ಎಡಿಟೋರಿಯಲ್

ಕೋವಿಡ್: ಬೂಸ್ಟರ್ ಡೋಸ್ ಅಭಿಯಾನ ನಿರ್ಲಕ್ಷಿಸಬಾರದಿತ್ತು


ಮಂಜುಕೋಟೆ

ಕೊರೊನಾದಿಂದ ತತ್ತರಿಸಿದ್ದ ದೇಶಕ್ಕೆ ಇದೀಗ ಮತ್ತೆ ಕೊರೊನಾ ೪ನೇ ಅಲೆಯ ಆತಂಕ ಎದುರಾಗಿದ್ದು, ಸರ್ಕಾರ ತರಾತುರಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಹಾಗೂ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮಗಳನ್ನು ಚುರುಕುಗೊಳಿಸಲು ಆರಂಭಿಸಿದೆ. ಕೋವಿಡ್ ಸಾಂಕ್ರಾಮಿಕ ದೇಶಕ್ಕೆ ಕಾಲಿಟ್ಟ ವರ್ಷದ ಬಳಿಕ ದೇಶದಲ್ಲಿ ಕೊವ್ಯಾಕ್ಸಿನ್, ಕೊವಿಶೀಲ್ಡ್ ಲಸಿಕೆಗಳು ಆರಂಭಗೊಂಡವು ಬಳಿಕ ಹಂತ ಹಂತವಾಗಿ ಸಾಮಾನ್ಯ ಜನರವರೆಗೂ ಲಸಿಕೆ ಪೂರೈಕೆಯಾಗುವಂತೆ ಕ್ರಮವಹಿಸಲಾಯಿತು. ಈ ವೇಳೆ ಲಸಿಕೆ ತೆಗೆದುಕೊಂಡ ಕೆಲವರಲ್ಲಿಯೂ ಮತ್ತೆ ಸೋಂಕು ಪತ್ತೆಯಾದ್ದರಿಂದ ಕೇಂದ್ರ ಸರ್ಕಾರ ಕೋವಿಡ್ ವಿರುದ್ಧ ೨೦೨೨ರ ಏಪ್ರಿಲ್‌ನಲ್ಲಿ ಬೂಸ್ಟರ್ ಡೋಸ್ ವಿತರಣೆಗೆ ಮುಂದಾಯಿತು.

ಮುಖ್ಯವಾಹಿನಿಯಲ್ಲಿ ನಿಂತು ಶ್ರಮಿಸುವ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡಿ ಬಳಿಕ ಸಾರ್ವಜನಿಕರಿಗೂ ಬೂಸ್ಟರ್ ಡೋಸ್ ನೀಡುವ ಪ್ರಯತ್ನ ಮಾಡಿದ್ದರು. ಅದನ್ನು ಶೇ.೧೦೦ ಗುರಿ ಸಾಽಸುವವರೆಗೂ ಮುಂದುವರಿಸಬೇಕಿತ್ತು. ಅದರಿಂದ ಇಂದು ಕೋವಿಡ್ ೪ನೇ ಅಲೆ ಕುರಿತು ಇಷ್ಟೊಂದು ಆತಂಕಪಡಬೇಕಿರಲಿಲ್ಲ. ನಡುವೆ ತರಾತುರಿಯಲ್ಲಿ ನಿರ್ಧಾರಗಳನ್ನು ಕೈಗೊಳ್ಳುವ ಸಂದರ್ಭ ಸರ್ಕಾರಕ್ಕೆ ಎದುರಾಗುತ್ತಿರಲಿಲ್ಲವೇನೋ.

ಈಗ ಪ್ರತಿ ತಾಲ್ಲೂಕು ಕೇಂದ್ರಗಳು, ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರ ಬೂಸ್ಟರ್ ಡೋಸ್‌ನ್ನು ಕಡ್ಡಾಯವಾಗಿ ವಿತರಿಸಲು ಮುಂದಾಗಿ. ಅಭಿಯಾನ ಚುರುಕುಗೊಂಡಷ್ಟೇ ವೇಗವಾಗಿ ಇದರ ವಿತರಣೆ ಮತ್ತು ಪೂರೈಕೆ ಚುರುಕಾಗಬೇಕಿದೆ. ನಮ್ಮ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಭಾಗಗಳಲ್ಲಿಯೂ ಬೂಸ್ಟರ್ ಡೋಸ್ ಪಡೆದಿರುವವರ ಸಂಖ್ಯೆ ತೀರಾ ಕಡಿಮೆ. ಈ ಬಗ್ಗೆ ಜಿಲ್ಲಾಡಳಿತಗಳು ಎಚ್ಚೆತ್ತುಕೊಂಡು ಕೋವಿಡ್ ಲಸಿಕೆ ಪಡೆಯದ ಹಾಗೂ ಪಡೆದಿರುವವರ ಲೆಕ್ಕಾಚಾರದಲ್ಲಿ ತೊಡಗಿಸಿಕೊಂಡಿವೆ.

ಬೂಸ್ಟರ್ ಡೋಸ್ ಅಭಿಯಾನದಲ್ಲಿ ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿಯೂ ಶೇ.೫೦ರಷ್ಟು ಸಫಲತೆಯನ್ನೂ ಕೂಡ ಕಾಣಲೇ ಇಲ್ಲ. ಈಗಾಗಲೇ ತಯಾರಾಗಿರುವ ಲಸಿಕೆಗಳ ಬಳಕೆಯ ಅವಽ ಮುಗಿಯುವ ಹಂತಕ್ಕೆ ಬಂದು ವ್ಯರ್ಥವಾಗುವ ಸಾಧ್ಯತೆಗಳಿವೆ. ಇದರಿಂದ ದೇಶದ ಆರ್ಥಿಕತೆಗೂ ಕೂಡ ಹೊಡೆತ ಬೀಳುವ ಸಾಧ್ಯತೆಗಳಿವೆ. ಆದ್ದರಿಂದ ತಯಾರಾದ ಆರಂಭದಲ್ಲಿಯೇ ಸರ್ಕಾರ ಬೂಸ್ಟರ್ ಡೋಸ್ ಅನ್ನು ಕೂಡ ಶೇ.೧೦೦ ರಷ್ಟು ಪೂರ್ಣಗೊಳಿಸಿದ್ದರೆ. ಇಂದು ದೇಶ ಒತ್ತಡದಲ್ಲಿ ತೀರ್ಮಾನಗಳನ್ನು ಕೈಗೊಳ್ಳುವ ಅವಶ್ಯಕತೆ ಇರಲಿಲ್ಲ.

ಸರ್ಕಾರ ಮಾಸ್ಕ್ ಕಡ್ಡಾಯದ ಜೊತೆಗೆ ಬೂಸ್ಟರ್ ಡೋಸ್ ನೀಡಲು ತೀರ್ಮಾನಿಸಿದ್ದು, ಈ ನಡುವೆ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಇಂಟ್ರಾನೇಸಲ್ ಲಸಿಕೆಯ ವಿತರಣೆ ಬಗ್ಗೆ ಸರ್ಕಾರ ಅನುಮತಿ ನೀಡಿದ್ದು, ಆರೋಗ್ಯ ಇಲಾಖೆಯವರು ಈ ಬಗ್ಗೆ ಜನರಿಗೆ ಸೂಕ್ತ ಮಾಹಿತಿ ನೀಡಬೇಕಾದ ಅಗತ್ಯವಿದೆ.

ಇದೊಂದು ಇಂಜೆಕ್ಷನ್ ಮಾದರಿಯಲ್ಲದೆ. ಮೂಗಿನ ಮೂಲಕ ನೀಡಬಹುದಾದ ಹೊಸ ಮಾದರಿಯ ಲಸಿಕೆಯಾಗಿದ್ದು, ಜನ ಸಾಮಾನ್ಯರಿಗೂ ಇದು ಹೊಸದಾಗಿದೆ. ಅದರಲ್ಲಿಯೂ ಗ್ರಾಮಾಂತರ ಭಾಗಗಳಲ್ಲಿ, ಕೃಷಿಕರಲ್ಲಿ ಹಾಗೂ ರೈತರಲ್ಲಿ ಈ ಲಸಿಕೆಯ ಬಗ್ಗೆ ಸಾಕಷ್ಟು ಗೊಂದಲ ಹಾಗೂ ಆತಂಕ ಸೃಷ್ಟಿಯಾಗುವ ಸಾಧ್ಯತೆಗಳಿವೆ. ಆದ್ದರಿಂದ ಬಳಕೆಯ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಸ್ಥಳೀಯ ಆರೋಗ್ಯ ಕೇಂದ್ರಗಳ ಸಿಬ್ಬಂದಿಗಳು, ತಾಲ್ಲೂಕು ಆರೋಗ್ಯ ಅಽಕಾರಿಗಳು, ಜಿಲ್ಲಾ ಆಡಳಿತ ಸೂಕ್ತ ಕ್ರಮವಹಿಸಿ ಈ ಲಸಿಕೆಯ ಬಗ್ಗೆ ಮಾಹಿತಿ ನೀಡಿ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ.

ಕೋವಿಡ್, ಓಮಿಕ್ರಾನ್‌ನ ಉಪತಳಿಯಾಗಿರುವ ಬಿಎಫ್.೭ ಎಂಬ ಹೊಸ ವೈರಸ್‌ಗೆ ನೇಸಲ್ ಲಸಿಕೆ ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗಿದ್ದು, ಇದರ ಬಗ್ಗೆ ಮೊದಲು ಜಾಗೃತಿಯ ಮೂಡಿಸುವ ಅವಶ್ಯಕತೆ ಇದೆ. ಸರ್ಕಾರ ಆ ಬಗ್ಗೆ ಗಮನ ನೀಡಿ ನಂತರ ಲಸಿಕೆ ವಿತರಣೆ ಮಾಡಬೇಕಿದೆ.

ಗ್ರಾಮೀಣ ಭಾಗದಲ್ಲಿ ಇನ್ನೂ ಮೊದಲ ಲಸಿಕೆಯನ್ನು ಸಹ ಪಡೆಯದವರಿದ್ದಾರೆ. ಅವರನ್ನೂ ಸಹ ಗುರುತಿಸಿ ೧೮ ವರ್ಷ ಮೇಲ್ಪಟ್ಟ ಯುವಕ ಯುವತಿಯರಿಗೆ ಲಸಿಕೆಗಳನ್ನು ಪೂರೈಕೆ ಮಾಡಬೇಕಿದೆ. ಮತ್ತೆ ದೇಶದಲ್ಲಿ ಸೋಂಕಿನ ಸಂಖ್ಯೆ ಹೆಚ್ಚಾಗದಂತೆ ಕೂಡಲೇ ಮುಂಜಾಗ್ರತಾಕ್ರಮ ಕೈಗೊಂಡು ಲಸಿಕೆಗಳ ವಿತರಣೆಯನ್ನು ತೀವ್ರ ಪ್ರಮಾಣದಲ್ಲಿ ಚುರುಕುಗೊಳಿಸಬೇಕಿದೆ.

andolanait

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

7 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

8 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

8 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

9 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

9 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

9 hours ago