ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 05 ಶನಿವಾರ 2022

ದೊಡ್ಡಗಡಿಯಾರದ ಹೆಸರೇ ಇರಲಿ!

‘ಆಂದೋಲನ’ದಲ್ಲಿ (೦೩ ನವೆಂಬರ್, ಪುಟ-೨) ಚಿರಂಜೀವಿ ಸಿ. ಹುಲ್ಲಹಳ್ಳಿಯವರು ನಗರದ ಪಾರಂಪರಿಕ ಪ್ರತೀಕ ರಜತ ಮಹೋತ್ಸವ ಸ್ಮಾರಕ ದೊಡ್ಡ ಗಡಿಯಾರ ಕುರಿತು ನೀಡಿರುವ ಮಾಹಿತಿಯು ಅನನ್ಯ. ಈ ಸಿಲ್ವರ್ ಜುಬಿಲೀ ಗಡಿಯಾರದ ವೃತ್ತಕ್ಕೆ ಮಹಾವೀರ ವೃತ್ತವೆಂದು ಬಹುಹಿಂದೆಯೇ ಮರುನಾಮಕರಣ ಮಾಡಿರುವುದನ್ನು ಗಮನಿಸಿರಬಹುದು. ಈ ಪರಿಯ ಮರುನಾಮಕರಣ ಮಾಡುವುದು ಸಹಾ ಪರಂಪರೆಯನ್ನು ತಿರುಚಿದಂತೆಯೇ. ಆದ್ದರಿಂದ, ಸಂಬಂಧ ಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸಿ, ಹೆಸರು ಮೊದಲು ಇದ್ದಂತೆಯೇ ದೊಡ್ಡಗಡಿಯಾರ ವೃತ್ತ ಎಂದು ಹೆಸರಿಸಬೇಕು.

ಬೆಂಗಳೂರಿನ ಆಗ್ನೇಯ ವಿಭಾಗದ ವ್ಯಾಪ್ತಿಗೆ ಒಳಪಡುವ ಕೋರಮಂಗಲ, ಮೈಕೋ ಲೇಔಟ್, ಎಲೆಕ್ಟ್ರಾನಿಕ್ ಸಿಟಿಯ ಮೂರು ಫೋಲೀಸ್ ಠಾಣೆಗಳಲ್ಲಿ ಗ್ರಂಥಾಲಯಗಳು ಶುರುವಾಗಿರುವುದು ಸಂತಸವಾಗಿದೆ. ಇದಕ್ಕಾಗಿ ಶ್ರಮಿಸಿದ ಡಿಸಿಪಿ ಡಾ.ಸಿ.ಕೆ.ಬಾಬು ಅವರಿಗೆ ಧನ್ಯವಾದಗಳು. ಬಾಲ್ಯದಿಂದಲೇ ಓದುವ ಹವ್ಯಾಸವನ್ನು ರೂಢಿಸಿಕೊಂಡವರು ಮುಂದೆ ಓದಿ ಅನೇಕ ಸರ್ಕಾರಿ ಹಾಗೂ ಖಾಸಗಿ ಕೆಲಸಗಳನ್ನು ಪಡೆದುಕೊಳ್ಳುತ್ತಾರೆ. ಅದರಲ್ಲಿ ಪೋಲೀಸ್ ಇಲಾಖೆಯು ಸಹ ಒಂದು. ಇಂತಹ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಒಂದು ಗ್ರಂಥಾಲಯ ಇದ್ದರೆ ಬಹಳಷ್ಷು ಉಪಯೋಗವಾಗುತ್ತದೆ. ಜನರು ಫೋಲೀಸ್ ಠಾಣೆಗಳೆಂದರೆ ಭಯ ಭೀತಿ ಅನುಭವಿಸುತ್ತಾರೆ. ಪೋಲೀಸ್ ಠಾಣೆಗಳಲ್ಲಿ ಗ್ರಂಥಾಲಯ ಪ್ರರಂಭಿಸಿ ಓದುವ ಅಭಿರುಚಿಗೆ ಪ್ರೋತ್ಸಾಹ ನೀಡುವ ಮೂಲಕ ಜನರಲ್ಲಿನ ಭಯ ಭೀತಿಯನ್ನು ಹೋಗಲಾಡಿಸಲು ಸಾಧ್ಯ. ಪೋಲೀಸ್ ಠಾಣೆಗಳು ಜನಸ್ನೇಹಿಯಾಗಲು ರಾಜ್ಯದ ಪ್ರತಿಯೊಂದು ಫೋಲೀಸ್ ಠಾಣೆಗಳಲ್ಲಿ ಗ್ರಂಥಾಲಯ ತೆರೆಯುವ ಅಗತ್ಯವಿದೆ.

ನಾಗೇಶ್, ಮಾನಸಗಂಗೋತ್ರಿ, ಮೈಸೂರು.


ಉತ್ತೇಜನ ?!

ನಮಗೆ,

ನಾಡು-ನುಡಿಯ ಬಗ್ಗೆ

ಎಷ್ಟೊಂದು ಅಭಿಮಾನ..?!

ಮೊನ್ನೆ, ಅಲ್ಲೊಂದು

ಕನ್ನಡ ರಾಜ್ಯೋತ್ಸವ

ಸಮಾರಂಭದಲ್ಲಿ

ಭಾಗವಹಿಸಿದ್ದವರು

ಧ್ವನಿವರ್ಧಕದವನನ್ನೂ ಸೇರಿ

ಹತ್ತೇ ಜನ!!

ಮ.ಗು.ಬಸವಣ್ಣ, ಜೆ ಎಸ್ ಎಸ್ ಸಂಸ್ಥೆ, ಸುತ್ತೂರು.


ಕನ್ನಡ ನಿತ್ಯ ಸತ್ಯವಾಗಲಿ..

ಕನ್ನಡ ಭಾಷೆ ಬಳಕೆ ವ್ಯಾಪಕವಾಗಬೇಕಿರುವುದು ಇಂದಿನ ಅಗತ್ಯ. ಅಂತರ್ಜಾಲಗಳಲ್ಲಿ ಹೆಚ್ಚು ಹೆಚ್ಚು ಕನ್ನಡವನ್ನು ಬಳಸಬೇಕು, ನಮಗೆ ಬೇಕಾಗಿರುವ ಮಾಹಿತಿಯನ್ನು ಕನ್ನಡದಲ್ಲಿಯೇ ಅಂತರ್ಜಾಲದಲ್ಲಿ ಶೋಧಿಸಬೇಕು. ಆ ಮೂಲಕ ಅಂತರ್ಜಾಲದಲ್ಲಿ ಕನ್ನಡ ಬಳಕೆಯ ವೇಗ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು, ವಾಟ್ಸಾಪ್, ಫೇಸ್‌ಬುಕ್, ಟ್ವಿಟ್ಟರ್, ಇಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡವನ್ನೇ ಬಳಸಬೇಕು. ಭಾಷಾ ಸಾಹಿತ್ಯವನ್ನು ಡಿಜಿಟಲೀಕರಣ ಗೊಳಿಸಿದಾಗ ಕನ್ನಡದಲ್ಲಿ ಬೇಕಾದ ಮಾಹಿತಿ ತಕ್ಷಣ ದೊರೆಯುತ್ತದೆ. ಆಗ ಇಂಗ್ಲೀಷಿನ ಮೇಲಿನ ಅವಲಂಬನೆ ಸಹಜವಾಗಿ ಕಡಿಮೆಯಾಗುತ್ತದೆ. ಆಗ ಮಾತ್ರ ಕನ್ನಡ ನಿತ್ಯ ಸತ್ಯವಾಗಲು ಸಾಧ್ಯ!

ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾಲ್ಲೂಕು.


ಒಣಮರ ತೆರವುಗೊಳಿಸಿ

ಮೈಸೂರು ನಗರದ ಸರಸ್ವತಿಪುರಂನ ಜಲಭವನದ ಸಮೀಪವಿರುವ ಒಣಗಿನಿಂತ ಬೋಳು ಮರವೊಂದು ಗೆದ್ದಿಲು ಹಿಡಿದು ಇಂದೋ, ನಾಳೆಯೋ ಬೀಳುವ ಸ್ಥಿತಿಯಲ್ಲಿದೆ. ಮರದ ಪಕ್ಕದಲ್ಲಿಯೇ ಬಸ್ ನಿಲ್ದಾಣ ಹಾಗು ಆಟೋ ನಿಲ್ದಾಣಗಳಿವೆ. ಇದು ಮುಖ್ಯ ರಸ್ತೆಯ ಪಾದಚಾರಿ ಮಾರ್ಗದಲ್ಲಿರುವುದರಿಂದ ಇಲ್ಲಿ ನೂರಾರು ಮಂದಿ ಓಡಾಡುತ್ತಿರುತ್ತಾರೆ. ಆದ್ದರಿಂದ ಮರ ತಾನಾಗಿಯೇ ಬಿದ್ದು ಸಾವು-ನೋವುಗಳಾಗುವ ಮೊದಲು ಸಂಭಂಧಪಟ್ಟವರು ಮರವನ್ನು ಬುಡಸಮೇತ ತುರ್ತಾಗಿ ತೆರವುಗೊಳಿಸಬೇಕಿದೆ.

ಬಿ.ಗಣೇಶ, ಕೆ.ಜಿ.ಕೊಪ್ಪಲು ,ಮೈಸೂರು.

andolanait

Recent Posts

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

3 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

6 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

7 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

7 hours ago

ಖಮೇನಿ ಹತ್ಯೆ ಖಂಡಿಸಿ ಭಾರತದಲ್ಲೂ ಪ್ರತಿಭಟನೆ

ಜಮ್ಮು-ಕಾಶ್ಮೀರ: ಇಸ್ರೇಲ್‌ ಮತ್ತು ಅಮೇರಿಕಾ ಇರಾನ್‌ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…

7 hours ago

ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆ: ಏನದು ಗೊತ್ತಾ.?

ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…

8 hours ago