ಬಿ.ಕೆ.ಬಸವರಾಜ,
ನಿವೃತ್ತ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ.
ರಾಜ್ಯ ಸರ್ಕಾರ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ೫ನೇ ಮತ್ತು ೮ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಮಟ್ಟವನ್ನು ಸುಧಾರಿಸುವ ಸಲುವಾಗಿ ವಾರ್ಷಿಕ ಪರೀಕ್ಷೆಯನ್ನು ನಡೆಸುವುದಾಗಿ ಆದೇಶಿಸಿದ್ದು, ಮಕ್ಕಳ ಕಲಿಕಾ ದೃಷ್ಟಿಯಿಂದ ಇದು ಉತ್ತಮ ನಿರ್ಧಾರ ಎನ್ನಬಹುದು.
ಮಕ್ಕಳಿಗೆ ಯಾವುದೇ ಒಂದು ಪ್ರಾಯೋಗಿಕ ಕೆಲಸಗಳನ್ನು ನೀಡುವುದರ ಉದ್ದೇಶ ಅವರ ಕಲಿಕಾ ಕೊರತೆಯನ್ನು ನೀಗಿಸುವುದು ಮತ್ತು ಕಲಿಕೆಯ ಸುಧಾರಣೆ ಹೇಗಿದೆ ಎಂಬುದನ್ನು ತಿಳಿಯುವುದಾಗಿರುತ್ತದೆ. ಆದ್ದರಿಂದ ಈ ಬಾರಿ ಸರ್ಕಾರ ೫ನೇ ಮತ್ತು ೮ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನೀಡುತ್ತಿರುವುದು ಒಂದೆಡೆ ಸ್ವಾಗತಾರ್ಹವಾದರೂ, ಅದು ಯಾವ ರೀತಿ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬುದನ್ನು ಒಂದು ಅಥವಾ ಎರಡು ವರ್ಷಗಳ ಬಳಿಕವಷ್ಟೇ ಚರ್ಚಿಸುವುದು ಸೂಕ್ತವೆನಿಸುತ್ತದೆ.
ಪ್ರಸ್ತುತ ೧ ರಿಂದ ೯ನೇ ತರಗತಿವರೆಗೆ ಮಕ್ಕಳನ್ನು ಪಾಸ್ ಮಾಡಲಾಗುತ್ತಿದೆ. ಇದರಿಂದ ಮಕ್ಕಳ ಕಲಿಕಾ ಆಸಕ್ತಿ ಕಡಿಮೆಯಾಗಿದೆ ಎಂಬ ಆಪಾದನೆಯೂ ಇದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ರೀತಿಯ ವಾರ್ಷಿಕ ಪರೀಕ್ಷೆಗಳು ಸೂಕ್ತ ವಿಧಾನಎನ್ನಬಹುದು. ಇದರಿಂದ ಮಕ್ಕಳ ಕಲಿಕಾ ಮಟ್ಟಕ್ಕೆ ಅನುಗುಣವಾಗಿ ಬೋಧನಾ ವಿಧಾನವನ್ನು ಅನುಸರಿಸಲು ಸಹಾಯಕವಾಗಿದೆ. ಮಕ್ಕಳ ಬೌದ್ಧಿಕ ಮಟ್ಟ ಹೇಗಿದೆ? ಯಾವ ವಿಧಾನದಲ್ಲಿ ಮಕ್ಕಳಿಗೆ ಬೋಧನೆ ಮಾಡಬೇಕು? ಎಂಬುದಾಗಿ ಶಿಕ್ಷಕರನ್ನು ಕಾಡುವ ಪ್ರಶ್ನೆಗಳಿಗೆ, ಉತ್ತರ ದೊರೆಯಲೂ ಇದು ಸಹಕಾರಿಯಾಗಲಿದೆ.
ಸರ್ಕಾರ ಕೂಡ ಯೋಜನೆ ಜಾರಿಗೊಳಿಸುವ ಮುನ್ನವೇ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಂಡಿರುತ್ತದೆ. ಮಕ್ಕಳ ಕಲಿಕೆಯ ಸುಧಾರಣೆಗಾಗಿ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡರೂ ಏಕಾಏಕಿ ಸಾರ್ವಜನಿಕರು ಅದರ ಸಾಧಕ ಬಾಧಕಗಳನ್ನು ವಿಶ್ಲೇ ಷಿಸುವುದು ಅಷ್ಟು ಸಮಂಜಸ ಅನಿಸುವುದಿಲ್ಲ. ಅದಕ್ಕೆ ಸಾಕಷ್ಟು ಸಮಯಾ ವಕಾಶ ಬೇಕಾಗುತ್ತದೆ. ಯಾವುದೇ ನೂತನ ಶಿಕ್ಷಣ ವ್ಯವಸ್ಥೆಗಳು ಜಾರಿಯಾದಾ ಗಲೂ ಅದು ಮಕ್ಕಳ ಮೇಲೆ ಯಾವ ರೀತಿ ಪರಿಣಾಮ ಬೀರಬಲ್ಲದು ಎಂಬುದು ಒಂದು ಅಥವಾ ಎರಡು ವರ್ಷಗಳು ಕಳೆದ ಬಳಿಕವಷ್ಟೇ ಅರ್ಥವಾಗುತ್ತದೆ.
ಮುಂದಿನ ಪರೀಕ್ಷೆಗಳು ಅಂದರೆ ಮಕ್ಕಳು ತಮ್ಮ ಭವಿಷ್ಯದಲ್ಲಿ ಎದುರಿಸಬಹುದಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸೂಕ್ತ ತಯಾರಿ ನಡೆಸಲು ಈ ಯೋಜನೆ ಸೂಕ್ತವಾಗಬಹುದಾಗಿದೆ. ಅಂತಹ ಸಂದರ್ಭಗಳನ್ನು ಎದುರಿಸಲು ಮಕ್ಕಳಲ್ಲಿ ಕಲಿಕೆ ಮಟ್ಟ ಹಾಗೂ ಅವರಲ್ಲಿನ ಕೊರತೆಯನ್ನು ತಿಳಿದು, ಅದನ್ನು ನಿವಾರಿಸಲು ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಯೋಜಿಸಲು ಸರ್ಕಾರಕ್ಕೆ ಅನುಕೂಲವಾಗುತ್ತದೆ.
ಇನ್ನು ಕೋವಿಡ್ ಸಂದರ್ಭದಲ್ಲಿ ಮಕ್ಕಳಿಗೆ ೨ವರ್ಷಗಳು ಶಾಲೆ ಇಲ್ಲದೆ ಕಲಿಕಾ ಮಟ್ಟ ತೀರಾ ಕುಸಿದಿತ್ತು. ಈ ಸಂಧರ್ಭದಲ್ಲಿ ಸರ್ಕಾರ ಆನ್ಲೈನ್ ತರಗತಿಗಳನ್ನು ನಡೆಸಿತಾದರೂ ೨ ವರ್ಷದಲ್ಲಿ ಪಠ್ಯಕ್ರಮ ಚಟು ವಟಿಕೆಗಳಲ್ಲಿ ಉಂಟಾದ ಏರುಪೇರುಗಳನ್ನು ಸರಿದೂಗಿಸಲು ಶಾಲೆಗಳು ಪುನಾರಂಭವಾಗ ಬೇಕಾಯಿತು. ಅದರಿಂದ ಮಕ್ಕಳು ಮರಳಿ ತಮ್ಮ ಪಠ್ಯ ಚಟುವಟಿಕೆಗಳ ಕಡೆ ಆಸಕ್ತಿ ವಹಿಸಲು ಸಹಾಯಕವಾಯಿತು.
ಇನ್ನು ಈ ವಾರ್ಷಿಕ ಪರೀಕ್ಷೆ ಜಾರಿಯಿಂದ ಶಿಕ್ಷಕರಿಗೂ ಒಂದು ಪ್ರತಿಕ್ರಿಯೆ ದೊರಕುತ್ತದೆ ಎಂದರೆ ತಪ್ಪಾಗಲಾರದು. ಮಕ್ಕಳಿಗೆ ತಾವು ಯಾವ ವಿಚಾರ ವನ್ನು ಹೇಗೆ ಬೋಽಸಬೇಕು? ಎಷ್ಟು ಪ್ರಮಾಣದಲ್ಲಿ ಅದನ್ನು ಅರ್ಥೈ ಸಿಕೊಳ್ಳಲು ಸಾಧ್ಯವೆಂಬುದನ್ನು ಶಿಕ್ಷಕರು ತಿಳಿದು ಮುಂದಿನ ಹಂತದ ತಯಾರಿ ಗೆ ಅನುಕೂಲ ಕಲ್ಪಿಸುತ್ತದೆ. ಒಟ್ಟಾರೆ ಇದು ಯಾವ ರೀತಿ ಪರಿಣಾಮ ಕಾರಿಯಾಗಲಿದೆ ಎಂಬುದನ್ನು ಒಂದೆರಡು ವರ್ಷಗಳು ಕಾದು ನೋಡಬೇಕಿದೆ.
ನಿರೂಪಣೆ: ಅನಿಲ್ ಅಂತರಸಂತೆ
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾತನೂರು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ್ ರವಿಕುಮಾರ್…
ಬೆಂಗಳೂರು: ಕರ್ನಾಟಕ ಆಡಳಿತ ಸೇವೆ( ಕೆಎಎಸ್)ಯ ಮುಖ್ಯ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ…
ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ…