ಎಡಿಟೋರಿಯಲ್

‘ಚುನಾವಣೆ, ಚುನಾವಣೆ- ಎಲ್ಲಿದ್ದೀಯವ್ವಾ ಮಹಿಳೆ?’

 

ರೂಪ ಹಾಸನ

   ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲ ಪ್ರಮುಖ ಪಕ್ಷಗಳು ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆಯನ್ನು ಗಮನಿಸಿಎಲ್ಲ ಪಕ್ಷಗಳೂ ಮಹಿಳೆಯರಿಗೆ ಬಾಚಿ ಬಾಚಿ ಬೊಗಸೆ ತುಂಬಿ ತುಳುಕುವಷ್ಟು ಕೊಡುಗೆಉಚಿತ ಉಡುಗೊರೆ ನೀಡುವ ಆಶ್ವಾಸನೆಗಳ ಸುರಿಮಳೆಗರೆದಿವೆ.

ಆದರೆಪ್ರಜಾತಂತ್ರದಲ್ಲಿ ಮಹಿಳೆಯರನ್ನು ಕೇವಲ ಫಲಾನುಭವಿಗಳಾಗಿಸುತ್ತಾ ಯೋಜನೆಗಳ ರಚನೆಯಲ್ಲಿತೀರ್ಮಾನ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮತ್ತು ಶಾಸನ ಸಭೆಯ ಆಡಳಿತದಲ್ಲಿ ಸಮಾನ ಪ್ರಾತಿನಿಧ್ಯವಿರುವಂತೆ ನೋಡಿಕೊಳ್ಳದಿರುವ ಪುರು ಷಾಳ್ವಿಕೆಯ ರಾಜಕೀಯ ತಂತ್ರಗಾರಿಕೆ ಅದೆಷ್ಟು ದುಷ್ಟತನದ್ದು ಅಲ್ಲವೇ?! ಮಹಿಳೆ ಯರ ಸಮಾನ ಒಳಗೊಳ್ಳುವಿಕೆಯಿಲ್ಲದ ಯಾವುದೇ ಕ್ಷೇತ್ರ ಒಂದು ಬಗೆಯ ಮನೋ/ದೈಹಿಕ ಅಂಗವೈಕಲ್ಯತೆಯಿರುವ ಸಮಾಜವೇ ಸೈಜನಸಂಖ್ಯೆಯ ಅಂದಾಜು ಅರ್ಧದಷ್ಟಿರುವ ಮಹಿಳೆಯರು ಶಾಸನ ಸಭೆಯ ಚುನಾವಣೆಗಳ ಸ್ಪರ್ಧೆಯಲ್ಲಿ ನಾವು ಎಲ್ಲಿದ್ದೇವೆ ಎಂದು ದುರ್ಬೀನು ಹಾಕಿ ಹುಡುಕಬೇಕಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಅಂದಾಜು ೪೫ ವರ್ಷಗಳ ಇತಿಹಾಸದಲ್ಲಿ ಎಷ್ಟು ಮಹಿಳೆಯರು ಸ್ಪರ್ಧಿಸಿದ್ದರುಅದರಲ್ಲಿ ಗೆದ್ದವರೆಷ್ಟುಎಂದು ಅವಲೋಕನ ಮಾಡಿದರೆಈ ಅವಧಿಯಲ್ಲಿ 1,114 ಮಹಿಳಾ ಸ್ಪರ್ಧಿಗಳ ಪೈಕಿ 102 ಮಹಿಳಾ ಅಭ್ಯರ್ಥಿಗಳು ಮಾತ್ರ ಚುನಾವಣೆಯಲ್ಲಿ ಗೆದ್ದಿದ್ದಾರೆಹಾಗೆ ಪ್ರತಿಯೊಂದು ಪಕ್ಷದ ಟಿಕೆಟ್ ಹಂಚಿಕೆಯಲ್ಲೂ ಹಲವು ಬಗೆಯ ರಾಜಕೀಯ ತಂತ್ರಗಾರಿಕೆಗಳೂಲೆಕ್ಕಾಚಾರಗಳೂ ಕೆಲಸ ಮಾಡುತ್ತವೆಜಾತಿ/ಧಾರ್ಮಿಕ ಸಮುದಾಯಗಳ ಪ್ರಾಬಲ್ಯಗೆಲುವಿನ ಸಾಧ್ಯತೆಹಣಬಲತೋಳ್ಬಲದ ಸಾಮರ್ಥ್ಯರಾಜಕೀಯ ಅನುಭವಜನಬೆಂಬಲಅಭ್ಯರ್ಥಿಗಳ ಸ್ಥಳೀಯ ಸಮೀಕರಣ… ಮುಂತಾದವಕ್ಕೆ ಆದ್ಯತೆ ನೀಡಲಾಗುತ್ತದೆಲಿಂಗಸಮಾನತೆಯ ಅಂಶ ಅಲ್ಲಿ ಚರ್ಚೆಗೂ ಬರುವುದಿಲ್ಲ!

ರಾಜಕೀಯರಾಜಕಾರಣದ ಚುನಾವಣಾ ತಂತ್ರಗಾರಿಕೆಗಳು ಹೆಚ್ಚಾಗಿ ಗಂಡು ಪಾಳೇಗಾರಿಕೆಯ ಕ್ಷೇತ್ರವೇ ಆಗಿರುವಾಗಪುರುಷರಿಗೆ ಅಸ್ತಿತ್ವದ ಭಯ ಕಾಡುತ್ತದೆಹೀಗಾಗಿ ಒಂದೋ ರಾಜಕಾರಣಿ ಸತ್ತಿದ್ದುಅನುಕಂಪಗಿಟ್ಟಿಸಲು ಅವನ ಪತ್ನಿಗೆಕುಟುಂಬದ ರಾಜಕೀಯ ಪುರುಷರ ಬೆಂಬಲವಿರುವವರಿಗೆ ಅಥವಾ ಸೋಲು ಖಚಿತವಾದ ಸ್ಥಳದಲ್ಲಿ ಮಾತ್ರ ಮಹಿಳೆಗೆ ಟಿಕೆಟ್ ನೀಡುವುದನ್ನು ಹೆಚ್ಚಾಗಿ ಕಾಣುತ್ತಾ ಬಂದಿದ್ದೇವೆಜೊತೆಗೆ ಇತ್ತೀಚೆಗೆ ಸಿನಿಮಾ ಕ್ಷೇತ್ರದ ಮಹಿಳೆಯರನ್ನು ಕೇವಲ ಅವರ ತಾರಾಮೌಲ್ಯವನ್ನು ಪರಿಗಣಿಸಿಮತ್ಯಾವ ರಾಜಕೀಯ ಅರ್ಹತೆ ಇಲ್ಲದಿದ್ದಾಗಲೂ ರಾಜಕೀಯಕ್ಕೆ ಕರೆ ತರುವ ಕೆಟ್ಟ ಪದ್ಧತಿಯೂ ಚಾಲ್ತಿಗೆ ಬಂದಿದೆ.

ಇಂತಹ ಅವಲಕ್ಷಣದ ರಾಜಕೀಯ ಸನ್ನಿವೇಶದಲ್ಲಿ ನಾಯಕತ್ವ ಗುಣಸಂಘಟನಾ ಚಾತುರ್ಯವಿರುವ ಮಹಿಳೆಯರು ಕೂಡ ರಾಜಕೀಯ ಪ್ರವೇಶಿಸಲು ಬಯಸುವುದು ಕಡಿಮೆಯೆಆದರೆ ಈ ಚಿತ್ರಣ ಹೇಗಾದರೂ ಸರಿ ಬದಲಾಗಲೇಬೇಕು.

ಇನ್ನು ಚುನಾವಣೆ ಗೆದ್ದ ಮಹಿಳೆಯರಲ್ಲಿ ಸಚಿವ ಸ್ಥಾನ ದಕ್ಕಿದ್ದೆಷ್ಟು ಮಂದಿಗೆ ಎಂದು ನೋಡಿದರೆ– 1952ರಲ್ಲಿ ರಾಜ್ಯ ಮೊದಲ ಶಾಸಕಾಂಗ ಸಭೆ ಅಸ್ತಿತ್ವಕ್ಕೆ ಬಂದ ನಂತರದಿಂದ ಇದುವರೆಗೆ ಕೇವಲ 31 ಮಹಿಳೆಯರು ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆಅದರಲ್ಲಿ ಹೆಚ್ಚಿನವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ‘ಮಹಿಳೆಯರು ಮುಖ್ಯವಾಗಿ ಕುಟುಂಬ ಪಾಲಕರು ಮತ್ತು ಸಂಸ್ಕೃ ತಿ ರಕ್ಷಕರು ಆದ್ದರಿಂದ ಅವರಿಗೆ ಈ ಹುದ್ದೆಗಳೇ ಅರ್ಹ’ ಎಂಬ ಪಿತೃಪ್ರಾಧಾನ್ಯದ ಪೂರ್ವಗ್ರಹವೇ ಈ ಹಂಚಿಕೆಯ ಹಿಂದಿರುವ ಲೆಕ್ಕಾಚಾರವೆಂಬುದು ಯಾರೂ ಊಹಿಸಬಹುದಾದ ಸತ್ಯಇದಕ್ಕೆ ಅಪವಾದವೆಂಬಂತೆ ಒಂದೆರಡು ಬಾರಿ ಮಾತ್ರ ವೈದ್ಯಕೀಯ ಶಿಕ್ಷಣವಿಜ್ಞಾನ ಮತ್ತು ತಂತ್ರಜ್ಞಾನಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ವಿದ್ಯುತ್ ಖಾತೆಗಳ ಸಚಿವ ಸ್ಥಾನ ಮಹಿಳೆಯರಿಗೆ ದೊರಕಿದೆಯಷ್ಟೇಇನ್ನು ಮುಖ್ಯಮಂತ್ರಿ ಇರಲಿಉಪಮುಖ್ಯಮಂತ್ರಿಯ ಸ್ಥಾನವೂ ಕನಸಾಗಿಯೇ ಉಳಿದಿದೆ!

ಈ ಬಾರಿಯ ಚುನಾವಣೆಯ ಚಿತ್ರಣದಲ್ಲೇನೂ ಮಹಿಳಾ ಪ್ರಾತಿನಿಧ್ಯದಲ್ಲಿ ಹೆಚ್ಚಿನ ಬದಲಾವಣೆ ಆಗಿಲ್ಲಈ ಬಾರಿ ಸ್ಪರ್ಧಿಸಿರುವ 2613 ಅಭ್ಯರ್ಥಿಗಳಲ್ಲಿ, 185 ಮಹಿಳೆಯರು ಮಾತ್ರ ಕಣದಲ್ಲಿದ್ದಾರೆಕಳೆದ ಬಾರಿ 219 ಇದ್ದ ಸಂಖ್ಯೆ ಈ ಬಾರಿ ಏರಿಕೆಯ ಬದಲುಮತ್ತಷ್ಟು ಕುಸಿತ ಕಂಡಿದೆಪ್ರಮುಖ ಪಕ್ಷಗಳಾದ ಕಾಂಗ್ರೆಸ್ಬಿಜೆಪಿಜನತಾದಳ ಈ ಬಾರಿ ಶೇ.5ರಷ್ಟೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿಲ್ಲವೆಂಬುದು ವಿಪರ್ಯಾಸಹಾಗೆ ಎಡ ಹಾಗೂ ಪ್ರಗತಿಪರ ಚಿಂತನೆಯ ಪಕ್ಷಗಳಲ್ಲಿ ಮಹಿಳಾ ಸ್ಪರ್ಧೆ ಗೌಣಇಲ್ಲವೇ ಬೆರಳೆಣಿಕೆಯಷ್ಟು ಮಾತ್ರ ಇರುವುದು ದುರಂತಪ್ರಾಯೋಗಿಕವಾಗಿ ಸ್ಪರ್ಧಿಸುವ ಕೆಲ ಹೊಸ ಪಕ್ಷಗಳಲ್ಲಿ ಹೆಚ್ಚಿನ ಮಹಿಳೆಯರು ಚುನಾವಣಾ ಕಣಕ್ಕಿಳಿದಿರುವುದು ಸ್ವಾಗತಾರ್ಹಹೀಗಿದ್ದೂ ಒಟ್ಟಾರೆ ಈ ಬಾರಿಯ ಚುನಾವಣೆಯಲ್ಲಿ ಮಹಿಳಾ ಪ್ರಾತಿನಿಧ್ಯ ಕೇವಲ ಶೇ.7ರಷ್ಟು ಮಾತ್ರ!

ಆದರೆಚುನಾವಣೆಯಲ್ಲಿ ಸ್ಪರ್ಧೆಗಿಳಿಸಲು ಮಹಿಳೆಯರನ್ನು ಒಳಗೊಳ್ಳುವುದು ಅತ್ಯಲ್ಪವಾದರೂರಾಜಕೀಯ ಪಕ್ಷಗಳ ಗೆಲುವಿಗೆ ಮಹಿಳಾ ಮತದಾರರೇ ನಿರ್ಣಾಯಕರುಮಹಿಳಾ ಮತದಾರರ ಸಂಖ್ಯೆ ಚುನಾವಣೆಯಿಂದ ಚುನಾವಣೆಗೆ ಹೆಚ್ಚುತ್ತಿದ್ದುಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 2.63 ಕೋಟಿ ಮಹಿಳಾ ಮತದಾರರಿದ್ದಾರೆಅದರಲ್ಲೂ ಕರ್ನಾಟಕದ ಅರ್ಧದಷ್ಟು ವಿಧಾನಸಭಾ ಕ್ಷೇತ್ರಗಳಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರೇ ಹೆಚ್ಚಿದ್ದಾರೆಹೀಗಾಗಿ ರಾಜಕೀಯ ಪಕ್ಷಗಳಿಗೆ ಚುನಾವಣೆಯಲ್ಲಿ ಮಹಿಳೆ ಹೆಚ್ಚಾಗಿ ವೋಟ್ ಬ್ಯಾಂಕ್ ಆಗಿ ಮಾತ್ರ ಗೋಚರಿಸುತ್ತಿದ್ದಾಳೆಹೆಚ್ಚಿನ ರಾಷ್ಟ್ರೀಯಪ್ರಾದೇಶಿಕ ಅಥವಾ ಪ್ರಗತಿಪರ ಪಕ್ಷಗಳು ಶಾಸನ ಸಭೆಗಳಲ್ಲಿ ಮಹಿಳಾ ಮೀಸಲಾತಿಯ ಕುರಿತು ದಶಕಗಳಿಂದ ತುಟಿಯಂಚಿನ ಒತ್ತಾಯದ ಮಾತುಗಳನ್ನಾಡುತ್ತಲೇ ಬಂದಿವೆಆದರೆ ಯಾರಿಗೂ ಇಚ್ಛಾಶಕ್ತಿ ಇಲ್ಲಅವುಗಳು ಆಂತರ್ಯದಲ್ಲಿ ಈ ಮೀಸಲಾತಿಯ ವಿರೋಧವಾಗಿಯೇ ಇವೆಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕಾರಣಕ್ಕೆ ಬಂದರೆ ರಾಜಕಾರಣದಲ್ಲಿ ಪುರುಷ ಪ್ರಾತಿನಿಧ್ಯ ಕಡಿಮೆ ಆಗುತ್ತದೆ ಎನ್ನುವ ಆತಂಕಅಧಿಕಾರದ ರುಚಿಯನ್ನು ಅನುಭವಿಸುತ್ತಾ ಬಂದಿರುವ ಎಲ್ಲ ಪಕ್ಷಗಳ ಹೆಚ್ಚಿನ ಪುರುಷಾಧಿಪತಿಗಳದ್ದೂಆಗಿದೆ.

 

ಆದರೆಇನ್ನು ಮುಂದೆಯೂ ಹೀಗಾಗಬಾರದುಮಹಿಳಾ ಮೀಸಲಾತಿಯು ರಾಜಕೀಯವನ್ನೂ ಒಳಗೊಂಡು ಎಲ್ಲ ಕ್ಷೇತ್ರಗಳಲ್ಲಿಯೂ ಜಾರಿಗೆ ಬರಬೇಕುವೈಜ್ಞಾನಿಕವಾಗಿ ಶಾಸನಸಭೆಗೆ ಮಹಿಳಾ ಮೀಸಲಾತಿಯು ಜನಸಂಖ್ಯಾಧಾರಿತ ವಾಗಿ ಅಂದರೆ ಶೇ.50ರಷ್ಟು ಮೀಸಲಾತಿಯನ್ನು ಪಡೆಯಬೇಕಿರುವುದು ಎಲ್ಲ ರೀತಿಯಲ್ಲೂ ಅಪೇಕ್ಷಣೀಯವಾದುದುಆದರೆ ಸದ್ಯಸರ್ಕಾರಗಳು ಒಪ್ಪಿಕೊಂಡಿರುವ ಶೇ.33 ಆದರೂ ತಕ್ಷಣಕ್ಕೆ ಜಾರಿಯಾಗಲೇಬೇಕುಆಗ ಮಾತ್ರ ನಮ್ಮ ಸಾರ್ವತ್ರಿಕ ಚುನಾವಣೆಗಳಲ್ಲಿ ಮಹಿಳೆಯನ್ನು ಒಳಗೊಂಡ ಸರ್ಕಾರಗಳಲ್ಲಿ ಒಟ್ಟಾರೆ ಸಮಾಜದಲ್ಲಿ ಮೂಲಮಟ್ಟದ ಬದಲಾವಣೆಯನ್ನು ನಿರೀಕ್ಷಿಸಲು ಸಾಧ್ಯವಾಗಬಹುದುಇನ್ನಾದರೂ ಇದನ್ನು ಸಾಧ್ಯವಾಗಿಸುವತ್ತ ಎಚ್ಚೆತ್ತ ಮಹಿಳಾ ಸಮೂಹ ತುರ್ತು ಕಾರ್ಯಪ್ರವೃತ್ತವಾಗಲೇಬೇಕಿದೆ.

andolanait

Recent Posts

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್‌

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…

32 mins ago

ಅಡಕೆಗೆ ಎಲೆಚುಕ್ಕಿ, ಹಳದಿ ರೋಗ ಬಾಧೆ

ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…

1 hour ago

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…

2 hours ago

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

4 hours ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

4 hours ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

4 hours ago