ಅಂಕಣ

ರಾಜ್ಯ ಸರ್ಕಾರಕ್ಕೆ ಆರು ತಿಂಗಳು; ಸವಾಲುಗಳ ನಡುವೆಯೂ ಸರ್ಕಾರ ದಿಟ್ಟ ನಿಲುವು

By: ಡಾ.ಶ್ವೇತಾ ಮಡಪ್ಪಾಡಿ

ಬಹುಜನರು ತಮ್ಮ ಅಪೇಕ್ಷೆಯಂತೆ ಕಾಂಗ್ರೆಸ್ ಸರ್ಕಾರವನ್ನು ಜಾರಿಗೆ ತಂದು ಆರು ತಿಂಗಳುಗಳು ಪೂರೈಸಿದವು. ಈ ಹಿನ್ನೆಲೆಯಲ್ಲಿ ಸರ್ಕಾರದ ಯಶಸ್ವೀ ಕಾರ್ಯ ಯೋಜನೆಗಳನ್ನು ಅವಲೋಕಿಸಿದಾಗ ಸರ್ಕಾರವು ತನಗಿದ್ದ ಸವಾಲುಗಳ ನಡುವೆಯೂ ತಾನು ನಿರ್ವಹಿ ಸಿದ ದಿಟ್ಟ ಜವಾಬ್ದಾರಿಗಳನ್ನು ಕುರಿತು ಮನವರಿಕೆಯಾಗುತ್ತದೆ.

ಆರು ತಿಂಗಳ ಹಿಂದೆಯಷ್ಟೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಗ್ಯಾರಂಟಿಗಳಲ್ಲಿ ನಾಲ್ಕನ್ನೂ ಇದೀಗ ಚಾಲ್ತಿಗೆ ತಂದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಲ ವರು ಸರ್ಕಾರದ ಐದು ಯೋಜನೆಗಳಿಂದ ರಾಜ್ಯ ಸರ್ವ ನಾಶ ಆಯಿತೆಂದು ಬೊಬ್ಬಿರಿಯುತ್ತಿರುವಾಗ ಹೀಗೆ ನಾವೆಲ್ಲರೂ ತಣ್ಣಗೆ ಕುಳಿತು ಯೋಚಿಸುವುದು ಬಹಳ ಅಗತ್ಯ.

ನಮಗೆಲ್ಲ ಈಗಾಗಲೇ ತಿಳಿದಿರುವಂತೆ, ರಾಜ್ಯ ಸರ್ಕಾರವು ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆಗಳನ್ನು ಅನುಷ್ಠಾನಗೊಳಿ ಸಿದೆ.ಪ್ರಸ್ತುತ ಆರ್ಥಿಕ ವರ್ಷದಲ್ಲಿ ಈ ಯೋಜನೆಗಳನ್ನು ಜಾರಿಗೆ ತರಲು ಬೇಕಾದಷ್ಟು ಅನುದಾನ ತೆಗೆದಿರಿಸುವು ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಹೋರಾಟದಿಂದ ಪಡೆದ ರಾಜ್ಯಾಧಿಕಾರ ವನ್ನು ಜನರ ಕಲ್ಯಾಣಕ್ಕೆ ಬಳಸುತ್ತಿರುವ ಅವರಿಗೆ ಸಮಾಜವಾದಿ ಚಳವಳಿಯ ಹಿನ್ನೆಲೆಯಿದೆ. ಹಿಂದುಳಿದ ವರ್ಗಗಳ ಬಗ್ಗೆ ಅನುಭವಾಧಾರಿತ ಮತ್ತು ಅಧ್ಯಯನಾಧಾರಿತ ತಿಳಿವಳಿಕೆಯಿದೆ.

ಈ ಯೋಜನೆಗಳನ್ನು ವಿರೋಧಿಸುವವರೂ ಅಭಿವೃದ್ಧಿ, ಆರ್ಥಿಕತೆ ಮೊದಲಾದ ಪರಿಭಾಷೆ ಗಳಲ್ಲಿಯೇ ಮಾತಾಡುತ್ತಿದ್ದಾರೆ. ಸಾರ್ವಜನಿಕ ಪರಿಭಾಷೆ ಯನ್ನು ಬದಲಾಯಿಸಿದ್ದು ಕೂಡ ಈ ಯೋಜನೆಗಳ ಬಹುದೊಡ್ಡ ಯಶಸ್ಸು.
ಈ ಆರು ತಿಂಗಳ ಅವಧಿಯಲ್ಲಿ ಯೋಜನೆಗಳು ಯಾವ ಪರಿಣಾಮ ಬೀರಿವೆ? ಸರ್ಕಾರದ ಆರ್ಥಿಕ ಪರಿಸ್ಥಿತಿ ಹೇಗಿದೆ ಎಂದೆಲ್ಲ ವಿಶ್ಲೇಷಿಸುವುದು ಅಗತ್ಯವೇ ಹೌದು.

ಈ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿರುವವರು ಮತ್ತು ಯೋಜನೆಗಳ ಬಗ್ಗೆ ಕೆಟ್ಟದಾಗಿ ಮಾತನಾಡು ವವರು ಯಾರೂ ಆರ್ಥಿಕ ತಜ್ಞರಲ್ಲ. ಹಾಗಾಗಿ ಅವರ ಮಾತನ್ನು ನಾವು ಗಂಭೀರವಾಗಿ ಸ್ವೀಕರಿಸಬೇಕಾದ ಅಗತ್ಯವೂ ಇಲ್ಲ. ಶಕ್ತಿಯೋಜನೆಯು ಬೀರಿದಪರಿಣಾಮ ನಿರ್ಣಾಯಕವಾದುದು. ಹಿಂದೆಂದೂ ಇಲ್ಲದ ರೀತಿ ಯಲ್ಲಿ ಮಹಿಳೆಯರು ಪಯಣಿಸುತ್ತಿದ್ದಾರೆ. ಕಾರಣಗಳು ಏನೇ ಇರಲಿ, ಮಹಿಳೆಯರ ಈ ಚಲನೆ ಮಾತ್ರ ಐತಿಹಾಸಿಕವಾದುದು. ಇದನ್ನು ಅರ್ಥಮಾಡಿ ಕೊಳ್ಳು ವುದಕ್ಕೆ ಹೃದಯವಂತಿಕೆ ಬೇಕು. ಬಡವರ ಹಸಿವನ್ನು ಅನ್ನಭಾಗ್ಯ ಯೋಜನೆಯನ್ನು ತಪ್ಪು ತಣಿಸುವ ಎಂದು ಹೇಳಲು ಯಾರಿಗೂ ಅಧಿಕಾರ ಇಲ್ಲ.

ತಿಂಗಳ ಎರಡು ಸಾವಿರ ರೂಪಾಯಿಗಳು ಹೆಣ್ಣನ್ನು ಆರ್ಥಿಕವಾಗಿ ಇನ್ನಷ್ಟು ಸ್ವಾವ ಲಂಬಿಯನ್ನಾಗಿಸುತ್ತಿದೆ ಎನ್ನುವು ದರಲ್ಲಿ ಎರಡು ಮಾತಿಲ್ಲ. ಯೋಜನೆಗಳ ದುರ್ಬಳಕೆ ಆಗದಂತೆ ಈ ನಾವೆಲ್ಲ ಎಚ್ಚರಿಕೆ ವಹಿಸಬೇಕು ಅಷ್ಟೆ. ಹಿಂದೆ ದೇಶದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರು ನೋಟ ಬಡತನ ಅಜ್ಞಾನ ಮತ್ತು ಅನಾ ರೋಗ್ಯವು ಮಾಯವಾಗು ವಂತೆ ಪ್ರತಿಯೊಬ್ಬರೂ ಕೆಲಸ ಮಾಡಬೇಕೆಂದು ದೇಶದ ಜನತೆಯನ್ನು ಕೋರಿದ್ದರು.

ಬಹಳ ಕಾಲದಿಂದಲೂ ನಮ್ಮಲ್ಲಿ ಕಲ್ಯಾಣ ರಾಜ್ಯದ ಕಲ್ಪನೆ ಇತ್ತು. ಈ ಹಿನ್ನೆಲೆಯಲ್ಲಿ ಜನರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಸರ್ಕಾರವು ತನ್ನ ಸಂಪತ್ತನ್ನು (ಜನಗಳದ್ದೇ ಆದ ಸಂಪತ್ತನ್ನು) ಎಲ್ಲರಿಗೂ ಸಮಾನ ಅವಕಾಶ ಮತ್ತು ಸಂಪತ್ತಿನ ಸಮಾನ ಹಂಚಿಕೆ ಎಂಬ ಎರಡು ತತ್ವಗಳ ಆಧಾರದ ಮೇಲೆ ಜನರಿಗೆ ಹಂಚುತ್ತದೆ. ಆ ಮೂಲಕ ಪ್ರಜೆಗಳ ಆರ್ಥಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ರಕ್ಷಿಸುವ ಹೊಣೆಯನ್ನು ಹೊತ್ತುಕೊಳ್ಳುತ್ತದೆ. ಪ್ರಸ್ತುತ ಕರ್ನಾಟಕ ಯೋಜನೆಗಳು ಕಲ್ಯಾಣ ರಾಜ್ಯದ ಪರಿಕಲ್ಪನೆಯಂತೆ ನಮ್ಮ ಮುಂದಿವೆ.

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ | ಏ.17 ಶುಕ್ರವಾರ

1 hour ago

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

11 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

12 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

13 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

13 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

13 hours ago