ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 03 ಶುಕ್ರವಾರ 2023

ಭೈರಪ್ಪ ಕುರಿತ ಟೀಕೆ ಸರಿಯಲ್ಲ

ಅಡಗೂರು ವಿಶ್ವನಾಥ್ ಅವರು ಮೊಸರಲ್ಲಿ ಕಲ್ಲು ಹುಡುಕುವ ಜಾಯಮಾನದವರು ಅನಿಸುತ್ತದೆ. ಸಾಹಿತಿ ಎಸ್.ಎಲ್.ಭೈರಪ್ಪನವರು ತಮಗೆ ಕೇಂದ್ರ ಸರ್ಕಾರ ನೀಡಿದ ಪದ್ಮವಿಭೂಷಣ ಪ್ರಶಸ್ತಿಯು, ನರೇಂದ್ರ ಮೋದಿಯವರು ಪ್ರಧಾನಿ ಆದ್ದರಿಂದಲೇ ಲಭಿಸಿತು ಎಂದು ಹೇಳಿರುವುದರಲ್ಲಿ ಉತ್ಪ್ರೇಕ್ಷೆ ಇಲ್ಲ. 92 ವರ್ಷದ ಭೈರಪ್ಪನವರ ಸಾಹಿತ್ಯ ಮತ್ತು ಅವರು ಬರೆದ ಪುಸ್ತಕಗಳು ಇತರ ಭಾಷೆಗಳಿಗೆ ತರ್ಜುಮೆಗೊಂಡು ಅವರು ಒಬ್ಬ ಮಹಾನ್ ಸಾಹಿತಿ ಎಂದು ಗುರುತಿಸಿವೆ. ಹಿಂದಿನ ಸರ್ಕಾ ರಗಳು ಅವರಿಗೆ ಯಾವುದೇ ಪ್ರಶಸ್ತಿ ನೀಡಿ ಗೌರವಿಸಲೇ ಇಲ್ಲ. ಈಗ ಆ ಕೆಲಸವನ್ನು ಮೋದಿ ಸರ್ಕಾರ ಮಾಡಿತು. ಅದಕ್ಕಾಗಿ ಅವರು ತಮ್ಮ ಕೃತಜ್ಞತೆ ಅರ್ಪಿಸಿದ್ದಾರೆ. ಆದರೆ ಮೋದಿಯವರನ್ನು ಓಲೈಸಿರುವುದರಿಂದ ಮುಂದೆ ನಿಮಗೆ ಜ್ಞಾನಪೀಠ ಪ್ರಶಸ್ತಿ ಬರುತ್ತದೆ, ಸ್ವಲ್ಪ ಕಾಯಿರಿ ಎಂದು ಕುಹಕವಾಡಿದ್ದಾರೆ ವಿಶ್ವನಾಥ್. ಜ್ಞಾನಪೀಠ ಪ್ರಶಸ್ತಿ ನೀಡುವುದು ಕೇಂದ್ರ ಸರ್ಕಾರವಲ್ಲ ,ಸಂಸ್ಥೆ ಕೊಡುವ ಪ್ರಶಸ್ತಿ ಎಂದು ವಿಶ್ವನಾಥ್ ಅವರಿಗೆ ತಿಳಿದಿಲ್ಲವೇ? ವಿಶ್ವನಾಥ್‌ರವರು ವಯಸ್ಸಿಗೆ ತಕ್ಕಂತೆ ವರ್ತಿಸಲಿ.

-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು.

ಕಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲಿ

ರೈತರನ್ನು ದೇಶದ ಬೆನ್ನೆಲುಬು ಎನ್ನುತ್ತಾರೆ. ಬೆಳಗಾವಿಯ ವಿಧಾನಸಭೆ ಅಽವೇಶನದಲ್ಲಿ ಸಿದ್ದರಾಮಯ್ಯರವರು ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯದಲ್ಲಿ 7 ಕೋಟಿ ಜನ ಸಂಖ್ಯೆಯಿದ್ದು, ಶೇ.೬೦ರಷ್ಟು ಹಳ್ಳಿಗಳಿವೆ. ಕೃಷಿ ಕ್ಷೇತ್ರ ಸುಮಾರು ಶೇ.50ಲಕ್ಷದಷ್ಟು ಜನರಿಗೆ ಉದ್ಯೋಗ ಕಲ್ಪಿಸಿದೆ. ಸುಮಾರು 3 ಕೋಟಿ ಜನರು ಕೃಷಿ ಅವಲಂಬಿಸಿದ್ದಾರೆ. ಆದರೆ ಸರ್ಕಾರ ಬೆಳೆಗಳಿಗೆ ಸರಿಯಾದ ಬೆಲೆ ನಿಗದಿ ಮಾಡದೆ, ರೈತರು ಸಂಕಷ್ಟ ಎದುರಿಸುವಂತಾಗಿದೆ. ತಮಿಳುನಾಡು, ಪಂಜಾಬ್, ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಟನ್ ಕಬ್ಬಿನ ಬೆಲೆ ನಮ್ಮ ರಾಜ್ಯಕ್ಕಿಂತ ಹೆಚ್ಚಿದೆ. ಕರ್ನಾಟಕದಲ್ಲಿ ಸುಮಾರು 15 ಲಕ್ಷ ಹೆಕ್ಟೇರ್‌ನಲ್ಲ್ಲಿ ಕಬ್ಬು ಬೆಳೆಯುತ್ತಾರೆ. 25 ಲಕ್ಷ ರೈತ ಕುಟುಂಬಗಳು ಕಬ್ಬಿನ ಬೆಲೆಯನ್ನು ಅವಲಂಬಿಸಿವೆ. ಆದ್ದರಿಂದ ರೈತರ ಬೆಳೆಗೆ ವೈಜ್ಞಾನಿಕ ಬೆಲೆಯನ್ನು ನಿರ್ಧರಿಸಿ ರೈತರ ಸಮಸ್ಯೆಯನ್ನು ಸರ್ಕಾರ ಪರಿಹರಿಸಬೇಕಿದೆ.

ಆರ್.ಎಸ್.ಶಶಿ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

5 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

6 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

7 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

8 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

9 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

10 hours ago