ಅಂಕಣ

ಚಿಕ್ಕ ಗಡಿಯಾರದ ಸೊಪ್ಪಿನಂಗಡಿ ಮಹಾದೇವ

ಚಿಕ್ಕ ಗಡಿಯಾರದ ಪಕ್ಕದಲ್ಲಿರುವ ಗಾಡಿಯಲ್ಲಿ ದಿನವೂ ಮಹಾದೇವ ಅವರು ಸೊಪ್ಪು ಮಾರುತ್ತಿರುತ್ತಾರೆ. ಇವರದೇ ಸ್ವಂತ ಅಂಗಡಿಯಲ್ಲ. ಈ ಸಹಾಯಕ ಕೆಲಸಕ್ಕೆ ಸೇರಿ ಒಂದು ವರ್ಷ ಆಗಿದ್ದಷ್ಟೇ. ಈ ಹಿಂದೆ ಪಾಂಡವಪುರದ ಬಳಿ ಇರುವ ತಮ್ಮ ಗದ್ದೆಯಲ್ಲಿ ಉಳುಮೆ ಮಾಡುತ್ತಾ, ಸೊಪ್ಪು ಕಡಿಯುತ್ತಾ ಬದುಕು ಸಾಗಿಸುತ್ತಿದ್ದ ಇವರು ಒಮ್ಮೆ ಚಿಕ್ಕ ಗಡಿಯಾರದ ಬಳಿ ಸುಮ್ಮನೆ ಕೂತಿದ್ದಾಗ, ಕರಿಯಪ್ಪ ಅವರು ಬಂದು ಸೊಪ್ಪು ಮಾರುವ ಕೆಲಸಕ್ಕೆ ಕರೆದರು. ಮಧ್ಯಾಹ್ನದ ಬಿಡುವಿನಲ್ಲಿ ಬಂದು ಮಾಡಬಹುದಲ್ಲಾ ಎಂದು ಯೋಚಿಸಿ, ಕರಿಯಪ್ಪನವರೊಡನೆ ಸಹಾಯಕರಾಗಿ ಕೆಲಸಕ್ಕೆ ಸೇರಿದರು.

ಮಹಾದೇವ ಅವರ ವಯಸ್ಸು 64. ವಿಶೇಷವೆಂದರೆ ಇವರ ದೇಹ, ಮನಸ್ಸಿಗೆ ವಯಸ್ಸಿನ ಲೆಕ್ಕ ತಿಳಿದಿಲ್ಲ. ಹಾಗಾಗಿ ತುಂಬು ಉತ್ಸಾಹದಿಂದ, ಶ್ರದ್ಧೆಯಿಂದ ತಮ್ಮ ಕೆಲಸ ನಿರ್ವಹಿಸುತ್ತಾರೆ. ಸಂಜೆ ಐದರ ಹೊತ್ತಿಗೆ ಸೊಪ್ಪು ಮಾರುವುದಕ್ಕೆಂದು ನಿಂತವರು ಮರಳಿ ಮನೆ ಸೇರುವುದು ಹನ್ನೊಂದಕ್ಕೆ ಆದರೆ ಮಕ್ಕಳಿಗೆ ಹೊರೆಯಾಗಿ ಬದುಕಬಾರದು ಎಂಬ ಜೀವನ ಸೂತ್ರವನು ಇವರು ಪಾಲಿಸುತ್ತಿದ್ದಾರೆ. ರಟ್ಟೆಯಲ್ಲಿ ಶಕ್ತಿ ಇರುವ ತನಕ ಕೆಲಸ ಮಾಡುತ್ತೇನೆಂಬ ಭರವಸೆ ಇವರಿಗಿದೆ. ಒಂದು ಕೆಲಸ ಕೈಕೊಟ್ಟರೆ ಇನ್ನೊಂದು ಆಧಾರ ವಾಗಿರುತ್ತದೆ ಎನ್ನುತ್ತಲೇ ಹೊಟ್ಟೆಪಾಡಿನ ಕತೆ ಹೇಳು ತ್ತಾರೆ. ಕೆಲಸ ಮಾಡುತ್ತಿರಬೇಕೆಂಬ ಮಹಾದೇವ ಅವರಲ್ಲಿ ಆರೋಗ್ಯದ ಗುಟ್ಟು ಕೇಳಿದರೆ ರಾಗಿಮುದ್ದೆ ಮತ್ತು ಹುರುಳಿಕಾಳು ಎನ್ನುತ್ತಾರೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

4 mins ago

ಅಧಿಕಾರ ಹಂಚಿಕೆ ಗೊಂದಲ; ಬಿಜೆಪಿ, ಜಾ.ದಳದಲ್ಲಿ ಆತ್ಮವಿಶ್ವಾಸ ಹೆಚ್ಚಳ

ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…

19 mins ago

ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವಕ್ಕೆ ಸಿದ್ಧತೆ

ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ  ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…

35 mins ago

ಹೊರವಲಯದ ನಿವೇಶನಗಳಿಗೆ ಹೆಚ್ಚಾಗಲಿದೆ ಮತ್ತಷ್ಟು ಬೇಡಿಕೆ

ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…

1 hour ago

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

4 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

4 hours ago