ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 03 ಶುಕ್ರವಾರ 2023

ಭೈರಪ್ಪ ಕುರಿತ ಟೀಕೆ ಸರಿಯಲ್ಲ

ಅಡಗೂರು ವಿಶ್ವನಾಥ್ ಅವರು ಮೊಸರಲ್ಲಿ ಕಲ್ಲು ಹುಡುಕುವ ಜಾಯಮಾನದವರು ಅನಿಸುತ್ತದೆ. ಸಾಹಿತಿ ಎಸ್.ಎಲ್.ಭೈರಪ್ಪನವರು ತಮಗೆ ಕೇಂದ್ರ ಸರ್ಕಾರ ನೀಡಿದ ಪದ್ಮವಿಭೂಷಣ ಪ್ರಶಸ್ತಿಯು, ನರೇಂದ್ರ ಮೋದಿಯವರು ಪ್ರಧಾನಿ ಆದ್ದರಿಂದಲೇ ಲಭಿಸಿತು ಎಂದು ಹೇಳಿರುವುದರಲ್ಲಿ ಉತ್ಪ್ರೇಕ್ಷೆ ಇಲ್ಲ. 92 ವರ್ಷದ ಭೈರಪ್ಪನವರ ಸಾಹಿತ್ಯ ಮತ್ತು ಅವರು ಬರೆದ ಪುಸ್ತಕಗಳು ಇತರ ಭಾಷೆಗಳಿಗೆ ತರ್ಜುಮೆಗೊಂಡು ಅವರು ಒಬ್ಬ ಮಹಾನ್ ಸಾಹಿತಿ ಎಂದು ಗುರುತಿಸಿವೆ. ಹಿಂದಿನ ಸರ್ಕಾ ರಗಳು ಅವರಿಗೆ ಯಾವುದೇ ಪ್ರಶಸ್ತಿ ನೀಡಿ ಗೌರವಿಸಲೇ ಇಲ್ಲ. ಈಗ ಆ ಕೆಲಸವನ್ನು ಮೋದಿ ಸರ್ಕಾರ ಮಾಡಿತು. ಅದಕ್ಕಾಗಿ ಅವರು ತಮ್ಮ ಕೃತಜ್ಞತೆ ಅರ್ಪಿಸಿದ್ದಾರೆ. ಆದರೆ ಮೋದಿಯವರನ್ನು ಓಲೈಸಿರುವುದರಿಂದ ಮುಂದೆ ನಿಮಗೆ ಜ್ಞಾನಪೀಠ ಪ್ರಶಸ್ತಿ ಬರುತ್ತದೆ, ಸ್ವಲ್ಪ ಕಾಯಿರಿ ಎಂದು ಕುಹಕವಾಡಿದ್ದಾರೆ ವಿಶ್ವನಾಥ್. ಜ್ಞಾನಪೀಠ ಪ್ರಶಸ್ತಿ ನೀಡುವುದು ಕೇಂದ್ರ ಸರ್ಕಾರವಲ್ಲ ,ಸಂಸ್ಥೆ ಕೊಡುವ ಪ್ರಶಸ್ತಿ ಎಂದು ವಿಶ್ವನಾಥ್ ಅವರಿಗೆ ತಿಳಿದಿಲ್ಲವೇ? ವಿಶ್ವನಾಥ್‌ರವರು ವಯಸ್ಸಿಗೆ ತಕ್ಕಂತೆ ವರ್ತಿಸಲಿ.

-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು.

ಕಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲಿ

ರೈತರನ್ನು ದೇಶದ ಬೆನ್ನೆಲುಬು ಎನ್ನುತ್ತಾರೆ. ಬೆಳಗಾವಿಯ ವಿಧಾನಸಭೆ ಅಽವೇಶನದಲ್ಲಿ ಸಿದ್ದರಾಮಯ್ಯರವರು ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯದಲ್ಲಿ 7 ಕೋಟಿ ಜನ ಸಂಖ್ಯೆಯಿದ್ದು, ಶೇ.೬೦ರಷ್ಟು ಹಳ್ಳಿಗಳಿವೆ. ಕೃಷಿ ಕ್ಷೇತ್ರ ಸುಮಾರು ಶೇ.50ಲಕ್ಷದಷ್ಟು ಜನರಿಗೆ ಉದ್ಯೋಗ ಕಲ್ಪಿಸಿದೆ. ಸುಮಾರು 3 ಕೋಟಿ ಜನರು ಕೃಷಿ ಅವಲಂಬಿಸಿದ್ದಾರೆ. ಆದರೆ ಸರ್ಕಾರ ಬೆಳೆಗಳಿಗೆ ಸರಿಯಾದ ಬೆಲೆ ನಿಗದಿ ಮಾಡದೆ, ರೈತರು ಸಂಕಷ್ಟ ಎದುರಿಸುವಂತಾಗಿದೆ. ತಮಿಳುನಾಡು, ಪಂಜಾಬ್, ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಟನ್ ಕಬ್ಬಿನ ಬೆಲೆ ನಮ್ಮ ರಾಜ್ಯಕ್ಕಿಂತ ಹೆಚ್ಚಿದೆ. ಕರ್ನಾಟಕದಲ್ಲಿ ಸುಮಾರು 15 ಲಕ್ಷ ಹೆಕ್ಟೇರ್‌ನಲ್ಲ್ಲಿ ಕಬ್ಬು ಬೆಳೆಯುತ್ತಾರೆ. 25 ಲಕ್ಷ ರೈತ ಕುಟುಂಬಗಳು ಕಬ್ಬಿನ ಬೆಲೆಯನ್ನು ಅವಲಂಬಿಸಿವೆ. ಆದ್ದರಿಂದ ರೈತರ ಬೆಳೆಗೆ ವೈಜ್ಞಾನಿಕ ಬೆಲೆಯನ್ನು ನಿರ್ಧರಿಸಿ ರೈತರ ಸಮಸ್ಯೆಯನ್ನು ಸರ್ಕಾರ ಪರಿಹರಿಸಬೇಕಿದೆ.

ಆರ್.ಎಸ್.ಶಶಿ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.

andolanait

Recent Posts

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

1 hour ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

2 hours ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

2 hours ago

ಓದುಗರ ಪತ್ರ; ಸಫಾರಿಗೆ ಅನುಮತಿ ಖಂಡನೀಯ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…

2 hours ago

ತಂಪಾದ ಕೊಡಗಿನಲ್ಲಿಯೂ ಹೆಚ್ಚುತ್ತಿದೆ ತಾಪ

ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…

2 hours ago

ಜೀವವೂ ಉಳಿಯಬೇಕು, ಜೀವನೋಪಾಯವೂ ನಡೆಯಬೇಕು

ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…

2 hours ago