ಭೈರಪ್ಪ ಕುರಿತ ಟೀಕೆ ಸರಿಯಲ್ಲ
ಅಡಗೂರು ವಿಶ್ವನಾಥ್ ಅವರು ಮೊಸರಲ್ಲಿ ಕಲ್ಲು ಹುಡುಕುವ ಜಾಯಮಾನದವರು ಅನಿಸುತ್ತದೆ. ಸಾಹಿತಿ ಎಸ್.ಎಲ್.ಭೈರಪ್ಪನವರು ತಮಗೆ ಕೇಂದ್ರ ಸರ್ಕಾರ ನೀಡಿದ ಪದ್ಮವಿಭೂಷಣ ಪ್ರಶಸ್ತಿಯು, ನರೇಂದ್ರ ಮೋದಿಯವರು ಪ್ರಧಾನಿ ಆದ್ದರಿಂದಲೇ ಲಭಿಸಿತು ಎಂದು ಹೇಳಿರುವುದರಲ್ಲಿ ಉತ್ಪ್ರೇಕ್ಷೆ ಇಲ್ಲ. 92 ವರ್ಷದ ಭೈರಪ್ಪನವರ ಸಾಹಿತ್ಯ ಮತ್ತು ಅವರು ಬರೆದ ಪುಸ್ತಕಗಳು ಇತರ ಭಾಷೆಗಳಿಗೆ ತರ್ಜುಮೆಗೊಂಡು ಅವರು ಒಬ್ಬ ಮಹಾನ್ ಸಾಹಿತಿ ಎಂದು ಗುರುತಿಸಿವೆ. ಹಿಂದಿನ ಸರ್ಕಾ ರಗಳು ಅವರಿಗೆ ಯಾವುದೇ ಪ್ರಶಸ್ತಿ ನೀಡಿ ಗೌರವಿಸಲೇ ಇಲ್ಲ. ಈಗ ಆ ಕೆಲಸವನ್ನು ಮೋದಿ ಸರ್ಕಾರ ಮಾಡಿತು. ಅದಕ್ಕಾಗಿ ಅವರು ತಮ್ಮ ಕೃತಜ್ಞತೆ ಅರ್ಪಿಸಿದ್ದಾರೆ. ಆದರೆ ಮೋದಿಯವರನ್ನು ಓಲೈಸಿರುವುದರಿಂದ ಮುಂದೆ ನಿಮಗೆ ಜ್ಞಾನಪೀಠ ಪ್ರಶಸ್ತಿ ಬರುತ್ತದೆ, ಸ್ವಲ್ಪ ಕಾಯಿರಿ ಎಂದು ಕುಹಕವಾಡಿದ್ದಾರೆ ವಿಶ್ವನಾಥ್. ಜ್ಞಾನಪೀಠ ಪ್ರಶಸ್ತಿ ನೀಡುವುದು ಕೇಂದ್ರ ಸರ್ಕಾರವಲ್ಲ ,ಸಂಸ್ಥೆ ಕೊಡುವ ಪ್ರಶಸ್ತಿ ಎಂದು ವಿಶ್ವನಾಥ್ ಅವರಿಗೆ ತಿಳಿದಿಲ್ಲವೇ? ವಿಶ್ವನಾಥ್ರವರು ವಯಸ್ಸಿಗೆ ತಕ್ಕಂತೆ ವರ್ತಿಸಲಿ.
-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು.
ಕಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲಿ
ರೈತರನ್ನು ದೇಶದ ಬೆನ್ನೆಲುಬು ಎನ್ನುತ್ತಾರೆ. ಬೆಳಗಾವಿಯ ವಿಧಾನಸಭೆ ಅಽವೇಶನದಲ್ಲಿ ಸಿದ್ದರಾಮಯ್ಯರವರು ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯದಲ್ಲಿ 7 ಕೋಟಿ ಜನ ಸಂಖ್ಯೆಯಿದ್ದು, ಶೇ.೬೦ರಷ್ಟು ಹಳ್ಳಿಗಳಿವೆ. ಕೃಷಿ ಕ್ಷೇತ್ರ ಸುಮಾರು ಶೇ.50ಲಕ್ಷದಷ್ಟು ಜನರಿಗೆ ಉದ್ಯೋಗ ಕಲ್ಪಿಸಿದೆ. ಸುಮಾರು 3 ಕೋಟಿ ಜನರು ಕೃಷಿ ಅವಲಂಬಿಸಿದ್ದಾರೆ. ಆದರೆ ಸರ್ಕಾರ ಬೆಳೆಗಳಿಗೆ ಸರಿಯಾದ ಬೆಲೆ ನಿಗದಿ ಮಾಡದೆ, ರೈತರು ಸಂಕಷ್ಟ ಎದುರಿಸುವಂತಾಗಿದೆ. ತಮಿಳುನಾಡು, ಪಂಜಾಬ್, ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಟನ್ ಕಬ್ಬಿನ ಬೆಲೆ ನಮ್ಮ ರಾಜ್ಯಕ್ಕಿಂತ ಹೆಚ್ಚಿದೆ. ಕರ್ನಾಟಕದಲ್ಲಿ ಸುಮಾರು 15 ಲಕ್ಷ ಹೆಕ್ಟೇರ್ನಲ್ಲ್ಲಿ ಕಬ್ಬು ಬೆಳೆಯುತ್ತಾರೆ. 25 ಲಕ್ಷ ರೈತ ಕುಟುಂಬಗಳು ಕಬ್ಬಿನ ಬೆಲೆಯನ್ನು ಅವಲಂಬಿಸಿವೆ. ಆದ್ದರಿಂದ ರೈತರ ಬೆಳೆಗೆ ವೈಜ್ಞಾನಿಕ ಬೆಲೆಯನ್ನು ನಿರ್ಧರಿಸಿ ರೈತರ ಸಮಸ್ಯೆಯನ್ನು ಸರ್ಕಾರ ಪರಿಹರಿಸಬೇಕಿದೆ.
–ಆರ್.ಎಸ್.ಶಶಿ, ಪತ್ರಿಕೋದ್ಯಮ ವಿಭಾಗ, ಮಹಾರಾಜ ಕಾಲೇಜು, ಮೈಸೂರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…