ಎಡಿಟೋರಿಯಲ್

ಆಂದೋಲನ ಓದುಗರ ಪತ್ರ : 05 ಶನಿವಾರ 2022

ದೊಡ್ಡಗಡಿಯಾರದ ಹೆಸರೇ ಇರಲಿ!

‘ಆಂದೋಲನ’ದಲ್ಲಿ (೦೩ ನವೆಂಬರ್, ಪುಟ-೨) ಚಿರಂಜೀವಿ ಸಿ. ಹುಲ್ಲಹಳ್ಳಿಯವರು ನಗರದ ಪಾರಂಪರಿಕ ಪ್ರತೀಕ ರಜತ ಮಹೋತ್ಸವ ಸ್ಮಾರಕ ದೊಡ್ಡ ಗಡಿಯಾರ ಕುರಿತು ನೀಡಿರುವ ಮಾಹಿತಿಯು ಅನನ್ಯ. ಈ ಸಿಲ್ವರ್ ಜುಬಿಲೀ ಗಡಿಯಾರದ ವೃತ್ತಕ್ಕೆ ಮಹಾವೀರ ವೃತ್ತವೆಂದು ಬಹುಹಿಂದೆಯೇ ಮರುನಾಮಕರಣ ಮಾಡಿರುವುದನ್ನು ಗಮನಿಸಿರಬಹುದು. ಈ ಪರಿಯ ಮರುನಾಮಕರಣ ಮಾಡುವುದು ಸಹಾ ಪರಂಪರೆಯನ್ನು ತಿರುಚಿದಂತೆಯೇ. ಆದ್ದರಿಂದ, ಸಂಬಂಧ ಪಟ್ಟ ಅಧಿಕಾರಿಗಳು ಇದನ್ನು ಸರಿಪಡಿಸಿ, ಹೆಸರು ಮೊದಲು ಇದ್ದಂತೆಯೇ ದೊಡ್ಡಗಡಿಯಾರ ವೃತ್ತ ಎಂದು ಹೆಸರಿಸಬೇಕು.

ಬೆಂಗಳೂರಿನ ಆಗ್ನೇಯ ವಿಭಾಗದ ವ್ಯಾಪ್ತಿಗೆ ಒಳಪಡುವ ಕೋರಮಂಗಲ, ಮೈಕೋ ಲೇಔಟ್, ಎಲೆಕ್ಟ್ರಾನಿಕ್ ಸಿಟಿಯ ಮೂರು ಫೋಲೀಸ್ ಠಾಣೆಗಳಲ್ಲಿ ಗ್ರಂಥಾಲಯಗಳು ಶುರುವಾಗಿರುವುದು ಸಂತಸವಾಗಿದೆ. ಇದಕ್ಕಾಗಿ ಶ್ರಮಿಸಿದ ಡಿಸಿಪಿ ಡಾ.ಸಿ.ಕೆ.ಬಾಬು ಅವರಿಗೆ ಧನ್ಯವಾದಗಳು. ಬಾಲ್ಯದಿಂದಲೇ ಓದುವ ಹವ್ಯಾಸವನ್ನು ರೂಢಿಸಿಕೊಂಡವರು ಮುಂದೆ ಓದಿ ಅನೇಕ ಸರ್ಕಾರಿ ಹಾಗೂ ಖಾಸಗಿ ಕೆಲಸಗಳನ್ನು ಪಡೆದುಕೊಳ್ಳುತ್ತಾರೆ. ಅದರಲ್ಲಿ ಪೋಲೀಸ್ ಇಲಾಖೆಯು ಸಹ ಒಂದು. ಇಂತಹ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಒಂದು ಗ್ರಂಥಾಲಯ ಇದ್ದರೆ ಬಹಳಷ್ಷು ಉಪಯೋಗವಾಗುತ್ತದೆ. ಜನರು ಫೋಲೀಸ್ ಠಾಣೆಗಳೆಂದರೆ ಭಯ ಭೀತಿ ಅನುಭವಿಸುತ್ತಾರೆ. ಪೋಲೀಸ್ ಠಾಣೆಗಳಲ್ಲಿ ಗ್ರಂಥಾಲಯ ಪ್ರರಂಭಿಸಿ ಓದುವ ಅಭಿರುಚಿಗೆ ಪ್ರೋತ್ಸಾಹ ನೀಡುವ ಮೂಲಕ ಜನರಲ್ಲಿನ ಭಯ ಭೀತಿಯನ್ನು ಹೋಗಲಾಡಿಸಲು ಸಾಧ್ಯ. ಪೋಲೀಸ್ ಠಾಣೆಗಳು ಜನಸ್ನೇಹಿಯಾಗಲು ರಾಜ್ಯದ ಪ್ರತಿಯೊಂದು ಫೋಲೀಸ್ ಠಾಣೆಗಳಲ್ಲಿ ಗ್ರಂಥಾಲಯ ತೆರೆಯುವ ಅಗತ್ಯವಿದೆ.

ನಾಗೇಶ್, ಮಾನಸಗಂಗೋತ್ರಿ, ಮೈಸೂರು.


ಉತ್ತೇಜನ ?!

ನಮಗೆ,

ನಾಡು-ನುಡಿಯ ಬಗ್ಗೆ

ಎಷ್ಟೊಂದು ಅಭಿಮಾನ..?!

ಮೊನ್ನೆ, ಅಲ್ಲೊಂದು

ಕನ್ನಡ ರಾಜ್ಯೋತ್ಸವ

ಸಮಾರಂಭದಲ್ಲಿ

ಭಾಗವಹಿಸಿದ್ದವರು

ಧ್ವನಿವರ್ಧಕದವನನ್ನೂ ಸೇರಿ

ಹತ್ತೇ ಜನ!!

ಮ.ಗು.ಬಸವಣ್ಣ, ಜೆ ಎಸ್ ಎಸ್ ಸಂಸ್ಥೆ, ಸುತ್ತೂರು.


ಕನ್ನಡ ನಿತ್ಯ ಸತ್ಯವಾಗಲಿ..

ಕನ್ನಡ ಭಾಷೆ ಬಳಕೆ ವ್ಯಾಪಕವಾಗಬೇಕಿರುವುದು ಇಂದಿನ ಅಗತ್ಯ. ಅಂತರ್ಜಾಲಗಳಲ್ಲಿ ಹೆಚ್ಚು ಹೆಚ್ಚು ಕನ್ನಡವನ್ನು ಬಳಸಬೇಕು, ನಮಗೆ ಬೇಕಾಗಿರುವ ಮಾಹಿತಿಯನ್ನು ಕನ್ನಡದಲ್ಲಿಯೇ ಅಂತರ್ಜಾಲದಲ್ಲಿ ಶೋಧಿಸಬೇಕು. ಆ ಮೂಲಕ ಅಂತರ್ಜಾಲದಲ್ಲಿ ಕನ್ನಡ ಬಳಕೆಯ ವೇಗ ಮತ್ತು ವ್ಯಾಪ್ತಿಯನ್ನು ಹೆಚ್ಚಿಸಬೇಕು, ವಾಟ್ಸಾಪ್, ಫೇಸ್‌ಬುಕ್, ಟ್ವಿಟ್ಟರ್, ಇಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡವನ್ನೇ ಬಳಸಬೇಕು. ಭಾಷಾ ಸಾಹಿತ್ಯವನ್ನು ಡಿಜಿಟಲೀಕರಣ ಗೊಳಿಸಿದಾಗ ಕನ್ನಡದಲ್ಲಿ ಬೇಕಾದ ಮಾಹಿತಿ ತಕ್ಷಣ ದೊರೆಯುತ್ತದೆ. ಆಗ ಇಂಗ್ಲೀಷಿನ ಮೇಲಿನ ಅವಲಂಬನೆ ಸಹಜವಾಗಿ ಕಡಿಮೆಯಾಗುತ್ತದೆ. ಆಗ ಮಾತ್ರ ಕನ್ನಡ ನಿತ್ಯ ಸತ್ಯವಾಗಲು ಸಾಧ್ಯ!

ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾಲ್ಲೂಕು.


ಒಣಮರ ತೆರವುಗೊಳಿಸಿ

ಮೈಸೂರು ನಗರದ ಸರಸ್ವತಿಪುರಂನ ಜಲಭವನದ ಸಮೀಪವಿರುವ ಒಣಗಿನಿಂತ ಬೋಳು ಮರವೊಂದು ಗೆದ್ದಿಲು ಹಿಡಿದು ಇಂದೋ, ನಾಳೆಯೋ ಬೀಳುವ ಸ್ಥಿತಿಯಲ್ಲಿದೆ. ಮರದ ಪಕ್ಕದಲ್ಲಿಯೇ ಬಸ್ ನಿಲ್ದಾಣ ಹಾಗು ಆಟೋ ನಿಲ್ದಾಣಗಳಿವೆ. ಇದು ಮುಖ್ಯ ರಸ್ತೆಯ ಪಾದಚಾರಿ ಮಾರ್ಗದಲ್ಲಿರುವುದರಿಂದ ಇಲ್ಲಿ ನೂರಾರು ಮಂದಿ ಓಡಾಡುತ್ತಿರುತ್ತಾರೆ. ಆದ್ದರಿಂದ ಮರ ತಾನಾಗಿಯೇ ಬಿದ್ದು ಸಾವು-ನೋವುಗಳಾಗುವ ಮೊದಲು ಸಂಭಂಧಪಟ್ಟವರು ಮರವನ್ನು ಬುಡಸಮೇತ ತುರ್ತಾಗಿ ತೆರವುಗೊಳಿಸಬೇಕಿದೆ.

ಬಿ.ಗಣೇಶ, ಕೆ.ಜಿ.ಕೊಪ್ಪಲು ,ಮೈಸೂರು.

andolanait

Recent Posts

ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ : ರಘುನಾಥ್‌ ಚ.ಹ, ಪ್ರಕಾಶ್‌ರಾಜ್‌ ಕೃತಿ ಆಯ್ಕೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…

13 mins ago

ಕೊಲೆ ಪ್ರಕರಣ | ಪವಿತ್ರಾ ಗೌಡಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…

31 mins ago

ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ : ತಂದೆ ನೆನೆದು ಸಚಿವ ಖಂಡ್ರೆ ಭಾವುಕ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

2 hours ago

ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಐಸಿಸಿ…

2 hours ago

ಕಿಚ್ಚ ಸುದೀಪ್‌ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್‌ ದೂರು: ಕಾರಣ ಇಷ್ಟೇ.!

ಬೆಂಗಳೂರು: ಬಿಗ್‌ಬಾಸ್-‌12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…

2 hours ago

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದ್ದು, ಜೂನ್.‌30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…

3 hours ago