ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 17 ಶನಿವಾರ 2022

ಓದುಗ ಸ್ನೇಹಿ ಆಂದೋಲನ

ಓದುಗ, ಜಾಹೀರಾತುದಾರ, ಹಿತೈಷಿ
ಇವರುಗಳೆಂದರೆ ಆಂದೋಲನಕ್ಕೆ
ಎಷ್ಟೊಂದು ಖುಷಿ!
ಅದಕ್ಕೆ ಈಗ ಬದಲಾಗಿದೆ…
ಓದುಗರ ಪತ್ರದ ವಿನ್ಯಾಸ
ಆ ಅಡ್ಡ ಕಾಲಂಗಳಿಗಿಂತ
ಈ ‘ನೇರ’ ಕಾಲಂಗಳು ಬಲು ಚಂದ!
ನೋಟಕ್ಕೂ ಚೆಂದ; ಓದಿಗೂ ಚೆಂದ
ಅದಕ್ಕೆ ಇರಬೇಕು ಓದುಗನಿಗೂ ಆಂದೋಲನಕ್ಕೂ ಬಿಡಿಸಲಾಗದ ಬಂಧ!!

-ಮ.ಗು.ಬಸವಣ್ಣ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆ, ಸುತ್ತೂರು


ಮೈಸೂರು ವಿವಿ ವಿದ್ಯಾರ್ಥಿನಿಲಯ- ಪ್ರವೇಶಾತಿಗೆ ಪರದಾಟ

ಮೈಸೂರು ವಿವಿಯಲ್ಲಿ ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಪಡೆದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಇನ್ನೇನು ಕೆಲದಿನಗಳಲ್ಲಿ ತರಗತಿಗಳು ಆರಂಭಗೊಳ್ಳಲಿವೆ. ಆದರೆ ಮಾನಸ ಗಂಗೋತ್ರಿ ಆವರಣದಲ್ಲಿರುವ ವಿದ್ಯಾರ್ಥಿನಿಲಯಗಳು ಮುಕ್ತಾಯಗೊಂಡು ತಿಂಗಳು ಕಳೆದಿದೆ. ಮತ್ತೆ ಈ ವಿದ್ಯಾರ್ಥಿನಿಲಯಗಳು ಆರಂಭಗೊಂಡಿಲ್ಲ. ಇದರಿಂದ ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಮಸ್ಯೆಯಾಗಿದೆ. ಆಯ್ಕೆಪಟ್ಟಿಯ ಪ್ರಕಾರ ನಡೆಯಬೇಕಾದ ವಿದ್ಯಾರ್ಥಿನಿಲಯ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಸರಿಯಾದ ಕ್ರಮವನ್ನು ಅನುಸರಿಸದ ಪರಿಣಾಮ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ. ವಿಕಲಚೇತನರಿಗೆ (ದೃಷ್ಟಿದೋಷ) ಮೊದಲ ದಿನವೇ ಪ್ರವೇಶಾತಿ ನೀಡದೆ ಅಲೆದಾಡಿಸಲಾಗಿದೆ. ಪ್ರವೇಶ ಶುಲ್ಕ ಹಾಗೂ ಕೊಠಡಿಗಳ ಹಂಚಿಕೆಯ ವಿಚಾರದಲ್ಲಿಯೂ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ವಿದ್ಯಾರ್ಥಿನಿಲಯಗಳನ್ನು ಪುನರಾರಂಭಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಆಯ್ಕೆಪಟ್ಟಿಯಲ್ಲಿರುವ ಎಲ್ಲ ವಿದ್ಯಾರ್ಥಿಗಳಿಗೂ ಯಾವುದೇ ರೀತಿಯ ಅನ್ಯಾಯವಾಗದಂತೆ ನಿಲಯಗಳಲ್ಲಿ ಪ್ರವೇಶಾತಿ ನೀಡಬೇಕು.

-ಪ್ರದೀಪ್ ಸೋಗಳ್ಳಿ , ಪತ್ರಿಕೋದ್ಯಮ ವಿಭಾಗ, ಮಾನಸಗಂಗೋತ್ರಿ, ಮೈಸೂರು


ತ್ರಿವೇಣಿಯವರ ಮನೆಯ ಜೀರ್ಣೋದ್ಧಾರ ಸ್ವಾಗತಾರ್ಹ

ಕನ್ನಡ ಸಾರಸತ್ವ ಲೋಕದ ’ಬೆಳ್ಳಿಮೋಡ’ ತ್ರಿವೇಣಿ ಅವರು ಬಾಳಿ ಬದುಕಿದ್ದ ಮನೆಯನ್ನು ಜೀರ್ಣೋದ್ಧಾರ ಮಾಡಲು ನಿರ್ಧರಿಸಿ, ಅದಕ್ಕೆ ‘ಬೆಳ್ಳಿಮೋಡ‘ ಎಂದು ಹೆಸರಿಡಲು ತೀರ್ಮಾನಿಸಿರುವುದು ಹಾಗೂ ಸಾಹಿತ್ಯ ಪ್ರೇಮಿಗಳಿಗಾಗಿಯೇ ಹಲವು ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ, ಅವರ ಪುತ್ರಿ ಮೀರಾಕುಮಾರ್ ಅವರು ತ್ರಿವೇಣಿ ಶಂಕರ್ ಸಾಹಿತ್ಯ ಪ್ರತಿಷ್ಠಾನದ ಮೂಲಕ ವಸ್ತುಸಂಗ್ರಹಾಲಯ ಮಾಡಹೊರಟಿರುವುದು ಶ್ಲಾಘನೀಯವೇ ಸರಿ . ೩೪ ವರ್ಷಗಳ ಕಾಲ ಬದುಕಿದ ಅನುಸೂಯ ಶಂಕರ್ ಅವರು ತ್ರಿವೇಣಿ ಎಂಬ ಕಾವ್ಯನಾಮದಿಂದ ಕನ್ನಡಿಗರ ಮನಸ್ಸಿನಲ್ಲಿ ಅಜರಾಮರವಾಗಿ ಉಳಿದಿದ್ದಾರೆ. ಅವರು ರಚಿಸಿದ ಬೆಳ್ಳಿಮೋಡ, ಶರಪಂಜರ, ಬೆಕ್ಕಿನಕಣ್ಣು, ಹಣ್ಣೆಲೆಚಿಗುರಿದಾಗ, ದೂರದಬೆಟ್ಟ, ಸೋತುಗೆದ್ದವಳು, ಹೂವುಹಣ್ಣು ಸೇರಿದಂತೆ ಅನೇಕ ಕಾದಂಬರಿಗಳು ಕನ್ನಡಿಗರ ಮನಸ್ಸಿನಲ್ಲಿ ನೆಲೆಯೂರಿವೆ. ೧೩ ವರ್ಷಗಳ ಬರವಣಿಗೆಯ ಅವಽಯಲ್ಲಿ ಮೂಡಿಬಂದ ೨೧ ಕಾದಂಬರಿಗಳು, ೪೧ ಸಣ್ಣಕಥೆಗಳು ತ್ರಿವೇಣಿ ಅವರನ್ನು ಕನ್ನಡಿಗರ ಮನಸ್ಸಿನಲ್ಲಿ ಶಾಶ್ವತ ಮಿನುಗುತಾರೆಯಾಗಿ ಸಿದ್ದು, ಸಾಹಿತ್ಯ ಲೋಕದಲ್ಲಿ ಧ್ರುವತಾರೆಯಾಗಿ ಪ್ರಜ್ವಲಿಸುವಂತೆ ಮಾಡಿವೆ.

-ಬೆಸಗರಹಳ್ಳಿ ರವಿ ಪ್ರಸಾದ್, ಕೆ.ಸಿ.ನಗರ, ಮೈಸೂರು.


ಚುನಾವಣೆ ನಡೆಸಲು ವಿಳಂಬ ಏಕೆ?

ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಒಂದಲ್ಲ ಒಂದು ಕಾರಣ ನೀಡಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಐದು ಲಕ್ಷ ರೂ.ಗಳ ದಂಡ ವಿಽಸುವ ಮೂಲಕ ಚಾಟಿ ಬೀಸಿದೆ. ಅಷ್ಟಕ್ಕೂ ರಾಜ್ಯ ಸರ್ಕಾರ ಚುನಾವಣೆಗೆ ವಿಳಂಬ ಮಾಡುತ್ತಿರುವ ಕಾರಣ ಮಾತ್ರ ತಿಳಿಯುತ್ತಿಲ್ಲ. ಹೇಗೂ ಮುಂದಿನ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯುವುದರಿಂದ, ಜೊತೆಯಲ್ಲೇ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನೂ ನಡೆಸಲು ಕ್ರಮವಹಿಸಿದರೆ ರಾಜ್ಯ ಸರ್ಕಾರಕ್ಕೆ ಚುನಾವಣೆ ಖರ್ಚು ಕಡಿಮೆಯಾದಂತಾಗುತ್ತದೆ.ಚುನಾವಣಾಧಿಕಾರಿಗಳಿಗೂ ಸಮಯ ಉಳಿತಾಯವಾಗುವ ಜೊತೆಗೆ ಮತದಾರರು ಪದೇ ಪದೇ ಮತಗಟ್ಟೆಗೆ ಹೋಗುವುದು ತಪ್ಪುತ್ತದೆ. ಆದ್ದರಿಂದ ಈ ಬಗ್ಗೆ ಚುನಾವಣಾ ಆಯೋಗವು ಪರಿಶೀಲಿಸಿ ಒಟ್ಟಿಗೆ ಚುನಾವಣೆಯನ್ನು ನಡೆಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು


ಮುಂದಾದರೂ ಕಾಡುಪ್ರಾಣಿ ಹಾವಳಿಗೆ ಶಾಶ್ವತ ಪರಿಹಾರ ಸಿಗುವುದೆ?

ರಾಜ್ಯದ ಎಲ್ಲ ಭಾಗಗಳಲ್ಲಿಯೂ ರೈತರು ಒಂದಲ್ಲ ಒಂದು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಒಂದೆಡೆ ಉತ್ತಮವಾಗಿ ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಇಲ್ಲ. ಮತ್ತೊಂದೆಡೆ ಕಳಪೆ ಬಿತ್ತನೆ ಬೀಜ ಮತ್ತು ಕಳಪೆ ಗೊಬ್ಬರದಿಂದ ಉತ್ತಮ -ಸಲು ಬರುವುದಿಲ್ಲ. ಅತಿವೃಷ್ಟಿ- ಅನಾವೃಷ್ಟಿ-ಯಿಂದ ಬೆಳೆ ನಾಶ. ಇವುಗಳ ನಡುವೆ ಎಚ್.ಡಿ.ಕೋಟೆ ಹಾಗೂ ಸರಗೂರು ಭಾಗಗಳಲ್ಲಿ ಬೆಳೆದ ಬೆಳೆಗಳು ಕೈ ಸೇರುವ ಮುನ್ನವೇ ಕಾಡುಪ್ರಾಣಿಗಳ ಪಾಲಾಗುತ್ತಿವೆ. ಆದ್ದರಿಂದ ಮುಂಬರುವ ಸರ್ಕಾರಗಳು ಇಂತಹ ಸಮಸ್ಯೆಗಳನ್ನು ತಡೆಗಟ್ಟಿ ರೈತರ ಪರವಾಗಿ ಸರ್ಕಾರ ಕಾರ್ಯಕ್ರಮವನ್ನು ರೂಪಿಸಬೇಕು. ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆ ನಾಶವಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಮುಂಬರುವ ಸರ್ಕಾರ ಶಾಶ್ವತವಾದ ಪರಿಹಾರವನ್ನು ನೀಡಬೇಕು. ಕಾಡುಹಂದಿ, ಆನೆಗಳಂತಹ ಪ್ರಾಣಿಗಳು ರೈತರ ಜಮೀನಿಗೆ ನುಗ್ಗಿ ದಾಂದಲೆ ಮಾಡುತ್ತಿವೆ. ಬೇಳೆ ನಾಶಕ್ಕೆ ಸರ್ಕಾರ ನೀಡುವ ಪರಿಹಾರ ಮೊತ್ತ ಸಾಕಾಗುತ್ತಿಲ್ಲ. ಆದ್ದರಿಂದ ಮುಂದಿನ ಬಾರಿ ಅಽಕಾರಕ್ಕೆ ಯಾರೇ ಬಂದರೂ ಮೊದಲು ರೈತರ ಪರವಾಗಿ ಯೋಜನೆಗಳನ್ನು ರೂಪಿಸಬೇಕು. ರೈತರ ಸಂಕಷ್ಟಗಳಿಗೆ ಶಾಶ್ವತ ಪರಿಹಾರಿಗಳನ್ನು ಒದಗಿಸಬೇಕು.

-ಎಂ.ವಿ.ಪ್ರಕಾಶ್, ಮಚ್ಚರೆ, ಎಚ್.ಡಿ.ಕೋಟೆ ತಾ.

andolanait

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

8 mins ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

11 mins ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

14 mins ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

16 mins ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

18 mins ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

21 mins ago