುವ ಚಿತ್ರವನ್ನು ಪ್ರದರ್ಶನ ಮಾಡಲು ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ.
ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…