ನಿಷೇಧಿತ ಚಿತ್ರ ಪ್ರದರ್ಶನ ಒಳ್ಳೆಯ ಬೆಳವಣಿಗೆಯಲ್ಲ
ಬಿ.ಬಿ.ಸಿ. ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವಶ್ಚನ್’ ಸಾಕ್ಷ್ಯ ಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಹೊಸದಿಲ್ಲಿಯ ಜೆಎನ್ಯು, ಅಂಬೇಡ್ಕರ್ ವಿ.ವಿ, ಜಾಮಿಯಾ ವಿವಿ, ಹೈದರಾಬಾದ್ ವಿವಿ, ಕೊಲ್ಕತ್ತಾದ ಜೋಧಪುರ ವಿವಿ, ತಮಿಳುನಾಡು, ಕೇರಳದ ಅನೇಕ ವಿವಿಗಳು ಕೇಂದ್ರ ಸರ್ಕಾರದ ನಿರ್ಧಾರವನ್ನು ಧಿಕ್ಕರಿಸಿ ಪ್ರದರ್ಶನ ಏರ್ಪಡಿಸುತ್ತಿರುವುದು ಖಂಡನೀಯ. ರಿಚರ್ಡ್ ಕುಕ್ಸನ್ ಹಾಗೂ ಮೈಕ್ ರೇಡ್ ಫೋರ್ಡ್ ರವರು 2002ರ ಗೋಧ್ರಾ, ಮತ್ತು ಗೋಧ್ರೋತ್ತರ ಹತ್ಯಾಕಾಂಡಗಳ ಕುರಿತು 21 ವರ್ಷಗಳ ನಂತರ ಸಾಕ್ಷ್ಯಚಿತ್ರ ನಿರ್ಮಿಸಿರುವುದರ ಹಿಂದೆ ಯಾರದೋ ಕೈವಾಡವಿರುವ ಬಗ್ಗೆ ಅನುಮಾನ ಮೂಡುತ್ತದೆ. ಇಷ್ಟು ವರ್ಷ ಸುಮ್ಮನಿದ್ದವರಿಗೆ ಬಿಜೆಪಿ ಸರ್ಕಾರದ ೮ ವರ್ಷದ ಆಳ್ವಿಕೆಯ ನಂತರ ಹಾಗೂ ಮುಂದಿನ ಲೋಕಸಭಾ ಚುನಾವಣೆ ಒಂದು ವರ್ಷವಿರುವಾಗ ಏಕೆ ನೆನಪಾಯಿತು ಎಂಬ ಪ್ರಶ್ನೆ ಕೂಡ ಉದ್ಭವಿಸುವಂತೆ ಮಾಡಿದೆ. ಭಾರತದಲ್ಲಿ ಕೆಲ ವಿದ್ಯಾರ್ಥಿ ಸಂಘಟನೆಗಳು ಕೇಂದ್ರ ಸರ್ಕಾರ ನಿಷೇಽಸಿರುವ ಚಿತ್ರವನ್ನು ಪ್ರದರ್ಶನ ಮಾಡಲು ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ.
ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…