ಚಿಕ್ಕ ಗಡಿಯಾರದ ಪಕ್ಕದಲ್ಲಿರುವ ಗಾಡಿಯಲ್ಲಿ ದಿನವೂ ಮಹಾದೇವ ಅವರು ಸೊಪ್ಪು ಮಾರುತ್ತಿರುತ್ತಾರೆ. ಇವರದೇ ಸ್ವಂತ ಅಂಗಡಿಯಲ್ಲ. ಈ ಸಹಾಯಕ ಕೆಲಸಕ್ಕೆ ಸೇರಿ ಒಂದು ವರ್ಷ ಆಗಿದ್ದಷ್ಟೇ. ಈ ಹಿಂದೆ ಪಾಂಡವಪುರದ ಬಳಿ ಇರುವ ತಮ್ಮ ಗದ್ದೆಯಲ್ಲಿ ಉಳುಮೆ ಮಾಡುತ್ತಾ, ಸೊಪ್ಪು ಕಡಿಯುತ್ತಾ ಬದುಕು ಸಾಗಿಸುತ್ತಿದ್ದ ಇವರು ಒಮ್ಮೆ ಚಿಕ್ಕ ಗಡಿಯಾರದ ಬಳಿ ಸುಮ್ಮನೆ ಕೂತಿದ್ದಾಗ, ಕರಿಯಪ್ಪ ಅವರು ಬಂದು ಸೊಪ್ಪು ಮಾರುವ ಕೆಲಸಕ್ಕೆ ಕರೆದರು. ಮಧ್ಯಾಹ್ನದ ಬಿಡುವಿನಲ್ಲಿ ಬಂದು ಮಾಡಬಹುದಲ್ಲಾ ಎಂದು ಯೋಚಿಸಿ, ಕರಿಯಪ್ಪನವರೊಡನೆ ಸಹಾಯಕರಾಗಿ ಕೆಲಸಕ್ಕೆ ಸೇರಿದರು.
ಮಹಾದೇವ ಅವರ ವಯಸ್ಸು 64. ವಿಶೇಷವೆಂದರೆ ಇವರ ದೇಹ, ಮನಸ್ಸಿಗೆ ವಯಸ್ಸಿನ ಲೆಕ್ಕ ತಿಳಿದಿಲ್ಲ. ಹಾಗಾಗಿ ತುಂಬು ಉತ್ಸಾಹದಿಂದ, ಶ್ರದ್ಧೆಯಿಂದ ತಮ್ಮ ಕೆಲಸ ನಿರ್ವಹಿಸುತ್ತಾರೆ. ಸಂಜೆ ಐದರ ಹೊತ್ತಿಗೆ ಸೊಪ್ಪು ಮಾರುವುದಕ್ಕೆಂದು ನಿಂತವರು ಮರಳಿ ಮನೆ ಸೇರುವುದು ಹನ್ನೊಂದಕ್ಕೆ ಆದರೆ ಮಕ್ಕಳಿಗೆ ಹೊರೆಯಾಗಿ ಬದುಕಬಾರದು ಎಂಬ ಜೀವನ ಸೂತ್ರವನು ಇವರು ಪಾಲಿಸುತ್ತಿದ್ದಾರೆ. ರಟ್ಟೆಯಲ್ಲಿ ಶಕ್ತಿ ಇರುವ ತನಕ ಕೆಲಸ ಮಾಡುತ್ತೇನೆಂಬ ಭರವಸೆ ಇವರಿಗಿದೆ. ಒಂದು ಕೆಲಸ ಕೈಕೊಟ್ಟರೆ ಇನ್ನೊಂದು ಆಧಾರ ವಾಗಿರುತ್ತದೆ ಎನ್ನುತ್ತಲೇ ಹೊಟ್ಟೆಪಾಡಿನ ಕತೆ ಹೇಳು ತ್ತಾರೆ. ಕೆಲಸ ಮಾಡುತ್ತಿರಬೇಕೆಂಬ ಮಹಾದೇವ ಅವರಲ್ಲಿ ಆರೋಗ್ಯದ ಗುಟ್ಟು ಕೇಳಿದರೆ ರಾಗಿಮುದ್ದೆ ಮತ್ತು ಹುರುಳಿಕಾಳು ಎನ್ನುತ್ತಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…