ಎಡಿಟೋರಿಯಲ್

ಬೇಡೋ ಗುಣ ಮನುಷ್ಯನ ಸಣ್ಣವನಾಗಿ ಮಾಡುತ್ತೆ

ಸಿದ್ದೇಶ್ವರ ಸ್ವಾಮೀಜಿ

ಸುಮ್ಮನೆ ಒಂದು ಸುಂದರ ಕಥೆ ಇದು. ಒಬ್ಬ ತಾಯಿ ಮಗ ಇದ್ರು, ತಂದೆ ತೀರಿಕೊಂಡಿದ್ದ. ಆವಾಗ ತಾಯಿ ಮಗನನ್ನು ಬೆಳೆಸಿದ್ಲು. ಆದರೆ, ಮಗ ಒಂದೂ ಚಲೋ ಕೆಲಸ ಮಾಡ್ಲಿಲ್ಲ, ಏನೇನು ಮಾಡಬಾರದು ಅಂತ ತಾಯಿ ಹೇಳ್ತಿದ್ಲೊ ಅದನ್ನ ಮಾಡ್ತಾ ಇದ್ದ. ಒಂದು ದಿವಸ ಇಬ್ಬರು ಒಂದೇ ಸಲ ಪ್ರಾಣ ಬಿಟ್ರು. ಅಲ್ಲಿಂದ ಇಬ್ರು ಹೋದರು ಆ ಕಡೆ ಸ್ವರ್ಗದ ಬಾಗಿಲು, ಈ ಕಡೆ ನರಕದ ಬಾಗಿಲು. ಸ್ವರ್ಗದ ಬಾಗಿಲ ತಟ್ಟಿದ್ಲು ತಾಯಿ. ಆಗ ದೇವದೂತ ಬಾಗಿಲ ತೆಗೆದ ಹುಡುಗ, ಹುಡಗನ ತಾಯಿ ಇಬ್ಬರನ್ನೂ ನೋಡ್ದ. ಆಗ ಅವನಿಗೆ ಗೊತ್ತಾಯಿತು ‘ಒಬ್ರು ಶುದ್ಧ, ಇನ್ನೊಬ್ಬರು ಅಶುದ್ಧ’. ಅವಾಗ ಆತ ಹೇಳ್ದ, ‘ತಾಯಿಯೇ ನಿನಗ ಬಾಗಿಲ ತೆರೆದದ ನಿನ್ನ ಮಗನಿಗಲ್ಲ’. ಆಗ ತಾಯಿ ಹೇಳಿದ್ಲು, ‘ನನಗೆ ಯಾಕ ತೆರೆದದೆ ಹೇಳು’ ಅಂದ್ಲು. ಅವ ಹೇಳ್ದ, ‘ನೀನು ಬಹಳ ಸ್ವಚ್ಛ’ ಆದ್ದರಿಂದ ತೆರೆದದೆ. ಆಗಿತ್ತು ಅಂದ್ರ, ‘ನಾನು ಯಾವುದನ್ನು ಅನುಭವಿಸಬೇಕೋ ಅದನ್ನು ಮಗನಿಗೆ ಕೊಡು, ಆತ ಏನನ್ನು ಅನುಭವಿಸಬೇಕೋ ನಾನು ಸ್ವೀಕರಿಸುತ್ತೇನೆ. ನಾನು ನರಕಕ್ಕೆ ಹೋಗ್ತೀನಿ’ ಅಂದ್ಲು. ಎಚ್ಚರ ಆಯ್ತು. ನೋಡಿದ್ರ ಕನಸಿದು. ಇದು ತಾಯಿಗೆ ಬಿದ್ದ ಕನಸಲ್ಲ ಹುಡುಗನಿಗೆ ಬಿದ್ದ ಕನಸು.

ಜೀವನ ಬದಲಾಯಿತು. ಹುಡುಗನಿಗೆ ಕಣ್ಣಲ್ಲಿ ನೀರು ಬಂತು. ತಾಯಿಯ ಪ್ರೇಮ ಎಂಬ ಅದ್ಭುತ ಅಂದ. ನಾನು ಆಕಿಯ ಒಂದೂ ಮಾತು ಕೇಳಲಿಲ್ಲ, ಜೀವನ ಹಾಳ ಮಾಡಕೊಂಡೆ. ಆಕೆ ಸ್ವರ್ಗವನ್ನೇ ನನಗಾಗಿ ಬಿಟ್ಟು, ನರಕಕ್ಕೆ ಹೊರಟಿದ್ಲು, ನಾನು ಆಕೆ ತೋರಿದ ಮಾರ್ಗಬಿಟ್ಟು ನರಕ ಕಟ್ಟಿಕೊಂಡೆ ಜೀವನದಲ್ಲಿ. ಎಂಥ ಅಪ್ರತಿಮಾ ಪ್ರೇಮ. ಮಿಶ್ರಣ ಇಲ್ಲ. ‘ಸ್ವಚ್ಛ ಕೊಡೋದೆ, ವಿನಃ ಬೇಡೋದಲ್ಲ’. ಅಂಥ ಶುದ್ಧ ಹೃದಯ ಅಲ್ಲಿ ತ್ಯಾಗ, ಭಕ್ತಿ ಎರಡೂ ಕೂಡಿ ಹೋಗ್ತಾವ. ತ್ಯಾಗ ಪರಮಪ್ರೇಮ ಎರಡು ಕೂಡಿ ಹೋಗ್ತಾವಾ. ಇದೇ ಹುಡುಗ ಮುಂದೆ ಒಬ್ಬ ಶ್ರೇಷ್ಠ ಸಂತನಾದ. ಬರೀ ಒಂದು ಕನಸಿನಿಂದ ಮನಸ್ಸು ಬದಲಾಗಿತ್ತು ಜೀವನ. ಕಲಿಸಿಕೊಟ್ಟಿತ್ತು ಏನು? ಪವಿತ್ರ ಪ್ರೇಮ. ಎಂಥ ಜೀವನ ಇದನ್ನು ಪರಿಶುದ್ಧಗೊಳಿಸಬೇಕು ಅಂತ ಹೊರಟ. ಆತನ ಮಾತುಗಳೆಲ್ಲ ಹರುವ್ಯಾವ ಐರೋಪ್ಯ ದೇಶದೊಳಗ ಆ ಮಾತುಗಳ ಮಧ್ಯದಲೆಲ್ಲ ‘ಲವ್ ಡಿವೈನ್’.

ಪ್ರೇಮ ಸುಮ್ಮನೆ ಹಿಂಗ ಹರವುಬೇಕು. ‘ತ್ಯಾಗ, ಪ್ರೇಮ ಎರಡರ ಮಿಶ್ರಣ ಅದೇ ಭಕ್ತಿ ಮಾರ್ಗ’. ಎಂಥ ಸುಂದರವಾದ ಮಾರ್ಗ ಇದು. ‘ಎಲ್ಲಿ ತ್ಯಾಗ ಇರ್ತದೆ, ಎಲ್ಲಿ ಭಕ್ತಿ ಇರ್ತದ, ಅಲ್ಲಿ ಸಂತೋಷ ಇರ್ತದೆ’. ‘ಎಲ್ಲಿ ಪ್ರೇಮದ ಕೊರತೆ ಇರ್ತದೆ, ಎಲ್ಲಿ ತ್ಯಾಗದ ಕೊರತೆ ಇರ್ತದ, ಅಲ್ಲಿ ಅಸಂತೋಷ ಹರವಿಕೊಂಡಿರುತ್ತದೆ’. ನಾವು ಇಷ್ಟೇಕೇ ಅಸಂತೋಷಿಗಳಾಗುತ್ತಿದ್ದೇವೆ? ನಮ್ಮಲ್ಲಿ ಎರಡರ ಕೊರತೆ, ಒಂದು ‘ಬೇಕು ಅನ್ನೊದು ಕಡಿಮೆಯಾಗ್ತಿಲ್ಲ, ಪ್ರೇಮ ಇದು ಹರುವುತಾಯಿಲ್ಲ’ ಅಷ್ಟೆ.

ಪ್ರತಿಯೊಂದು ವಸ್ತುವಿಗೆ ನಾವು ಬೆಲೆ ಕಟ್ಟೋಕೆ ಶುರು ಮಾಡೀವಿ. ಮನಿಗೆ ಯಾರಾದರೂ ಬಂದು ಒಂದು ಕಪ್ಪು ನೀರ ಕೊಡಿ ಅಂತ ಕೇಳಿದ್ದರ, ನಮ್ಮ ಮನಸ್ಸಿನಲ್ಲಿ ಒಂದು ಕಪ್ಪಂದರೆ ಎಷ್ಟು? ಒಂದು ಬಾಟಲಿ. ಬಾಟಲಿ ಕಿಮ್ಮತ್ತು ಎಷ್ಟು? ೧೫ ರೂ. ಈ ಮನುಷ್ಯನಿಗೆ ಒಂದು ಬಾಟಲು ನೀರು ಕೊಟ್ರೇ ೧೫ ರೂ. ಖರ್ಚಾಗ್ತದ. ಹಿಂಗಾ, ಆಲೋಚನಿ. ಆದರೆ, ಆಕಾಶದಿಂದ ಧಾರಾಕಾರವಾಗಿ ಜಗತ್ತು ನೀರಾ ಕಂಡಿತ್ತು. ಮೇಘ ಏನಾರ ಬಿಲ್ ಕಳುಹಿಸಿದರೇ ಮನುಷ್ಯನ ಗತಿ ಏನು? ಮನುಷ್ಯ ಬದುಕಲು ಸಾಧ್ಯವೇ? ಹತ್ತು ನಿಮಿಷದಾಗ ನೀರು ಜಗತ್ತಿನಾದ್ಯಂತ. ಆದರೆ ಅದು ಒಂದು ದಿವಸ ಇಂಥವರ ಮನಿಗೆ ನೀರಾ ಕೊಟ್ಟಿನೀ ಅಂತ ಅಂದಿಲ್ಲ. ಸುಮ್ಮನೆ ಸುರುಸ್ತ ಹೋಗ್ತದೆ. ‘ಭೂಮಿ ಬೆಳೆದು ಹಸಿರಾಗ್ತದೆ. ಮನುಷ್ಯ ಉಸಿರಾಡುತ್ತಾನೆ’. ಅದೇ ನೀರು ತಕೊಂಡು ಭಿಕ್ಷಾ ಬೇಡ್ತಾನೆ ಅಂದ್ರ ನಮ್ಮ ಮನಸ್ಸು ಎಷ್ಟು ಸಣ್ಣದಾಗಿ ಅದೆ. ಮನಸ್ಸೇ ಹಂಗ ಹಾಗ್ತದೆ ಏನು ಮಾಡಕ ಆಗ್ತದೆ. ಒಂದು ಕಪ್ ನೀರು ಕೊಟ್ರೇ, ಕರ್ಮಷಿಯಲ್ ಚಿಂತನೆ ಶುರುವಾಗ್ತದಲ್ಲ ಇದೆಂತಹ ಯೋಚನೆ. ಪ್ರತಿಯೊಂದಕ್ಕೂ ಬೆಲೆ. ಒಂದು ಮಗುವನ್ನು ನೋಡಿಕೊಳ್ಳೊಕೆ ಒಂದು ತಾಯಿ ಹತ್ರ ಕೊಟ್ರೇ ಒಂದು ತಾಸಿಗೆ ೩೦ ರೂಪಾಯಿ. ಪರದೇಶದಾಗ ಈ ಪರಿಸ್ಥಿತಿ ಇದೆ.

ಎಂಥ ಸುಂದರ ಜಗತ್ತು ಇತ್ತು. ಆದರೆ ಮನಸ್ಸುಗಳು ಎಷ್ಟು ಬದಲಾಗಿಬಿಟ್ಟೂ, ಸುರಿಯುವ ನೀರ ಇನ್ನಾ ಸುರಿಸ್ತಾದ, ಹರಿಯುವ ನದಿಗಳು ಇನ್ನಾ ಹರೀತಾವೆ. ಆದರೆ ನಮ್ಮ ಮನಸ್ಸುಗಳು ಹೊಲಸಾಗವೆ. ಅಷ್ಟೆ ಯಾಕೆ? ಹೊಲಸು ಅಂದರೇನು? ಶುದ್ಧವಾದ ಪ್ರೇಮದ ಕೊರತೆ, ಆ ಬಳಿಕ ಭಿಕ್ಷಾವೃತ್ತಿ. ಭಗವಂತನೇ ಇಷ್ಟದಲ್ಲ ಸಾಕು ಅಂತ ಒಂದು ಸಲ ಒಬ್ಬರೇ ವರ? ಈಗ ವರನೇ ಹೆಣ್ಣು ಮಕ್ಕಳ ಎದುರ ಬೀಕ್ಷಾ ಬೇಡಕತ್ತಿದ್ರಾ ವರ ಹೆಂಗ ಆಗ್ತಾನೆ? ಅವ. ಸುಮ್ಮನೆ ವಿಚಾರ ಮಾಡ್ರೀ, ಯಾರು ಯಾರ ಎದರು ಬೇಡಬೇಕು? ಯಾರು ಪುರುಷರು, ಸಮರ್ಥರೋ ಅವರು ಕೊಡಬೇಕು, ಆದರೆ ಅವರೇ ಬೇಡಾಕ ನಿಂತರೇ ಗತಿ ಏನು? ಬೇಡೋ ಗುಣ ಅದಲ್ಲ, ಇದು ಬಳ ವಿಚಿತ್ರ. ಅದ ನಮ್ಮನ್ನ ಸಣ್ಣವರನ್ನಾಗಿ ಮಾಡ್ತದಾ. ಮನುಷ್ಯ ಯಾಕೆ ಸಣ್ಣವ ಆದಾ ಅಂದ್ರ ‘ಎದಿ ಕಡಿಮೆಯಾಗ್ತ ಬಂತು. ತಲಿ ಬೆಲೆ ಕಟ್ಟಿತ್ತು’. ಎದಿ ಬಾಡಿ ಹೋಯ್ತು.

andolanait

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

11 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

11 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

12 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

13 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

13 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

16 hours ago