ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 05 ಶನಿವಾರ 2022

ದೊಡ್ಡಗಡಿಯಾರದ ಹೆಸರೇ ಇರಲಿ!

‘ಆಂದೋಲನ’ದಲ್ಲಿ (೦೩ ನವೆಂಬರ್, ಪುಟ-೨) ಚಿರಂಜೀವಿ ಸಿ. ಹುಲ್ಲಹಳ್ಳಿಯವರು ನಗರದ ಪಾರಂಪರಿಕ ಪ್ರತೀಕ ರಜತ ಮಹೋತ್ಸವ ಸ್ಮಾರಕ ದೊಡ್ಡ ಗಡಿಯಾರ ಕುರಿತು ನೀಡಿರುವ ಮಾಹಿತಿಯು ಅನನ್ಯ. ಈ ಸಿಲ್ವರ್ ಜುಬಿಲೀ ಗಡಿಯಾರದ ವೃತ್ತಕ್ಕೆ ಮಹಾವೀರ ವೃತ್ತವೆಂದು ಬಹುಹಿಂದೆಯೇ ಮರುನಾಮಕರಣ ಮಾಡಿರುವುದನ್ನು ಗಮನಿಸಿರಬಹುದು. ಈ ಪರಿಯ ಮರುನಾಮಕರಣ ಮಾಡುವುದು ಸಹಾ ಪರಂಪರೆಯನ್ನು ತಿರುಚಿದಂತೆಯೇ. ಆದ್ದರಿಂದ, ಸಂಬಂಧ ಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸಿ, ಹೆಸರು ಮೊದಲು ಇದ್ದಂತೆಯೇ ದೊಡ್ಡಗಡಿಯಾರ ವೃತ್ತ ಎಂದು ಹೆಸರಿಸಬೇಕು.

ಬೆಂಗಳೂರಿನ ಆಗ್ನೇಯ ವಿಭಾಗದ ವ್ಯಾಪ್ತಿಗೆ ಒಳಪಡುವ ಕೋರಮಂಗಲ, ಮೈಕೋ ಲೇಔಟ್, ಎಲೆಕ್ಟ್ರಾನಿಕ್ ಸಿಟಿಯ ಮೂರು ಫೋಲೀಸ್ ಠಾಣೆಗಳಲ್ಲಿ ಗ್ರಂಥಾಲಯಗಳು ಶುರುವಾಗಿರುವುದು ಸಂತಸವಾಗಿದೆ. ಇದಕ್ಕಾಗಿ ಶ್ರಮಿಸಿದ ಡಿಸಿಪಿ ಡಾ.ಸಿ.ಕೆ.ಬಾಬು ಅವರಿಗೆ ಧನ್ಯವಾದಗಳು. ಬಾಲ್ಯದಿಂದಲೇ ಓದುವ ಹವ್ಯಾಸವನ್ನು ರೂಢಿಸಿಕೊಂಡವರು ಮುಂದೆ ಓದಿ ಅನೇಕ ಸರ್ಕಾರಿ ಹಾಗೂ ಖಾಸಗಿ ಕೆಲಸಗಳನ್ನು ಪಡೆದುಕೊಳ್ಳುತ್ತಾರೆ. ಅದರಲ್ಲಿ ಪೋಲೀಸ್ ಇಲಾಖೆಯು ಸಹ ಒಂದು. ಇಂತಹ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಒಂದು ಗ್ರಂಥಾಲಯ ಇದ್ದರೆ ಬಹಳಷ್ಷು ಉಪಯೋಗವಾಗುತ್ತದೆ. ಜನರು ಫೋಲೀಸ್ ಠಾಣೆಗಳೆಂದರೆ ಭಯ ಭೀತಿ ಅನುಭವಿಸುತ್ತಾರೆ. ಪೋಲೀಸ್ ಠಾಣೆಗಳಲ್ಲಿ ಗ್ರಂಥಾಲಯ ಪ್ರರಂಭಿಸಿ ಓದುವ ಅಭಿರುಚಿಗೆ ಪ್ರೋತ್ಸಾಹ ನೀಡುವ ಮೂಲಕ ಜನರಲ್ಲಿನ ಭಯ ಭೀತಿಯನ್ನು ಹೋಗಲಾಡಿಸಲು ಸಾಧ್ಯ. ಪೋಲೀಸ್ ಠಾಣೆಗಳು ಜನಸ್ನೇಹಿಯಾಗಲು ರಾಜ್ಯದ ಪ್ರತಿಯೊಂದು ಫೋಲೀಸ್ ಠಾಣೆಗಳಲ್ಲಿ ಗ್ರಂಥಾಲಯ ತೆರೆಯುವ ಅಗತ್ಯವಿದೆ.

ನಾಗೇಶ್, ಮಾನಸಗಂಗೋತ್ರಿ, ಮೈಸೂರು.


ಉತ್ತೇಜನ ?!

ನಮಗೆ,

ನಾಡು-ನುಡಿಯ ಬಗ್ಗೆ

ಎಷ್ಟೊಂದು ಅಭಿಮಾನ..?!

ಮೊನ್ನೆ, ಅಲ್ಲೊಂದು

ಕನ್ನಡ ರಾಜ್ಯೋತ್ಸವ

ಸಮಾರಂಭದಲ್ಲಿ

ಭಾಗವಹಿಸಿದ್ದವರು

ಧ್ವನಿವರ್ಧಕದವನನ್ನೂ ಸೇರಿ

ಹತ್ತೇ ಜನ!!

ಮ.ಗು.ಬಸವಣ್ಣ, ಜೆ ಎಸ್ ಎಸ್ ಸಂಸ್ಥೆ, ಸುತ್ತೂರು.


ಕನ್ನಡ ನಿತ್ಯ ಸತ್ಯವಾಗಲಿ..

ಕನ್ನಡ ಭಾಷೆ ಬಳಕೆ ವ್ಯಾಪಕವಾಗಬೇಕಿರುವುದು ಇಂದಿನ ಅಗತ್ಯ. ಅಂತರ್ಜಾಲಗಳಲ್ಲಿ ಹೆಚ್ಚು ಹೆಚ್ಚು ಕನ್ನಡವನ್ನು ಬಳಸಬೇಕು, ನಮಗೆ ಬೇಕಾಗಿರುವ ಮಾಹಿತಿಯನ್ನು ಕನ್ನಡದಲ್ಲಿಯೇ ಅಂತರ್ಜಾಲದಲ್ಲಿ ಶೋಧಿಸಬೇಕು. ಆ ಮೂಲಕ ಅಂತರ್ಜಾಲದಲ್ಲಿ ಕನ್ನಡ ಬಳಕೆಯ ವೇಗ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು, ವಾಟ್ಸಾಪ್, ಫೇಸ್‌ಬುಕ್, ಟ್ವಿಟ್ಟರ್, ಇಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡವನ್ನೇ ಬಳಸಬೇಕು. ಭಾಷಾ ಸಾಹಿತ್ಯವನ್ನು ಡಿಜಿಟಲೀಕರಣ ಗೊಳಿಸಿದಾಗ ಕನ್ನಡದಲ್ಲಿ ಬೇಕಾದ ಮಾಹಿತಿ ತಕ್ಷಣ ದೊರೆಯುತ್ತದೆ. ಆಗ ಇಂಗ್ಲೀಷಿನ ಮೇಲಿನ ಅವಲಂಬನೆ ಸಹಜವಾಗಿ ಕಡಿಮೆಯಾಗುತ್ತದೆ. ಆಗ ಮಾತ್ರ ಕನ್ನಡ ನಿತ್ಯ ಸತ್ಯವಾಗಲು ಸಾಧ್ಯ!

ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾಲ್ಲೂಕು.


ಒಣಮರ ತೆರವುಗೊಳಿಸಿ

ಮೈಸೂರು ನಗರದ ಸರಸ್ವತಿಪುರಂನ ಜಲಭವನದ ಸಮೀಪವಿರುವ ಒಣಗಿನಿಂತ ಬೋಳು ಮರವೊಂದು ಗೆದ್ದಿಲು ಹಿಡಿದು ಇಂದೋ, ನಾಳೆಯೋ ಬೀಳುವ ಸ್ಥಿತಿಯಲ್ಲಿದೆ. ಮರದ ಪಕ್ಕದಲ್ಲಿಯೇ ಬಸ್ ನಿಲ್ದಾಣ ಹಾಗು ಆಟೋ ನಿಲ್ದಾಣಗಳಿವೆ. ಇದು ಮುಖ್ಯ ರಸ್ತೆಯ ಪಾದಚಾರಿ ಮಾರ್ಗದಲ್ಲಿರುವುದರಿಂದ ಇಲ್ಲಿ ನೂರಾರು ಮಂದಿ ಓಡಾಡುತ್ತಿರುತ್ತಾರೆ. ಆದ್ದರಿಂದ ಮರ ತಾನಾಗಿಯೇ ಬಿದ್ದು ಸಾವು-ನೋವುಗಳಾಗುವ ಮೊದಲು ಸಂಭಂಧಪಟ್ಟವರು ಮರವನ್ನು ಬುಡಸಮೇತ ತುರ್ತಾಗಿ ತೆರವುಗೊಳಿಸಬೇಕಿದೆ.

ಬಿ.ಗಣೇಶ, ಕೆ.ಜಿ.ಕೊಪ್ಪಲು ,ಮೈಸೂರು.

andolanait

Recent Posts

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

1 hour ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

2 hours ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

2 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

2 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

3 hours ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

3 hours ago