ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 05 ಶನಿವಾರ 2022

ದೊಡ್ಡಗಡಿಯಾರದ ಹೆಸರೇ ಇರಲಿ!

‘ಆಂದೋಲನ’ದಲ್ಲಿ (೦೩ ನವೆಂಬರ್, ಪುಟ-೨) ಚಿರಂಜೀವಿ ಸಿ. ಹುಲ್ಲಹಳ್ಳಿಯವರು ನಗರದ ಪಾರಂಪರಿಕ ಪ್ರತೀಕ ರಜತ ಮಹೋತ್ಸವ ಸ್ಮಾರಕ ದೊಡ್ಡ ಗಡಿಯಾರ ಕುರಿತು ನೀಡಿರುವ ಮಾಹಿತಿಯು ಅನನ್ಯ. ಈ ಸಿಲ್ವರ್ ಜುಬಿಲೀ ಗಡಿಯಾರದ ವೃತ್ತಕ್ಕೆ ಮಹಾವೀರ ವೃತ್ತವೆಂದು ಬಹುಹಿಂದೆಯೇ ಮರುನಾಮಕರಣ ಮಾಡಿರುವುದನ್ನು ಗಮನಿಸಿರಬಹುದು. ಈ ಪರಿಯ ಮರುನಾಮಕರಣ ಮಾಡುವುದು ಸಹಾ ಪರಂಪರೆಯನ್ನು ತಿರುಚಿದಂತೆಯೇ. ಆದ್ದರಿಂದ, ಸಂಬಂಧ ಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸಿ, ಹೆಸರು ಮೊದಲು ಇದ್ದಂತೆಯೇ ದೊಡ್ಡಗಡಿಯಾರ ವೃತ್ತ ಎಂದು ಹೆಸರಿಸಬೇಕು.

ಬೆಂಗಳೂರಿನ ಆಗ್ನೇಯ ವಿಭಾಗದ ವ್ಯಾಪ್ತಿಗೆ ಒಳಪಡುವ ಕೋರಮಂಗಲ, ಮೈಕೋ ಲೇಔಟ್, ಎಲೆಕ್ಟ್ರಾನಿಕ್ ಸಿಟಿಯ ಮೂರು ಫೋಲೀಸ್ ಠಾಣೆಗಳಲ್ಲಿ ಗ್ರಂಥಾಲಯಗಳು ಶುರುವಾಗಿರುವುದು ಸಂತಸವಾಗಿದೆ. ಇದಕ್ಕಾಗಿ ಶ್ರಮಿಸಿದ ಡಿಸಿಪಿ ಡಾ.ಸಿ.ಕೆ.ಬಾಬು ಅವರಿಗೆ ಧನ್ಯವಾದಗಳು. ಬಾಲ್ಯದಿಂದಲೇ ಓದುವ ಹವ್ಯಾಸವನ್ನು ರೂಢಿಸಿಕೊಂಡವರು ಮುಂದೆ ಓದಿ ಅನೇಕ ಸರ್ಕಾರಿ ಹಾಗೂ ಖಾಸಗಿ ಕೆಲಸಗಳನ್ನು ಪಡೆದುಕೊಳ್ಳುತ್ತಾರೆ. ಅದರಲ್ಲಿ ಪೋಲೀಸ್ ಇಲಾಖೆಯು ಸಹ ಒಂದು. ಇಂತಹ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಒಂದು ಗ್ರಂಥಾಲಯ ಇದ್ದರೆ ಬಹಳಷ್ಷು ಉಪಯೋಗವಾಗುತ್ತದೆ. ಜನರು ಫೋಲೀಸ್ ಠಾಣೆಗಳೆಂದರೆ ಭಯ ಭೀತಿ ಅನುಭವಿಸುತ್ತಾರೆ. ಪೋಲೀಸ್ ಠಾಣೆಗಳಲ್ಲಿ ಗ್ರಂಥಾಲಯ ಪ್ರರಂಭಿಸಿ ಓದುವ ಅಭಿರುಚಿಗೆ ಪ್ರೋತ್ಸಾಹ ನೀಡುವ ಮೂಲಕ ಜನರಲ್ಲಿನ ಭಯ ಭೀತಿಯನ್ನು ಹೋಗಲಾಡಿಸಲು ಸಾಧ್ಯ. ಪೋಲೀಸ್ ಠಾಣೆಗಳು ಜನಸ್ನೇಹಿಯಾಗಲು ರಾಜ್ಯದ ಪ್ರತಿಯೊಂದು ಫೋಲೀಸ್ ಠಾಣೆಗಳಲ್ಲಿ ಗ್ರಂಥಾಲಯ ತೆರೆಯುವ ಅಗತ್ಯವಿದೆ.

ನಾಗೇಶ್, ಮಾನಸಗಂಗೋತ್ರಿ, ಮೈಸೂರು.


ಉತ್ತೇಜನ ?!

ನಮಗೆ,

ನಾಡು-ನುಡಿಯ ಬಗ್ಗೆ

ಎಷ್ಟೊಂದು ಅಭಿಮಾನ..?!

ಮೊನ್ನೆ, ಅಲ್ಲೊಂದು

ಕನ್ನಡ ರಾಜ್ಯೋತ್ಸವ

ಸಮಾರಂಭದಲ್ಲಿ

ಭಾಗವಹಿಸಿದ್ದವರು

ಧ್ವನಿವರ್ಧಕದವನನ್ನೂ ಸೇರಿ

ಹತ್ತೇ ಜನ!!

ಮ.ಗು.ಬಸವಣ್ಣ, ಜೆ ಎಸ್ ಎಸ್ ಸಂಸ್ಥೆ, ಸುತ್ತೂರು.


ಕನ್ನಡ ನಿತ್ಯ ಸತ್ಯವಾಗಲಿ..

ಕನ್ನಡ ಭಾಷೆ ಬಳಕೆ ವ್ಯಾಪಕವಾಗಬೇಕಿರುವುದು ಇಂದಿನ ಅಗತ್ಯ. ಅಂತರ್ಜಾಲಗಳಲ್ಲಿ ಹೆಚ್ಚು ಹೆಚ್ಚು ಕನ್ನಡವನ್ನು ಬಳಸಬೇಕು, ನಮಗೆ ಬೇಕಾಗಿರುವ ಮಾಹಿತಿಯನ್ನು ಕನ್ನಡದಲ್ಲಿಯೇ ಅಂತರ್ಜಾಲದಲ್ಲಿ ಶೋಧಿಸಬೇಕು. ಆ ಮೂಲಕ ಅಂತರ್ಜಾಲದಲ್ಲಿ ಕನ್ನಡ ಬಳಕೆಯ ವೇಗ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು, ವಾಟ್ಸಾಪ್, ಫೇಸ್‌ಬುಕ್, ಟ್ವಿಟ್ಟರ್, ಇಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡವನ್ನೇ ಬಳಸಬೇಕು. ಭಾಷಾ ಸಾಹಿತ್ಯವನ್ನು ಡಿಜಿಟಲೀಕರಣ ಗೊಳಿಸಿದಾಗ ಕನ್ನಡದಲ್ಲಿ ಬೇಕಾದ ಮಾಹಿತಿ ತಕ್ಷಣ ದೊರೆಯುತ್ತದೆ. ಆಗ ಇಂಗ್ಲೀಷಿನ ಮೇಲಿನ ಅವಲಂಬನೆ ಸಹಜವಾಗಿ ಕಡಿಮೆಯಾಗುತ್ತದೆ. ಆಗ ಮಾತ್ರ ಕನ್ನಡ ನಿತ್ಯ ಸತ್ಯವಾಗಲು ಸಾಧ್ಯ!

ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾಲ್ಲೂಕು.


ಒಣಮರ ತೆರವುಗೊಳಿಸಿ

ಮೈಸೂರು ನಗರದ ಸರಸ್ವತಿಪುರಂನ ಜಲಭವನದ ಸಮೀಪವಿರುವ ಒಣಗಿನಿಂತ ಬೋಳು ಮರವೊಂದು ಗೆದ್ದಿಲು ಹಿಡಿದು ಇಂದೋ, ನಾಳೆಯೋ ಬೀಳುವ ಸ್ಥಿತಿಯಲ್ಲಿದೆ. ಮರದ ಪಕ್ಕದಲ್ಲಿಯೇ ಬಸ್ ನಿಲ್ದಾಣ ಹಾಗು ಆಟೋ ನಿಲ್ದಾಣಗಳಿವೆ. ಇದು ಮುಖ್ಯ ರಸ್ತೆಯ ಪಾದಚಾರಿ ಮಾರ್ಗದಲ್ಲಿರುವುದರಿಂದ ಇಲ್ಲಿ ನೂರಾರು ಮಂದಿ ಓಡಾಡುತ್ತಿರುತ್ತಾರೆ. ಆದ್ದರಿಂದ ಮರ ತಾನಾಗಿಯೇ ಬಿದ್ದು ಸಾವು-ನೋವುಗಳಾಗುವ ಮೊದಲು ಸಂಭಂಧಪಟ್ಟವರು ಮರವನ್ನು ಬುಡಸಮೇತ ತುರ್ತಾಗಿ ತೆರವುಗೊಳಿಸಬೇಕಿದೆ.

ಬಿ.ಗಣೇಶ, ಕೆ.ಜಿ.ಕೊಪ್ಪಲು ,ಮೈಸೂರು.

andolanait

Recent Posts

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

24 mins ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

42 mins ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

1 hour ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

1 hour ago

ಹಾಸನ: ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿರಾಯ

ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ…

1 hour ago

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಪ್ರಕರಣ: ಜ.22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ…

2 hours ago