ಅಂಕಣ

ಚಿಕ್ಕ ಗಡಿಯಾರದ ಸೊಪ್ಪಿನಂಗಡಿ ಮಹಾದೇವ

ಚಿಕ್ಕ ಗಡಿಯಾರದ ಪಕ್ಕದಲ್ಲಿರುವ ಗಾಡಿಯಲ್ಲಿ ದಿನವೂ ಮಹಾದೇವ ಅವರು ಸೊಪ್ಪು ಮಾರುತ್ತಿರುತ್ತಾರೆ. ಇವರದೇ ಸ್ವಂತ ಅಂಗಡಿಯಲ್ಲ. ಈ ಸಹಾಯಕ ಕೆಲಸಕ್ಕೆ ಸೇರಿ ಒಂದು ವರ್ಷ ಆಗಿದ್ದಷ್ಟೇ. ಈ ಹಿಂದೆ ಪಾಂಡವಪುರದ ಬಳಿ ಇರುವ ತಮ್ಮ ಗದ್ದೆಯಲ್ಲಿ ಉಳುಮೆ ಮಾಡುತ್ತಾ, ಸೊಪ್ಪು ಕಡಿಯುತ್ತಾ ಬದುಕು ಸಾಗಿಸುತ್ತಿದ್ದ ಇವರು ಒಮ್ಮೆ ಚಿಕ್ಕ ಗಡಿಯಾರದ ಬಳಿ ಸುಮ್ಮನೆ ಕೂತಿದ್ದಾಗ, ಕರಿಯಪ್ಪ ಅವರು ಬಂದು ಸೊಪ್ಪು ಮಾರುವ ಕೆಲಸಕ್ಕೆ ಕರೆದರು. ಮಧ್ಯಾಹ್ನದ ಬಿಡುವಿನಲ್ಲಿ ಬಂದು ಮಾಡಬಹುದಲ್ಲಾ ಎಂದು ಯೋಚಿಸಿ, ಕರಿಯಪ್ಪನವರೊಡನೆ ಸಹಾಯಕರಾಗಿ ಕೆಲಸಕ್ಕೆ ಸೇರಿದರು.

ಮಹಾದೇವ ಅವರ ವಯಸ್ಸು 64. ವಿಶೇಷವೆಂದರೆ ಇವರ ದೇಹ, ಮನಸ್ಸಿಗೆ ವಯಸ್ಸಿನ ಲೆಕ್ಕ ತಿಳಿದಿಲ್ಲ. ಹಾಗಾಗಿ ತುಂಬು ಉತ್ಸಾಹದಿಂದ, ಶ್ರದ್ಧೆಯಿಂದ ತಮ್ಮ ಕೆಲಸ ನಿರ್ವಹಿಸುತ್ತಾರೆ. ಸಂಜೆ ಐದರ ಹೊತ್ತಿಗೆ ಸೊಪ್ಪು ಮಾರುವುದಕ್ಕೆಂದು ನಿಂತವರು ಮರಳಿ ಮನೆ ಸೇರುವುದು ಹನ್ನೊಂದಕ್ಕೆ ಆದರೆ ಮಕ್ಕಳಿಗೆ ಹೊರೆಯಾಗಿ ಬದುಕಬಾರದು ಎಂಬ ಜೀವನ ಸೂತ್ರವನು ಇವರು ಪಾಲಿಸುತ್ತಿದ್ದಾರೆ. ರಟ್ಟೆಯಲ್ಲಿ ಶಕ್ತಿ ಇರುವ ತನಕ ಕೆಲಸ ಮಾಡುತ್ತೇನೆಂಬ ಭರವಸೆ ಇವರಿಗಿದೆ. ಒಂದು ಕೆಲಸ ಕೈಕೊಟ್ಟರೆ ಇನ್ನೊಂದು ಆಧಾರ ವಾಗಿರುತ್ತದೆ ಎನ್ನುತ್ತಲೇ ಹೊಟ್ಟೆಪಾಡಿನ ಕತೆ ಹೇಳು ತ್ತಾರೆ. ಕೆಲಸ ಮಾಡುತ್ತಿರಬೇಕೆಂಬ ಮಹಾದೇವ ಅವರಲ್ಲಿ ಆರೋಗ್ಯದ ಗುಟ್ಟು ಕೇಳಿದರೆ ರಾಗಿಮುದ್ದೆ ಮತ್ತು ಹುರುಳಿಕಾಳು ಎನ್ನುತ್ತಾರೆ.

ಆಂದೋಲನ ಡೆಸ್ಕ್

Recent Posts

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

26 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

1 hour ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

4 hours ago