ಚಿಕ್ಕ ಗಡಿಯಾರದ ಪಕ್ಕದಲ್ಲಿರುವ ಗಾಡಿಯಲ್ಲಿ ದಿನವೂ ಮಹಾದೇವ ಅವರು ಸೊಪ್ಪು ಮಾರುತ್ತಿರುತ್ತಾರೆ. ಇವರದೇ ಸ್ವಂತ ಅಂಗಡಿಯಲ್ಲ. ಈ ಸಹಾಯಕ ಕೆಲಸಕ್ಕೆ ಸೇರಿ ಒಂದು ವರ್ಷ ಆಗಿದ್ದಷ್ಟೇ. ಈ ಹಿಂದೆ ಪಾಂಡವಪುರದ ಬಳಿ ಇರುವ ತಮ್ಮ ಗದ್ದೆಯಲ್ಲಿ ಉಳುಮೆ ಮಾಡುತ್ತಾ, ಸೊಪ್ಪು ಕಡಿಯುತ್ತಾ ಬದುಕು ಸಾಗಿಸುತ್ತಿದ್ದ ಇವರು ಒಮ್ಮೆ ಚಿಕ್ಕ ಗಡಿಯಾರದ ಬಳಿ ಸುಮ್ಮನೆ ಕೂತಿದ್ದಾಗ, ಕರಿಯಪ್ಪ ಅವರು ಬಂದು ಸೊಪ್ಪು ಮಾರುವ ಕೆಲಸಕ್ಕೆ ಕರೆದರು. ಮಧ್ಯಾಹ್ನದ ಬಿಡುವಿನಲ್ಲಿ ಬಂದು ಮಾಡಬಹುದಲ್ಲಾ ಎಂದು ಯೋಚಿಸಿ, ಕರಿಯಪ್ಪನವರೊಡನೆ ಸಹಾಯಕರಾಗಿ ಕೆಲಸಕ್ಕೆ ಸೇರಿದರು.
ಮಹಾದೇವ ಅವರ ವಯಸ್ಸು 64. ವಿಶೇಷವೆಂದರೆ ಇವರ ದೇಹ, ಮನಸ್ಸಿಗೆ ವಯಸ್ಸಿನ ಲೆಕ್ಕ ತಿಳಿದಿಲ್ಲ. ಹಾಗಾಗಿ ತುಂಬು ಉತ್ಸಾಹದಿಂದ, ಶ್ರದ್ಧೆಯಿಂದ ತಮ್ಮ ಕೆಲಸ ನಿರ್ವಹಿಸುತ್ತಾರೆ. ಸಂಜೆ ಐದರ ಹೊತ್ತಿಗೆ ಸೊಪ್ಪು ಮಾರುವುದಕ್ಕೆಂದು ನಿಂತವರು ಮರಳಿ ಮನೆ ಸೇರುವುದು ಹನ್ನೊಂದಕ್ಕೆ ಆದರೆ ಮಕ್ಕಳಿಗೆ ಹೊರೆಯಾಗಿ ಬದುಕಬಾರದು ಎಂಬ ಜೀವನ ಸೂತ್ರವನು ಇವರು ಪಾಲಿಸುತ್ತಿದ್ದಾರೆ. ರಟ್ಟೆಯಲ್ಲಿ ಶಕ್ತಿ ಇರುವ ತನಕ ಕೆಲಸ ಮಾಡುತ್ತೇನೆಂಬ ಭರವಸೆ ಇವರಿಗಿದೆ. ಒಂದು ಕೆಲಸ ಕೈಕೊಟ್ಟರೆ ಇನ್ನೊಂದು ಆಧಾರ ವಾಗಿರುತ್ತದೆ ಎನ್ನುತ್ತಲೇ ಹೊಟ್ಟೆಪಾಡಿನ ಕತೆ ಹೇಳು ತ್ತಾರೆ. ಕೆಲಸ ಮಾಡುತ್ತಿರಬೇಕೆಂಬ ಮಹಾದೇವ ಅವರಲ್ಲಿ ಆರೋಗ್ಯದ ಗುಟ್ಟು ಕೇಳಿದರೆ ರಾಗಿಮುದ್ದೆ ಮತ್ತು ಹುರುಳಿಕಾಳು ಎನ್ನುತ್ತಾರೆ.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…