ಎಡಿಟೋರಿಯಲ್

ಆಂದೋಲನ ಓದುಗರ ಪತ್ರ: 07 ಶನಿವಾರ 2023

ರಾಜಕೀಯ ನಾಯಕರು ಘನತೆಯಿಂದ ಮಾತಾಡಲಿ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಪ್ರಮುಖ ನಾಯಕರು ತಮ್ಮ ಭಾಷಣಗಳಲ್ಲಿ ಜನರಿಗೆ ತಾವು ನೀಡಿದ ಕೊಡುಗೆಗಳು, ಅಭಿವೃದ್ಧಿ ಕುರಿತ ಭಾಷಣಗಳ ಬದಲಿಗೆ, ತಮ್ಮ ವಿರೋಧಿಗಳನ್ನು ನಿಂದಿಸುವುದನ್ನೇ ಗುರಿ ಮಾಡಿಕೊಂಡಂತಿದೆ. ಚುನಾಯಿತ ಜನಪ್ರತಿನಿಧಿಗಳ ಭಾಷಣ ಎಂದರೆ ಅದೊಂದು ಎದುರಾಳಿ ನಿಂದನೆ ಎನ್ನುವುದು ಕಡ್ಡಾಯ ಎಂಬಂತಾಗಿದೆ. ಇದು ರಾಜಕೀಯ ನಾಯಕರ ಕುರಿತು ಯುವಸಮೂಹದಲ್ಲಿ ಅಸಹ್ಯ ಹುಟ್ಟಿಸಿದೆ. ಆಡಳಿತ ಪಕ್ಷ ಮತ್ತು ವಿರೋಧಪಕ್ಷಗಳ ನಾಯಕರು ಮತದಾರರನ್ನು ಸೆಳೆಯಲು ತಮ್ಮ ಅವಧಿಯ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಬೇಕು. ಆದರೆ ಇಲ್ಲಿ ಅದರ ಹೊರತಾಗಿ ಪ್ರತಿ ಪಕ್ಷಗಳ ತೇಜೋವಧೆಯೇ ಹೆಚ್ಚಾಗಿದೆ. ಈ ವರ್ತನೆಯನ್ನು ಪ್ರಜ್ಞಾವಂತ ನಾಗರಿಕರು ಸಹಿಸುವುದಿಲ್ಲ ಎಂಬುದು ಮಾತ್ರ ಸತ್ಯ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣವೆಂದರೆ ಕೇಳಲು ವಿರೋಧ ಪಕ್ಷದವರು ಕೂಡ ಹಾಜರಿರುತ್ತಿದ್ದರು. ವಿರೋಧಿಗಳನ್ನು ಟೀಕಿಸಿದರೂ ಅದರಲ್ಲೊಂದು ಘನತೆ, ವ್ಯಂಗ್ಯ ಮತ್ತು ಕಾವ್ಯಾತ್ಮಕತೆಯಿಂದ ಕೂಡಿದ ಭಾಷೆಯನ್ನೇ ಅವರು ಬಳಸುತ್ತಿದ್ದರು. ಆದ್ದರಿಂದ ರಾಜ್ಯದ ರಾಜಕೀಯ ನಾಯಕರು ಇನ್ನು ಮುಂದೆ ಘನತೆಗೆ ತಕ್ಕಂತೆ ಮಾತನಾಡುವತ್ತ ಎಚ್ಚರವಹಿಸಬೇಕು.

-ಬಿ.ಎಸ್.ಚೈತ್ರ, ಚಿತ್ರದುರ್ಗ.


ಕುಮಾರಸ್ವಾಮಿ ಅವರ ಹೇಳಿಕೆಗೆ ಸಿಎಂ, ಬಿಎಸ್‌ವೈ ಮೌನವೇಕೆ?

ಇದೇ ಜ.2ರಂದು ಮೈಸೂರಿನಲ್ಲಿ ಜಾತ್ಯತೀತ ಜನತಾದಳದಿಂದ ಆಯೋಜಿಸಿದ್ದ ‘ಶರಣರೊಂದಿಗೆ ಕುಮಾರಣ್ಣ‘ ಕಾರ್ಯಕ್ರಮದಲ್ಲಿ, ವೀರಶೈವರ ಮುಖಂಡರನ್ನುದ್ದೇಶಿಸಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರು ಮಾತನಾಡಿ ಯಡಿಯೂರಪ್ಪ ಅವರನ್ನು ಬಿಜೆಪಿ ಕಡೆಗಣಿಸಿದೆ, ಬಸವರಾಜ ಬೊಮ್ಮಾಯಿ ಅವರು ಕೂಡ ಮುಖ್ಯಮಂತ್ರಿಯಾಗಿ ಯಾವ ಸ್ವಂತ ತೀರ್ಮಾನ ತೆಗೆದುಕೊಳ್ಳುವ ಹಾಗಿಲ್ಲ. ಬಿಜೆಪಿ ಬೆಂಬಲಿಸುವ ವೀರಶೈವ ನಾಯಕರನ್ನೂ ಕೂಡ ಅಸಡ್ಡೆಯಿಂದ ಕಾಣುತ್ತಿದ್ದಾರೆ. ಇದರಿಂದ ವೀರಶೈವ ಸಮಾಜವು ಎಚ್ಚೆತ್ತುಕೊಂಡು ಬಿಜೆಪಿಯಿಂದ ವಿಮುಖವಾಗುತ್ತಿದೆ ಎಂದಿದ್ದು, ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಈ ವಿಚಾರದ ಬಗ್ಗೆ ಯಡಿಯೂರಪ್ಪ ಅವರು ಮತ್ತು ಬಸವರಾಜ ಬೊಮ್ಮಾಯಿ ಅವರ ಪ್ರತಿಕ್ರಿಯೆ ಏನು? ಕುಮಾರಸ್ವಾಮಿ ಅವರು ಹೇಳುವುದರಲ್ಲಿ ಸತ್ಯಾಂಶವಿದೆಯೇ? ಅಥವಾ ಅದು ಕೇವಲ ಊಹೆಯೇ? ಎಂಬುದರ ಕುರಿತು ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ. ಆದ್ದರಿಂದ ಈ ಇಬ್ಬರೂ ನಾಯಕರೇ ಆ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡಬೇಕಿದೆ. ಒಂದು ವೇಳೆ ಅವರುಗಳು ಪ್ರತಿಕ್ರಿಯೆ ನೀಡದಿದ್ದಲ್ಲಿ, ಅದು ಕುಮಾರಸ್ವಾಮಿಯವರ ಹೇಳಿಕೆಗೆ ಬಲ ನೀಡಲಿದೆ. ಅದು ಆ ಮಾತು ನಿಜವೆಂದು ಆ ಸಮುದಾಯ ಪರಿಗಣಿಸ ಬೇಕಾಗಬಹುದು. ಈಗಲಾದರೂ ಸಿಎಂ, ಬಿಎಸ್‌ವೈ ಪ್ರತಿಕ್ರಿಯಿಸುವುದು ಸೂಕ್ತ.

-ಬ್ಯಾಂಕ್ ಶಿವಕುಮಾರ್, ಜೆ.ಪಿ.ನಗರ, ಮೈಸೂರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

6 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

6 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

21 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

22 hours ago