ಇವುಗಳು ಈಗ ಬೇಕಿತ್ತೇ?
ಸಮಾವೇಶ ತಪ್ಪೇನೂ ಇಲ್ಲ. ಸಂವಿಧಾನ ನೀಡಿದ
ಈ ಹಕ್ಕನ್ನು ಯಾರೂ ಕಸಿದುಕೊಳ್ಳಲಾಗದು ಮತ್ತು ಮೊಟಕುಗೊಳಿಸಲಾಗದು. ಅದರೂ ಇವುಗಳನ್ನು ನಡೆಸಲು ಸಮಯ, ಸಂದರ್ಭ ಮತ್ತು ಕಾಲಗಳು ಇರುತ್ತವೆ. ಇಡೀ ರಾಜ್ಯವೇ ವರುಣಾಘಾತದಿಂದ, ಕಂಡು ಕೇಳರಿಯದ ನೆರೆಯಿಂದ ತಲ್ಲಣಿಸಿದೆ. ದಿನನಿತ್ಯದ ಬದುಕು ಅಯೋಮಯವಾಗಿರುವಾಗ, ಜನರು ಈ ಜಲಕಂಟಕದಿಂದ ನೆಮ್ಮದಿ ಪಡೆಯಲು ಹೆಣಗಾಡುವಾಗ ಜನಸ್ಪಂದನ ಸಮಾವೇಶ ಮತ್ತು ಭಾರತ್ ಜೋಡೋ ಪಾದಯಾತ್ರೆಗಳು ಅಷ್ಟು ತರಾತುರಿಯಲ್ಲಿ ಬೇಕಿತ್ತೇ? ಇದಕ್ಕೆ ವೆಚ್ಚವಾಗುವ ಹಣ ಮತ್ತು ಸಮಯವನ್ನು ಈ ಮಳೆಯಿಂದ ಸಂಕಷ್ಟಕ್ಕೀಡಾದವರ ಪುನರ್ವಸತಿಗೆ ಬಳಸಬಹುದಿತ್ತಲ್ಲವೇ? ರಾಜಕೀಯ ಪಕ್ಷಗಳ ಚುನಾವಣಾ ಹಪಾಹಪಿಯನ್ನು ನೋಡಿದಾಗ ಕನ್ನಡದ ಹಳೆಯ ಗಾದೆಯೊಂದು ಬೇಡವೆಂದರೂ ನೆನಪಾಗುತ್ತದೆ!
-ರಮಾನಂದ ಶರ್ಮಾ, ಬೆಂಗಳೂರು.
ಇದೆಂತಹ ದಶಪಥ ಹೆದ್ದಾರಿ?
ಮೈಸೂರು.- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂಬುದು ಭಾರಿ ಮಳೆಯಿಂದಾಗಿ ಉದ್ಘಾಟನೆಗೂ ಮುನ್ನವೇ ಬಯಲಾಗಿದೆ. ಮಳೆಯಿಂದಾಗಿ ಹೆದ್ದಾರಿ ಮಧ್ಯೆ ಸರೋವರವೇ ಸೃಷ್ಟಿಯಾಗುವಂತೆ ಕಾಮಗಾರಿ ಮಾಡಲಾಗಿದೆ. ಸಾಮಾನ್ಯವಾಗಿ ಹಳ್ಳಿಯಲ್ಲಿ ಕಚ್ಚಾ ರಸ್ತೆ ನಿರ್ಮಿಸುವಾಗ ಕೂಡ ಮಳೆ ನೀರು ಹರಿದು ಹೋಗಲು ಚರಡಿ ವ್ಯವಸ್ಥೆ ಮಾಡಲಾಗುತ್ತದೆ. ಆದರೆ, ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿರುವ ದಶಪಥ ಹೆದ್ದಾರಿಗೆ ಮಳೆ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆಯನ್ನೇ ಮಾಡಿಲ್ಲ ಎಂದರೆ ಏನರ್ಥ? ಮುಖ್ಯಮಂತ್ರಿಗಳು ಖುದ್ಧು ಹೆದ್ದಾರಿ ಸಚಿವರಿಗೆ ದೂರು ದುಮ್ಮಾನ ಹೇಳಿಕೊಂಡ ನಂತರ, ಮಳೆ ನೀರು ಹರಿದು ಹೋಗಲು ಹೊಸ ಯೋಜನೆ ರೂಪಿಸುವುದಾಗಿ ಭರವಸೆ ನೀಡಿದ್ದಾರೆ. ಹಾಗಾದರೆ ಮಳೆ ನೀರು ಹರಿದು ಹೋಗುವ ಬಗ್ಗೆ ಹೆದ್ದಾರಿ ನಿರ್ಮಿಸುವ ಮುಂಚೆ ಯೋಚಿಸಲೇ ಇಲ್ಲವೇ? ಅಥವಾ ಮಳೆ ನೀರು ಚರಂಡಿ ನಿರ್ಮಿಸಬೇಕಾದ ದುಡ್ಡು ಶೇ.೪೦ ಪರ್ಸೆಂಟ್ ಮೊತ್ತದಲ್ಲಿ ಹರಿದು ಹೋಯಿತೇ? ಸಂಬಂಧಪಟ್ಟವರು ಯಾರಾದರೂ ಉತ್ತರಿಸುತ್ತಾರೆಯೇ?
–ನಂದಕುಮಾರ್, ಸರಸ್ವತಿಪುರಂ, ಮೈಸೂರು.
‘ಗುಂಡ್ಲುಹೊಳೆ’ಗೆ ಬರುವುದೆ ಜೀವಕಳೆ?
ಇಡೀ ರಾಜ್ಯಾದ್ಯಂತ ಆಗುತ್ತಿರುವ ಮಳೆಯಿಂದಾಗಿ ಕೆರೆ ಕಟ್ಟೆಗಳೆಲ್ಲ ತುಂಬಿ ತುಳುಕುತ್ತಿವೆ. ಇದರಿಂದ ಜನರಿಗೆ ಸಾಕಷ್ಟು ಹಾನಿಯೂ ಉಂಟಾಗಿದೆ. ಸದಾ ಬರದಿಂದಾಗಿ ಕಂಗೆಟ್ಟಿದ್ದ ನಮ್ಮ ಚಾಮರಾಜನಗರ ಜಿಲ್ಲೆಯ ಜನತೆಯಂತೂ ಈ ಸಲದ ಮಳೆಗೆ ಭಾರಿ ತತ್ತರಿಸಿ ಹೋಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲೂ ನಿರಂತರ ಸುರಿದ ಮಳೆಯಿಂದಾಗಿ ಹಲವು ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದು ಹರಿಯುತ್ತಿವೆ. ಜನರೆಲ್ಲ ಉತ್ಸಾಹದಿಂದ ತುಂಬಿದ ಕೆರೆ ಕಟ್ಟೆಗಳನ್ನು ಗುಂಪು ಗುಂಪಾಗಿ ಹೋಗಿ ನೋಡಿ ಬಂದು ಸಂಭ್ರಮಿಸುತ್ತಿದ್ದಾರೆ. ಕುತೂಹಲ ತಡೆಯಲಾರದೆ ನಾನು ಸಹ ನಮ್ಮ ಹೆಮ್ಮೆಯ ‘ಗುಂಡ್ಲು’ವಿನ ಉಗಮ ಸ್ಥಳವಾದ ಹಂಗಳ ಬಳಿಯ ಗೋಪಾಲಸ್ವಾಮಿ ಬೆಟ್ಟದ ತಪ್ಪಿಲಿನಲ್ಲಿರುವ ‘ಹಿರಿಕೆರೆ’ಗೆ ಭೇಟಿ ಕೊಟ್ಟು ಬಂದೆ. ಅಬ್ಬಾಬ್ಬ ಅದ್ಭುತ! ಆ ಪ್ರಕೃತಿಯ ಸೌಂದರ್ಯದ ಸೊಬಗನ್ನು ವರ್ಣಿಸಲಾಗದು. ವರುಣನ ಅವಕೃಪೆಯಿಂದಾಗಿ ಗುಂಡ್ಲುಪೇಟೆ ತಾಲ್ಲೂಕಿನ ಅಸ್ಮಿತೆಯಂತಿದ್ದ ‘ಗುಂಡ್ಲುಹೊಳೆ’ ಎಷ್ಟೋ ವರ್ಷಗಳಿಂದ ತನ್ನ ಇರುವಿಕೆಯನ್ನು ಕಳೆದುಕೊಂಡು ನಶಿಸಿ ಹೋಗುವ ಅಂಚಿನಲ್ಲಿತ್ತು. ಅದು ಈ ಬಾರಿಯಾದರೂ ವರುಣನ ಕೃಪೆಯಿಂದ ಬೇಗ ಭರ್ತಿಯಾಗಿ ವರ್ಷಪೂರ್ತಿ ತುಂಬಿ ಹರಿಯುವಂತಾಗಲಿ. ಹಾಗೆಯೇ ನಮ್ಮ ತಾಲ್ಲೂಕನ್ನು ಕಾಡುವ ನೀರಿನ ಬವಣೆಯನ್ನು ನೀಗಿಸುವಂತಾಗಲಿ.
-ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ ತಾಲ್ಲೂಕು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…