ಎಡಿಟೋರಿಯಲ್

ಕೊನೆ ಪಯಣಕ್ಕೊಂದು ಸಿದ್ಧತೆ

ಎಲ್ಲರಿಗೂ ಈ ಮಾತನ್ನು ಹೇಳಿದ ತಕ್ಷಣ ಕಣ್ಣಲ್ಲಿ ನೀರು ಬರುತ್ತದೆ, ಆತ್ಮೀಯರಿಗೆ ಕೋಪ ಬರುತ್ತದೆ. ಅದೊಂದು ರೀತಿಯ ಸಾತ್ವಿಕ ಕೋಪ. ಆ ಕೋಪಕ್ಕೆ ನಾವೆಲ್ಲರೂ ಶರಣಾಗಬೇಕು ಕಾರಣ ಅದರಲ್ಲಿ ತುಂಬಾ ಪ್ರೀತಿ ಇರುತ್ತದೆ . ಸಾಮಾನ್ಯವಾಗಿ ಕೊನೆಯ ಪಯಣ ಎಂದಾಕ್ಷಣ ನಮ್ಮೆಲ್ಲರ ನೆನಪಿಗೆ ಬರುವುದುವಿಲ್ಲು. ನಮ್ಮ ಆಸ್ತಿ ಯಾವ ಮಕ್ಕಳಿಗೆ ಹೋಗಬೇಕು, ಹೆಂಡತಿಗೆ ಎಷ್ಟು ಹೋಗಬೇಕು ಈ ರೀತಿಯಾಗಿ ಎಲ್ಲರೂ ಕೂಡ ಯೋಚಿಸುವುದು ಸಹಜ ಗುಣ.

ನಮ್ಮ ಆಸ್ತಿ , ಒಡವೆ , ಅಂತಸ್ತು , ಗಾಡಿ ಇದೆಲ್ಲ ಬಿಟ್ಟು ನಮ್ಮ ಬಳಿ ಒಂದು ದೊಡ್ಡ ಆಸ್ತಿ ಇದೆ. ಅದಾವುದು ಎಂದು ಯಾರಾದರೂ ಯೋಚಿಸಿದ್ದೀರಾ ಅದು ನಮ್ಮ ದೇಹ. ಹೌದು, ನಾವು ಸತ್ತ ಮೇಲೆ ನಮ್ಮ ದೇಹವನ್ನು ಏನು ಮಾಡಬೇಕು ಎಂದು ಮೊದಲೇ ತೀರ್ಮಾನಿಸು ವುದು ಬಹಳ ಒಳ್ಳೆಯದು.

ಹೌದ, ಏನು ಮಾಡ್ತಾರೆ ಅಂತ್ಯಸಂಸ್ಕಾರ ಮಾಡುತ್ತಾರೆ ಅಷ್ಟೇ ಈ ರೀತಿಯಾದ ಯೋಚನೆ ನಮಗೆ ಬರುತ್ತದೆ. ಇಲ್ಲ ಇದಕ್ಕೂ ಮುಂಚೆ ನಾವು ನಮ್ಮ ನೇತ್ರಗಳನ್ನು ದಾನ ಮಾಡಬಹುದು,ಅಂಗಾಂಗ ದಾನ ಮಾಡಬಹುದು ಹಾಗೂ ದೇಹವನ್ನು ದಾನ ಮಾಡಬಹುದು.

ಇದರಿಂದ ಏನು ಪ್ರಯೋಜನ ಎಂದು ಸಾಕಷ್ಟು ಜನ ಪ್ರಶ್ನೆ ಮಾಡುವುದೇ ಹೆಚ್ಚು, ಹೌದು ನಮ್ಮ ನೇತ್ರಗಳನ್ನು ದಾನ ಮಾಡುವುದರಿಂದ ದೃಷ್ಟಿ ಹೀನರಿಗೆ ನಮ್ಮ ಕಣ್ಣುಗಳು ದೃಷ್ಟಿಯ ವರದಾನವನ್ನು ಕೊಡುತ್ತವೆ. ಅಷ್ಟೇ ಅಲ್ಲ ಅಂಗಾಂಗ ದಾನ  ಮಾಡುವುದರಿಂದ ಎಷ್ಟೋ ಬಾರಿ ನಮ್ಮ ದೇಹದ ಅಂಗವನ್ನು ತೆಗೆದು ಕಸಿಮಾಡಿ ಜೀವವನ್ನು ರಕ್ಷಿಸಬಹುದು. ಅಷ್ಟೇ ಅಲ್ಲ ನಮ್ಮ ದೇಹವನ್ನು ದಾನ ಮಾಡುವುದರಿಂದ ಮೆಡಿಕಲ್ ಸ್ಟೂಡೆಂಟ್‌ಗಳಿಗೆ ಬಹಳ ಸಹಾಯವಾಗುತ್ತದೆ. ಇರುವಾಗ ನಾವು ಎಷ್ಟು ಒಳ್ಳೆಯ ಕೆಲಸ ಮಾಡಿದೆವೋ ತಿಳಿದಿಲ್ಲ, ಆದರೆ ಸತ್ತ ಮೇಲೆ ನಮ್ಮ ದೇಹದಿಂದ ಒಂದಿಬ್ಬರಿಗಾದರೂ ಸಹಾಯವಾಗುತ್ತದೆ ಎಂದರೆ ಏಕೆ ಮಾಡಬಾರದು. ಇದನ್ನು ಒಮ್ಮೆ ಯಾರಾದರೂ ಯೋಚಿಸಿದ್ದೀರಾ. ಇದು ಒಂದು ಸತ್ಯ ಘಟನೆ ನನ್ನ ಕಣ್ಣ ಮುಂದೆ ನಡೆದಂತಹ ಘಟನೆ ಇದು. ನಮಗೆ ತಿಳಿದವರು ಒಬ್ಬರು ವಯಸ್ಸಾದ ಮೇಲೆ ಅವರನ್ನು ಅವರ ಮಗ ನೋಡಿಕೊಳ್ಳಲಿಲ್ಲ ಬೇಸರಗೊಂಡು ಅವರು ವೃದ್ಧಾಶ್ರಮವನ್ನು ಸೇರಿಕೊಂಡರು.

ಹಾಗೂ ಕೊನೆಯ ಸಮಯದಲ್ಲಿ ವೃದ್ಧಾಶ್ರಮದವರಿಗೆ ನನ್ನ ದೇಹವನ್ನು ದಯವಿಟ್ಟು ದಾನ ಮಾಡಿ. ನನ್ನ ಮಗ ಬಂದು ಕೇಳಿದರೆ ಕೊಡಬೇಡಿ ಎಂದು ಹೇಳಿದ್ದರು. ಆದರೆ ಈಗಿನ ಸಂಪ್ರದಾಯವಾದಿಗಳು ಎಂದು ಕರೆಸಿಕೊಳ್ಳುವ ಜನ ಅವರ ಮಗನಿಗೆ ಇಲ್ಲ ಸಲ್ಲದ್ದೆಲ್ಲ ಹೇಳಿ ತಂದೆಯ ದೇಹವನ್ನು ತಂದು ಅಂತ್ಯಸಂಸ್ಕಾರ ಮಾಡುವಂತೆ ಮಾಡಿದರು. ಅಲ್ಲ, ಇರುವಾಗ ಒಂದು ತುತ್ತು ಊಟ ಹಾಕದ ಮಗ ಸತ್ತಾಗ ತಂದೆ ದೇಹ ದಾನ ಮಾಡು ಎಂದು ಹೇಳಿದ್ದಾಗಲೂ ಕೂಡ ದೇಹ ತಂದು ಅಂತ್ಯ ಸಂಸ್ಕಾರ ಮಾಡಿ ತಿಥಿ ಕಾರ್ಯವನ್ನು ಮಾಡುವುದು ಎಷ್ಟರಮಟ್ಟಿಗೆ ಸರಿ ಒಮ್ಮೆ ಯೋಚನೆ ಮಾಡಿ. ನಮ್ಮ ದೇಹದ ಮೇಲೆ ನಮಗೆ ಮೊದಲು ಅಧಿಕಾರವಿರುತ್ತದೆ. ಹಾಗಾಗಿ ನಮ್ಮ ದೇಹವನ್ನು ನಾವು ಸತ್ತ ಮೇಲೆ ಏನು ಮಾಡಬೇಕು ಎಂದುನಾವು ಮೊದಲೇ ತೀರ್ಮಾನಿಸಿ ಮನೆಯವರೆಲ್ಲರ ಮುಂದೆ ಅದನ್ನು ಹೇಳುವುದು ನಿಜಕ್ಕೂ ಒಳ್ಳೆಯದು.

ಕಾರಣ ಎಲ್ಲವೂ ಸಹ ಸಂಪ್ರದಾಯವಾಗಿಯೇ ಹಿಂದಿನ ಹಾಗೆ ನಡೆಯಬೇಕು ಎಂದು ಖಂಡಿತವಾಗಿಯೂ ಏನೂ ಇಲ್ಲ. ನಾಲ್ಕು ಜನರಿಗೆ ನಮ್ಮ ದೇಹ ಉಪಯೋಗಕ್ಕೆ ಬರುತ್ತದೆ ಎಂದರೆ ಏಕೆ ಮಾಡಬಾರದು. ನಮ್ಮ ದೇಹವನ್ನು ನಾವು ದಾನ ಮಾಡಿದ್ದೇವೆ ಎಂದರೆ ನಾನು ಈಗಲೇ ಸಾಯಲು ಸಿದ್ಧ ಎಂದು ಅರ್ಥವಲ್ಲ. ನಾನು ಸತ್ತ ನಂತರ ನನ್ನ ದೇಹವನ್ನು ಏನು ಮಾಡಬೇಕು ಎನ್ನುವ ಒಂದು ಸಣ್ಣ ಚಿಂತನೆ ಅಷ್ಟೇ.

ನೀವೇನಾದರೂ ದೇಹ ದಾನ, ಅಂಗಾಂಗ ದಾನ ಹಾಗೂ ನೇತ್ರದಾನಗಳನ್ನು ಮಾಡಿದರೆ ನಾಲ್ಕು ಜನರಿಗೆ ಅದನ್ನು ಹೇಳಿ ಹಾಗೂ ಅವರು ಕೊಡುವ ಒಂದು ಪ್ರಮಾಣ ಪತ್ರವನ್ನು ನಿಮ್ಮ ಹಾಲಿನಲ್ಲಿ ಹಾಕಿ ಕಾರಣ ಅದನ್ನು ನೋಡಿ ನಾಲ್ಕು ಜನ ಹೌದು ಇವರು ದೇಹವನ್ನು ದಾನ ಮಾಡಿದ್ದಾರೆ. ನಾವು ಸಂಬಂಧ ಪಟ್ಟವರಿಗೆ ಫೋನ್ ಮಾಡಬೇಕು ಎಂದು ತಿಳಿಯುತ್ತದೆ.

ವರನಟ ಡಾ. ರಾಜ್‌ಕುಮಾರ್ ಅವರೇ ಈ ನೇತ್ರದಾನದ ಪ್ರೇರಕರು ಅಂದರೆ ಖಂಡಿತವಾಗಿಯೂ ತಪ್ಪಾಗುವುದಿಲ್ಲ ಇದರಿಂದ ಎಷ್ಟೋ ಜನರಿಗೆ ದೃಷ್ಟಿ ಮತ್ತೆ ಮರಳಿದೆ ಇದಕ್ಕಿಂತ ಉತ್ತಮ ಕಾರ್ಯ ಇರಲು ಹೇಗೆ ಸಾಧ್ಯ? ಹಾಗಾಗಿ ಎಲ್ಲರೂ ಇದರ ಬಗ್ಗೆ ಒಮ್ಮೆ ಯೋಚಿಸಿ.

– ಸೌಮ್ಯ ಕೋಠಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಸಿಲಿಂಡರ್‌ ಪೂರೈಕೆ ವ್ಯತ್ಯಯ ಆಗದಂತೆ ಕ್ರಮ ಎಂದ ಪ್ರಧಾನಿ ಮೋದಿ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ…

37 mins ago

ಯುದ್ಧದ ಖರ್ಚು ನಿಭಾಯಿಸಲು ಹೊಸ ದಾರಿ ಹುಡುಕಿದ ಇರಾನ್: ವ್ಯಾಪಾರಿ ಹಡಗುಗಳಿಗೆ ಶುಲ್ಕ

ಟೆಹರಾನ್:‌ ಯುದ್ಧದ ಖರ್ಚು ನಿಭಾಯಿಸಲು ಸಂಚಾರ ಮಾಡುವ ವ್ಯಾಪಾರಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿ ಮೂಲಕ…

52 mins ago

ಅಕಾಲಿಕ ಮಳೆಯಿಂದ ಬೆಳೆನಷ್ಟ: ಪರಿಹಾರ ನೀಡಲು ರೈತ ಸಂಘಟನೆಗಳ ಒತ್ತಾಯ

ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ…

57 mins ago

ಮಧ್ಯಪ್ರಾಚ್ಯ ಸಂಘರ್ಷ: ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಲು ಪ್ರಧಾನಿ ಮೋದಿ ಸಲಹೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು,…

1 hour ago

ಮಾರ್ಚ್.‌25ರಂದು ಸಾಲಿಗ್ರಾಮದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಸಾಲಿಗ್ರಾಮ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾರ್ಚ್.25ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ…

1 hour ago

ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ: ಮೂಲಗಳಿಂದ ಮಾಹಿತಿ

ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್‌…

2 hours ago