ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 03 ಶುಕ್ರವಾರ 2023

ಭೈರಪ್ಪ ಕುರಿತ ಟೀಕೆ ಸರಿಯಲ್ಲ

ಅಡಗೂರು ವಿಶ್ವನಾಥ್ ಅವರು ಮೊಸರಲ್ಲಿ ಕಲ್ಲು ಹುಡುಕುವ ಜಾಯಮಾನದವರು ಅನಿಸುತ್ತದೆ. ಸಾಹಿತಿ ಎಸ್.ಎಲ್.ಭೈರಪ್ಪನವರು ತಮಗೆ ಕೇಂದ್ರ ಸರ್ಕಾರ ನೀಡಿದ ಪದ್ಮವಿಭೂಷಣ ಪ್ರಶಸ್ತಿಯು, ನರೇಂದ್ರ ಮೋದಿಯವರು ಪ್ರಧಾನಿ ಆದ್ದರಿಂದಲೇ ಲಭಿಸಿತು ಎಂದು ಹೇಳಿರುವುದರಲ್ಲಿ ಉತ್ಪ್ರೇಕ್ಷೆ ಇಲ್ಲ. 92 ವರ್ಷದ ಭೈರಪ್ಪನವರ ಸಾಹಿತ್ಯ ಮತ್ತು ಅವರು ಬರೆದ ಪುಸ್ತಕಗಳು ಇತರ ಭಾಷೆಗಳಿಗೆ ತರ್ಜುಮೆಗೊಂಡು ಅವರು ಒಬ್ಬ ಮಹಾನ್ ಸಾಹಿತಿ ಎಂದು ಗುರುತಿಸಿವೆ. ಹಿಂದಿನ ಸರ್ಕಾ ರಗಳು ಅವರಿಗೆ ಯಾವುದೇ ಪ್ರಶಸ್ತಿ ನೀಡಿ ಗೌರವಿಸಲೇ ಇಲ್ಲ. ಈಗ ಆ ಕೆಲಸವನ್ನು ಮೋದಿ ಸರ್ಕಾರ ಮಾಡಿತು. ಅದಕ್ಕಾಗಿ ಅವರು ತಮ್ಮ ಕೃತಜ್ಞತೆ ಅರ್ಪಿಸಿದ್ದಾರೆ. ಆದರೆ ಮೋದಿಯವರನ್ನು ಓಲೈಸಿರುವುದರಿಂದ ಮುಂದೆ ನಿಮಗೆ ಜ್ಞಾನಪೀಠ ಪ್ರಶಸ್ತಿ ಬರುತ್ತದೆ, ಸ್ವಲ್ಪ ಕಾಯಿರಿ ಎಂದು ಕುಹಕವಾಡಿದ್ದಾರೆ ವಿಶ್ವನಾಥ್. ಜ್ಞಾನಪೀಠ ಪ್ರಶಸ್ತಿ ನೀಡುವುದು ಕೇಂದ್ರ ಸರ್ಕಾರವಲ್ಲ ,ಸಂಸ್ಥೆ ಕೊಡುವ ಪ್ರಶಸ್ತಿ ಎಂದು ವಿಶ್ವನಾಥ್ ಅವರಿಗೆ ತಿಳಿದಿಲ್ಲವೇ? ವಿಶ್ವನಾಥ್‌ರವರು ವಯಸ್ಸಿಗೆ ತಕ್ಕಂತೆ ವರ್ತಿಸಲಿ.

-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು.

ಕಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲಿ

ರೈತರನ್ನು ದೇಶದ ಬೆನ್ನೆಲುಬು ಎನ್ನುತ್ತಾರೆ. ಬೆಳಗಾವಿಯ ವಿಧಾನಸಭೆ ಅಽವೇಶನದಲ್ಲಿ ಸಿದ್ದರಾಮಯ್ಯರವರು ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯದಲ್ಲಿ 7 ಕೋಟಿ ಜನ ಸಂಖ್ಯೆಯಿದ್ದು, ಶೇ.೬೦ರಷ್ಟು ಹಳ್ಳಿಗಳಿವೆ. ಕೃಷಿ ಕ್ಷೇತ್ರ ಸುಮಾರು ಶೇ.50ಲಕ್ಷದಷ್ಟು ಜನರಿಗೆ ಉದ್ಯೋಗ ಕಲ್ಪಿಸಿದೆ. ಸುಮಾರು 3 ಕೋಟಿ ಜನರು ಕೃಷಿ ಅವಲಂಬಿಸಿದ್ದಾರೆ. ಆದರೆ ಸರ್ಕಾರ ಬೆಳೆಗಳಿಗೆ ಸರಿಯಾದ ಬೆಲೆ ನಿಗದಿ ಮಾಡದೆ, ರೈತರು ಸಂಕಷ್ಟ ಎದುರಿಸುವಂತಾಗಿದೆ. ತಮಿಳುನಾಡು, ಪಂಜಾಬ್, ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಟನ್ ಕಬ್ಬಿನ ಬೆಲೆ ನಮ್ಮ ರಾಜ್ಯಕ್ಕಿಂತ ಹೆಚ್ಚಿದೆ. ಕರ್ನಾಟಕದಲ್ಲಿ ಸುಮಾರು 15 ಲಕ್ಷ ಹೆಕ್ಟೇರ್‌ನಲ್ಲ್ಲಿ ಕಬ್ಬು ಬೆಳೆಯುತ್ತಾರೆ. 25 ಲಕ್ಷ ರೈತ ಕುಟುಂಬಗಳು ಕಬ್ಬಿನ ಬೆಲೆಯನ್ನು ಅವಲಂಬಿಸಿವೆ. ಆದ್ದರಿಂದ ರೈತರ ಬೆಳೆಗೆ ವೈಜ್ಞಾನಿಕ ಬೆಲೆಯನ್ನು ನಿರ್ಧರಿಸಿ ರೈತರ ಸಮಸ್ಯೆಯನ್ನು ಸರ್ಕಾರ ಪರಿಹರಿಸಬೇಕಿದೆ.

ಆರ್.ಎಸ್.ಶಶಿ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.

andolanait

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

12 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

12 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

12 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

13 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

14 hours ago