ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 08 ಗುರುವಾರ 2022

ಹೆಮ್ಮೆಯ ಮೈ.. ಸೂರು !
ಬೆಂದಕಾಳೂರು
ಬಹಳ ಕಾಲದ ನಂತರ
ಆಯಿತು
ಬೆಂಗಳೂರು
ಮಳೆಯಿಂದ ಆಗಿಹೋಯಿತು
ಈಗ ರಾಜಧಾನಿ
ಬೆಂಗಳೂರು ಅಸ್ತವ್ಯಸ್ತ …
ಸಿಲಿಕಾನ್ ಸಿಟಿಗೆ ಹೋಲಿಸಿದರೆ
ಎಷ್ಟೋ ಪರವಾಗಿಲ್ಲ
ಸಾಂಸ್ಕೃತಿಕ
ರಾಜಧಾನಿ
ನಮ್ಮ ಮೈ……ಸೂರು !
-ಮ.ಗು.ಬಸವಣ್ಣ, ಜೆಎಸ್‌ಎಸ್ ಪ್ರೌಢಶಾಲೆ, ಸುತ್ತೂರು.


‘ತೆರಿಗೆ ಭಿಕ್ಷೆ’ ಪಡೆಯುವುದನ್ನು ನಿಲ್ಲಿಸಿ
ಮೈಸೂರು ನಗರ ಪಾಲಿಕೆಯವರು ಸ್ವತ್ತಿನ ತೆರಿಗೆ ಪಡೆಯುವ ಸಂದರ್ಭದಲ್ಲಿ ಭಿಕ್ಷುಕರ ಸೆಸ್ ವಸೂಲಿ ಮಾಡುತ್ತಾರೆ. ಹಾಗೆಯೇ ರಾಜ್ಯ ಸರ್ಕಾರದ ವತಿಯಿಂದ ಭಿಕ್ಷುಕರ ಪುನರ್ವಸತಿ ಕೇಂದ್ರವು ಕಾರ್ಯನಿರ್ವಹಿಸುತ್ತದೆ. ಪ್ರತಿ ನಗರದ ಸಿಗ್ನಲ್ ಗಳಲ್ಲಿ ಇತ್ತೀಚೆಗೆ ಲೈಂಗಿಕ ಅಲ್ಪ ಸಂಖ್ಯಾತರು ಭಿಕ್ಷಾಟನೆ ನಡೆಸುವುದು ಮಿತಿ ಮೀರಿದೆ. ರೈಲುಗಳಲ್ಲಿಯೂ ಇವರ ಉಪಟಳ ವಿಪರೀತವೆನಿಸುವಷ್ಟು ಹೆಚ್ಚಾಗಿದೆ. ಇದನ್ನು ನಿಯಂತ್ರಿಸುವಲ್ಲಿ ಪಾಲಿಕೆಗಳು ಮತ್ತು ಪುನರ್ವಸತಿ ಕೇಂದ್ರಗಳು ವಿಫಲವಾಗಿವೆ. ಇವರುಗಳನ್ನು ಕರೆದುಕೊಂಡು ಹೋಗಿ ಜೀವನ ನಿರ್ವಹಣೆಗೆ ಸಹಾಯವಾಗುವ ಬೇರೆ ಯಾವುದಾದರೂ  ಅವಶ್ಯ ತರಬೇತಿ ನೀಡುವುದು ಪುನರ್ವಸತಿ ಕೇಂದ್ರಗಳ ಕೆಲಸವಾಗಿದೆ. ಅದನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ ಭಿಕ್ಷುಕರ ಸೆಸ್ ವಸೂಲಿಮಾಡಲು ಸರ್ಕಾರಕ್ಕೆ ಯಾವುದೇ ಹಕ್ಕಿಲ್ಲ.
-ಎಸ್.ರವಿ, ಮೈಸೂರು.

ಕಾಯಕ ಯಾವುದು?
ಕಾಯಕವೇ ಕೈಲಾಸ ಎನ್ನುವುದು ನಿರ್ಬಂಧಿತ ಸತ್ಯ. ನಾವು ಇಷ್ಟಪಟ್ಟು ಮಾಡುವ, ಮಾಡುವುದನ್ನು ಸಂತೋಷಿಸುವ, ಅಥವಾ ತಿಳಿದು ಸಂತೋಷದಿಂದ ಮಾಡುವ ಕಾಯಕ ಕೈಲಾಸವೇ ಆಗಬಹುದು. ಆದರೆ ವರ್ಗ ಸಮಾಜದಲ್ಲಿ ಮಾಲೀಕರಿಗಾಗಿ, ಜಾತಿಯ ಸಂಕೋಲೆಯಲ್ಲಿ ಉಳ್ಳವರಿಗಾಗಿ, ‘ಜಾತಿ ಶ್ರೇಷ್ಠ’ರಿಗಾಗಿ ಮಾಡುವ ಕಾಯಕ ಖಂಡಿತ ಕೈಲಾಸವಲ್ಲ. ನಮ್ಮನ್ನು ಕಾಯಕದ ಸಂಕೋಲೆಯಲ್ಲಿ ಬಂಧಿಸಿ ಕೇವಲ ಕಾರ್ಮಿಕರನ್ನಾಗಿಸಿ, ನಮ್ಮ ಮಾನವ ಘನತೆಯನ್ನು, ಸೃಜನ ಶೀಲತೆಯನ್ನು ಕಿತ್ತುಕೊಳ್ಳುವ  ಕಾಯಕ ಖಂಡಿತ ಕೈಲಾಸವಲ್ಲ. ಸ್ವಾತಂತ್ರ್ಯಗಳಿಸುವುದೆಂದರೆ ಜನ್ಮಸಿದ್ಧ ಹಕ್ಕುಗಳಾದ ಮಾನವ ಘನತೆಯನ್ನು, ಸೃಜನಶೀಲತೆಯನ್ನು ಗಳಿಸುವುದು. ಹುಟ್ಟಿನಿಂದಲೇ ಮನುಷ್ಯರ ಮೇಲೆ ಶ್ರಮವಿಭಜನೆಯನ್ನು ಹೇರಿದ ಜಾತಿಸಮಾಜದಲ್ಲಿ, ಉಳ್ಳವರು ಹೇರಿದ ಕಾಯಕದ ವರ್ಗಸಮಾಜದಲ್ಲಿ ಬದುಕುತ್ತಿರುವ ಯಾರೊಬ್ಬರೂ ಸ್ವತಂತ್ರರಲ್ಲ. ಅಂಥ ಯಾರಿಗೂ ಮಾನವ ಘನತೆ ಇಲ್ಲ. (ಬಸವಣ್ಣ ಹೇಳಿದ್ದು ‘ಶರಣರ ಕಾಯವೇ ಕೈಲಾಸ’ ಎಂದು.)
-ಲಕ್ಷ್ಮಿನಾರಾಯಣ ವಿ.ಎನ್, ಮೈಸೂರು.


ಮೇಯರ್ ಆಯ್ಕೆಯಲ್ಲಿ ಗೊಂದಲ

ಮೈಸೂರು ಮಹಾನಗರಪಾಲಿಕೆಯ ೨೪ ನೇ ಮೇಯರ್ ಆಗಿ ಭಾರತೀಯ ಜನತಾ ಪಕ್ಷದ    ಶಿವಕುಮಾರ್ ಹಾಗೂ ಉಪ ಮೇಯರ್ ಆಗಿ ಅದೇ ಪಕ್ಷದ ಡಾ.ಜಿ.ರೂಪಾರವರು ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆಗಳು.   ಹಲವಾರು ವರ್ಷಗಳಿಂದ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗಳಲ್ಲಿ
ಕಡೆಯ ಹಂತದವರೆಗೂ, ಗೊಂದಲ ಹಾಗೂ ಅನಿಶ್ಚಿತತೆ ಕಾಡುತ್ತಿರುವುದನ್ನು ಮೈಸೂರಿನ ಪ್ರಜ್ಞಾವಂತ ನಾಗರಿಕರು  ಗಮನಿಸುತ್ತಲೇ
ಬಂದಿದ್ದಾರೆ.  ಇದೊಂದು ಪ್ರಹಸನದ ಸ್ವರೂಪ ಪಡೆದುಕೊಂಡಿದೆ. ರಾಜ್ಯದ ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ,  ಕಾಂಗ್ರೆಸ್ ಮತ್ತು ಜಾ.ದಳ ಈ ಪ್ರಹಸನದ ಕೇಂದ್ರ ಬಿಂದುಗಳು.  ೧೫ ವರ್ಷಗಳ ಹಿಂದೆ ಮೇಯರ್ ಚುನಾವಣೆ ಇಷ್ಟೊಂದು ಗೊಂದಲಮಯವಾಗಿರಲಿಲ್ಲ.  ಎಲ್ಲವೂ ಪೂರ್ವ ನಿರ್ಧಾರಗಳಂತೆ ನಡೆಯುತ್ತಿದ್ದವು.  ಇತ್ತೀಚಿನ ವರ್ಷಗಳಲ್ಲಿ ಮಾತ್ರ ಈ ಗೊಂದಲ ಹೆಚ್ಚಾಗುತ್ತಲೇ ಬಂದಿದೆ.  ಏಕೆಂದರೆ ನಗರ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲ. ಈ ಬಾರಿ, ಕಾಂಗ್ರೆಸ್, ಬಿಜೆಪಿ ಹಾಗೂ ಜಾ.ದಳ ಸ್ವತಂತ್ರವಾಗಿಯೇ ಮೇಯರ್ ಹುದ್ದೆಗೆ ಸ್ಪರ್ಧಿಸುವುದಾಗಿ ಹೇಳಿಕೊಂಡು ಬಂದಿದ್ದರೂ ಕಡೆಯ ಕ್ಷಣದಲ್ಲಿ ಬಿಜೆಪಿ ಮತ್ತು ಜಾ.ದಳ  ತಮ್ಮ ನಿಜವಾದ ರಾಜಕೀಯ ದಾಳ ಉರುಳಿಸಿದವು.  ವಾಸ್ತವವಾಗಿ ಜಾ.ದಳಕ್ಕೆ ಉಪ ಮೇಯರ್ ಸ್ಥಾನ ಸಿಕ್ಕಬೇಕಿದ್ದರೂ ಸಹ, ತಾಂತ್ರಿಕ ಕಾರಣದಿಂದ ಅಭ್ಯರ್ಥಿ ರೇಷ್ಮಬಾನುರವರ ನಾಮಪತ್ರ ತಿರಸ್ಕೃತಗೊಂಡಿತು.
ಅದೇನೆ ಇರಲಿ, ಗೆದ್ದ ಅಭ್ಯರ್ಥಿಗಳು ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಿ ಎಂಬುದು  ಮೈಸೂರಿನ ನಾಗರಿಕರ ಕಳಕಳಿ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು.
andolanait

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

1 hour ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

2 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

2 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

3 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago