ಎಡಿಟೋರಿಯಲ್

‘ಶತಮಾನಗಳನ್ನು ಕಂಡ ಕ್ರೈಸ್ತ ದೇವಾಲಯದ ಘಂಟೆಗಳು’

ಎಂ.ಆರ್.ಮಂಜುನಾಥ್

ಘಂಟೆ ಎಂದರೇನು? ಪ್ರಪಂಚದ ಪರಿವೇ ಇಲ್ಲದವರನ್ನು ಎಚ್ಚರಿಸುವ ಸಾಧನವೇ? ಯಾರೂ ಮುಟ್ಟದ ಹೊರತು ಶಬ್ದ ಮಾಡದ ಸೋಮಾರಿಯೇ? ಒಮ್ಮೆ ಕ್ರೈಸ್ತ ದೇವಾಲಯಗಳ ಘಂಟೆಯನ್ನು ನೋಡಿ. ಅದೆಷ್ಟು ಬಗೆ ಬಗೆಯ ಘಂಟೆಗಳು ಮೈಸೂರು ಮಹಾರಾಜರ ಕೊಡುಗೆಗಳಾಗಿವೆ.

ಶತ ಶತಮಾನಗಳಿಂದ ಸಂಕೇತವಾಗಿ ನಿಂತಿರುವ ಚರ್ಚ್‌ನ ಆ ಘಂಟೆಗಳು, ಕ್ರಿಸ್ತನೆಂಬ ಮಹಾತ್ಮ ಹುಟ್ಟಿದ ಗಳಿಗೆಯನ್ನು ಹೇಳುವ ಹೊತ್ತು ಬಂದಿದೆ, ಏಸು ಹುಟ್ಟಿದನೆಂದು ಸಂಭ್ರಮಿಸುವ ಕ್ರಿಸ್‌ಮಸ್ ಹಬ್ಬದ ಹಿಂದಿನ ದಿನ ನಡುರಾತ್ರಿ 12ಗಂಟೆಗೆ ಇದೇ ಕಾರಣಕ್ಕೆ ಘಂಟೆಯ ನಾದ ಮೊಳಗುತ್ತದೆ. ಈಗಿನ ಗಡಿಯಾರವೇ ೧೨ ಸಾರಿ ಬಾರಿಸುತ್ತದೆಯಲ್ಲಾ… ಎಂದು ನೀವು ಕೇಳಬಹುದು. ಹೌದು.. ಇದರ ಜೊತೆಗೆ ನಡುರಾತ್ರಿ ಚರ್ಚಿನ ಘಂಟೆಯೂ ಜೊತೆಯಾಗುತ್ತದೆ ಕ್ರಿಸ್ತ ಹುಟ್ಟಿದ ಸಂಭ್ರಮಕ್ಕೆ. ಚರ್ಚ್‌ನ ಘಂಟೆಗಳ ಬಗ್ಗೆ ರೋಚಕ ಮಾಹಿತಿ ಇದೆ. ಶತಮಾನಗಳನ್ನು ಕಂಡಿರುವ ಕ್ರೈಸ್ತ ದೇವಾಲಯದ ಘಂಟೆಗಳು ತಮ್ಮ ಆತ್ಮ ಕಥೆಯನ್ನು ತೆರೆದಿಡುತ್ತವೆ.

ಶ್ರೀರಂಗ ಪಟ್ಟಣದ ಅಬ್ಬೆದುಬ್ವಾರ್ ದೇವಾಲಯ

ಇದನ್ನು ಸುಮಾರು ಕ್ರಿ.ಶ.೧೮೦೦ರಲ್ಲಿ ನಿರ್ಮಿಸಲಾಯಿತು. ಅಬ್ಬೆದುಬ್ವಾರ್ ಎಂಬ ಫ್ರೆಂಚ್ ಧರ್ಮಪ್ರಚಾರಕ ಕಟ್ಟಿಸಿದ. ಮೈಸೂರಿನ ಸುತ್ತಮುತ್ತ ಆಗ ಚರ್ಚ್‌ಗಳು ಇರಲಿಲ್ಲ. ಈತ ಮೊದಲ ಬಾರಿಗೆ ಈ ದೇವಾಲಯವನ್ನು ಕಟ್ಟಿಸಿದ ಎಂದು ಹೇಳಲಾಗಿದೆ. ಈ ದೇವಾಲಯದ ಘಂಟೆಗೋಪುರದ ಬಳಿ ಕೆತ್ತಿರುವ ಇಸವಿ ಇದೆ. ಇಲ್ಲಿರುವ ಕಂಚಿನ ಘಂಟೆಗೆ ೨೧೮ ವರ್ಷಗಳು ತುಂಬಿವೆ. ಇದು ಫ್ರಾನ್ಸ್ ದೇಶದಲ್ಲಿ ತಯಾರಾಗಿದ್ದು, ಸುಮಾರು ೬ ಅಡಿ ಎತ್ತರವಿದ್ದು ೨೦೦ ಕೆ.ಜಿಗೂ ಹೆಚ್ಚು ತೂಕವಿದೆ.

ಮೈಸೂರಿನ ಸೇಂಟ್ ಬಾರ್ತೊಲೋಮಿಯೊ ದೇವಾಲಯ

17ನೇ ಶತಮಾನದಲ್ಲಿ ಫ್ರೆಂಚ್ ರಾಕ್ ಸೈನಿಕರಿಂದ ಪಾಂಡವಪುರದಲ್ಲಿ ಸ್ಥಾಪಿತವಾದ ಘಂಟೆ ಇದು. ಆಂಗ್ಲರ ಆಳ್ವ್ವಿಕೆಯಲ್ಲಿ 1799ರಲ್ಲಿ ಇರ್ವಿನ್ ನಾಲೆ(ಇಂದು ವಿಶ್ವೇಶ್ವರಯ್ಯ ನಾಲೆ) ನಿರ್ಮಿಸುವಾಗ ಅಲ್ಲಿದ್ದ ಘಂಟೆಯನ್ನು ಮೈಸೂರಿಗೆ ತಂದು ರೆವರೆಂಡ್ ಜಿ.ಎ. ರೈಟ್‌ರವರಿಗೆ ಹಸ್ತಾಂತರಿಸ ಲಾಯಿತು. ಮಹಾರಾಜ ಕೃಷ್ಣರಾಜ ಒಡೆಯರ್ ಚರ್ಚ್‌ನಿರ್ಮಿಸಲು ಮೈಸೂರು – ನಂಜನಗೂಡು ರಸ್ತೆಯಲ್ಲಿ ಜಾಗವನ್ನು ಬಳುವಳಿಯಾಗಿ ನೀಡಿದರು. ಸೇಂಟ್ ಬಾರ್ತೊಲೋಮಿಯೊ ಚರ್ಚ್ 1830ರಲ್ಲಿ ಸ್ಥಾಪನೆಗೊಂಡಿತು. 17ನೇ ಶತಮಾನದ ಘಂಟೆಯನ್ನು ಈ ಚರ್ಚ್‌ನಲ್ಲಿ ಸ್ಥಾಪಿಸಿದರು. ಇದು ಸುಮಾರು 1799ನೇ ಇಸವಿಯದು, ಸುಮಾರು 4 ಅಡಿ ಎತ್ತರವಿದ್ದು, 3ರಿಂದ 4ಟನ್ ಕಂಚಿನಿಂದ ತಯಾರಾಗಿದೆ. ಇದು ಫ್ರಾನ್ಸ್ ದೇಶದ್ದಾಗಿದೆ ಎಂದು ಪಾದ್ರಿ ರೆವೆಡೆಂಡ್ ಡ್ಯಾನಿಯಲ್ ಕೌಂಡಿನ್ಯ ತಿಳಿಯಪಡಿಸುತ್ತಾರೆ.

ಮೈಸೂರಿನ 2 ನೇ ಸಿ.ಎಸ್.ಐ. ವೆಸ್ಲಿ ಚರ್ಚ್

ಮೈಸೂರಿಗೆ ಹಳೆಯಾದ 2ನೇ ಸಿ.ಎಸ್.ಐ ವೆಸ್ಲಿ ಚರ್ಚ್‌ನ ಘಂಟೆಯು ೧೮೫೯ರಲ್ಲಿ ಸ್ಥಾಪನೆಗೊಂಡಿತು. ಈ ಸಣ್ಣ ದೇವಾಲಯವು ನಂತರ ೨-೧೨-೧೮೭೧ರಲ್ಲಿ ದೊಡ್ಡದಾಗಿ ಸ್ಥಾಪಿತಗೊಂಡು ಶತ ಶತಮಾನ ಕಳೆದಿರುವ ಘಂಟೆ ಇದು ಎಂದು ಪಾದ್ರಿ ರೆವರೆಂಡ್ ಗ್ರೇಟ್ ಫುಲ್ ಜಯಶೇಖರ್‌ತಿಳಿಸುತ್ತಾರೆ.

ಮೈಸೂರಿನ ಸೇಂಟ್ ಫಿಲೋಮಿನಾ ಚರ್ಚ್

ಸೇಂಟ್ ಫಿಲೋಮಿನಾ ಚರ್ಚ್ ಘಂಟೆಯ ವಿಶೇಷತೆ ಎಂದರೆ ಇದು ಮಹಾರಾಜ ಜಯಚಾಮರಾಜ ಒಡೆಯರ್‌ರವರ ಕೊಡುಗೆ. ೧೯೪೬ರಲ್ಲಿ ಚರ್ಚ್‌ಗೆ ಕಂಚಿನಿಂದ ತಯಾರಾದ ಸುಮಾರು ೫ ಅಡಿ ಎತ್ತರದ ಬೃಹತ್‌ಗಾತ್ರದ ಘಂಟೆಯನ್ನು ಕೊಡುಗೆಯಾಗಿ ನೀಡಿದ್ದಾರೆ ಇದರ ಸಾಕ್ಷಿಯಾಗಿ ಘಂಟೆಯ ಮೇಲೆ ಅವರ ಹೆಸರನ್ನು ಕೆತ್ತಲಾಗಿದೆ. ಜಾತಿ, ಮತ,ಭೇದವಿಲ್ಲದೆ ಎಲ್ಲರೂ ಸಮಾನರೆಂದು ಸಾರುವ ಸಂಕೇತವಾಗಿ ಉಳಿದಿದೆ ಈ ಚರ್ಚ್‌ನ ಘಂಟೆ.ಇದರ ಜೊತೆಗೆ ಇನ್ನೂ ೨ ಬೃಹತ್ ಗಂಟೆಗಳು ಇಲ್ಲಿವೆ.

ಹಳೆಯ ಸೇಂಟ್ ಫಿಲೋಮಿನ ಸಣ್ಣ ಚರ್ಚ್‌ನಲ್ಲಿ ೧೮೪೪ರಲ್ಲಿದ್ದ ಮೊದಲ ಘಂಟೆಯು ಆರ್.ಟಿ. ರೆವರೆಂಡ್ ಎಂ.ಎಸ್.ಎ.ಆರ್. ಇಟಿನ ಲೂಯಿಸ್ ಚಾರ್‌ಬೋನಕ್ಸ್‌ರಿಂದ ಸ್ಥಾಪನೆಯಾಯಿತು. ಈಗ ಈ ಘಂಟೆಯನ್ನು ಸೇಂಟ್‌ಫಿಲೋಮಿನಾ ಚರ್ಚ್‌ನಲ್ಲಿ ಕಾಣಬಹುದು. ಇದರ ಜೊತೆಗೆ ೧೯೪೬ರರಲ್ಲಿ ಮೋಸ್ಟ್ ರೆವರೆಂಡ್ ಡಾ. ರೆಂಜನ್ ಫೀಯುಗ್‌ರವರು ಬೃಹತ್ ಘಂಟೆಯನ್ನು ಸ್ಥಾಪಿಸಿದ್ದಾರೆ. ಈ ಎಲ್ಲ ಘಂಟೆಗಳು ಪಂಚ ಲೋಹದಿಂದ ತಯಾರಾಗಿವೆ. ಇದು ಸುಮಾರು ೬ ಅಡಿ ಎತ್ತರವಿದ್ದು, ೪ ಟನ್‌ತೂಕವಿದೆ. ಈ ಎಲ್ಲ ಘಂಟೆಗಳು ಫ್ರಾನ್ಸ್‌ನಲ್ಲಿ ತಯಾರಾದವು. ಇಂದು ಜಗತ್‌ಪ್ರಸಿದ್ಧಿ ಪಡೆದಿರುವ ಸೇಂಟ್ ಫಿಲೋಮಿನಾ ಚರ್ಚ್ ನಿರ್ಮಾಣಕ್ಕೆ ೧೮೪೩ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್‌ರವರು ಭೂಮಿಪೂಜೆ ನೆರವೇರಿಸಿದರು.ಈ ಚರ್ಚ್‌ಗೆ ರಾಜ ಮಹಾರಾಜರ ಕೊಡುಗೆ ಅಪಾರ ಎಂದು ಪಾದ್ರಿ ಸ್ಟ್ಯಾನಿ ಅಲ್ಮೇಡ ರವರು ಹೇಳುತ್ತಾರೆ.

ಘಂಟೆಗಳ ನಾದದ ಹಿನ್ನೆಲೆ…..

ಕ್ರಿಸ್‌ಮಸ್ ಹಿಂದಿನ ದಿನ ಮಧ್ಯರಾತ್ರಿ ೧೨ಕ್ಕೆ ಘಂಟೆ ನಾದಕ್ಕೆ ಅದರದೇ ಹಿನ್ನೆಲೆ ಇದೆ. ಚರ್ಚ್‌ನ ಘಂಟೆಗಳು ನಿತ್ಯವೂ ೩ ಬಾರಿ ನಾದ ಮೊಳಗಿಸುತ್ತವೆ. ನಿತ್ಯ ದೇವರ ಸ್ತುತಿಗಾಗಿ ಚರ್ಚ್‌ಗಳ ಘಂಟೆಯು ಭಕ್ತರು ಇದ್ದ ಸ್ಥಳದಲ್ಲಿಯೇ ಪ್ರಾರ್ಥನೆ ಮಾಡಲೆಂದು ಮೊಳಗುತ್ತವೆ.

ಸೂರ್ಯಾಸ್ತದ ನಂತರ ಘಂಟೆ ಬಾರಿಸಿದರೆ ಅಪಾಯದ ಸಂಕೇತ ವೆಂದೇ ಅರ್ಥ, ಉದಾಹರಣೆಗೆ ಒಂದು-ಎರಡು-ಮೂರು, ಒಂದು- ಎರಡು-ಮೂರು, ಎಂದು ಬಾರಿಸಿದಾಗ ಒಂಬತ್ತು ನಾದಗಳು ಹೊರ ಹೊಮ್ಮಬೇಕು. ಆಗ ಯಾರೋ ವ್ಯಕ್ತಿ ಸತ್ತಿದ್ದಾನೆ ಎಂದು ಅರ್ಥ. ಸಂತೋಷದ ವಿಷಯವಾದರೆ ಘಂಟೆಯ ನಾದ ನಿರಂತರವಾಗಿರುತ್ತದೆ. ಪ್ರಾರ್ಥನೆ ಸಮಯದ ಘಂಟೆ ಒಂದು-ಎರಡು-ಮೂರು ಎಂದು ಬಾರಿಸಿ ಮಧ್ಯದಲ್ಲಿ ೧೦ ಸೆಕೆಂಡು ವಿರಮಿಸಿ, ಮತ್ತೆ ಒಂದು-ಎರಡು-ಮೂರು ಬಾರಿ ಬಾರಿಸುತ್ತದೆ. ಹೀಗೆ ೩ ಬಾರಿ ಮೊಳಗಿದರೆ ಅದು ಪ್ರಾರ್ಥನೆಯ ಘಂಟೆಯಾಗಿರುತ್ತದೆ ಎಂದು ಚರ್ಚ್ ಫಾದರ್ ಮಾಹಿತಿ ನೀಡಿದರು.

ಐತಿಹಾಸಿಕ ಘಂಟೆಗಳು ಪ್ರವಾಸಿಗರ ವೀಕ್ಷಣೆಗೆ ಲಭ್ಯವಿವೆ. ಶತ ಮಾನಗಳ ಇತಿಹಾಸ ಹುದುಗಿಸಿಕೊಂಡಿರುವ ಚರ್ಚ್‌ಗಳ ಘಂಟೆಗಳು ಸೌಹಾರ್ದದ ಸಂಕೇತವೂ ಆಗಿವೆ.

andolanait

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

2 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

2 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

4 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

4 hours ago