ಎಡಿಟೋರಿಯಲ್

ಪರೀಕ್ಷೆಗಳು ಮಕ್ಕಳ ಕಲಿಕಾ ಕೊರತೆ ನೀಗಿಸಲು ಸಹಾಯಕ

ಬಿ.ಕೆ.ಬಸವರಾಜ,

ನಿವೃತ್ತ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ.

ರಾಜ್ಯ ಸರ್ಕಾರ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ೫ನೇ ಮತ್ತು ೮ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಮಟ್ಟವನ್ನು ಸುಧಾರಿಸುವ ಸಲುವಾಗಿ ವಾರ್ಷಿಕ ಪರೀಕ್ಷೆಯನ್ನು ನಡೆಸುವುದಾಗಿ ಆದೇಶಿಸಿದ್ದು, ಮಕ್ಕಳ ಕಲಿಕಾ ದೃಷ್ಟಿಯಿಂದ ಇದು ಉತ್ತಮ ನಿರ್ಧಾರ ಎನ್ನಬಹುದು.

ಮಕ್ಕಳಿಗೆ ಯಾವುದೇ ಒಂದು ಪ್ರಾಯೋಗಿಕ ಕೆಲಸಗಳನ್ನು ನೀಡುವುದರ ಉದ್ದೇಶ ಅವರ ಕಲಿಕಾ ಕೊರತೆಯನ್ನು ನೀಗಿಸುವುದು ಮತ್ತು ಕಲಿಕೆಯ ಸುಧಾರಣೆ ಹೇಗಿದೆ ಎಂಬುದನ್ನು ತಿಳಿಯುವುದಾಗಿರುತ್ತದೆ. ಆದ್ದರಿಂದ ಈ ಬಾರಿ ಸರ್ಕಾರ ೫ನೇ ಮತ್ತು ೮ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನೀಡುತ್ತಿರುವುದು ಒಂದೆಡೆ ಸ್ವಾಗತಾರ್ಹವಾದರೂ, ಅದು ಯಾವ ರೀತಿ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬುದನ್ನು ಒಂದು ಅಥವಾ ಎರಡು ವರ್ಷಗಳ ಬಳಿಕವಷ್ಟೇ ಚರ್ಚಿಸುವುದು ಸೂಕ್ತವೆನಿಸುತ್ತದೆ.

ಪ್ರಸ್ತುತ ೧ ರಿಂದ ೯ನೇ ತರಗತಿವರೆಗೆ ಮಕ್ಕಳನ್ನು ಪಾಸ್ ಮಾಡಲಾಗುತ್ತಿದೆ. ಇದರಿಂದ ಮಕ್ಕಳ ಕಲಿಕಾ ಆಸಕ್ತಿ ಕಡಿಮೆಯಾಗಿದೆ ಎಂಬ ಆಪಾದನೆಯೂ ಇದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ರೀತಿಯ ವಾರ್ಷಿಕ ಪರೀಕ್ಷೆಗಳು ಸೂಕ್ತ ವಿಧಾನಎನ್ನಬಹುದು. ಇದರಿಂದ ಮಕ್ಕಳ ಕಲಿಕಾ ಮಟ್ಟಕ್ಕೆ ಅನುಗುಣವಾಗಿ ಬೋಧನಾ ವಿಧಾನವನ್ನು ಅನುಸರಿಸಲು ಸಹಾಯಕವಾಗಿದೆ. ಮಕ್ಕಳ ಬೌದ್ಧಿಕ ಮಟ್ಟ ಹೇಗಿದೆ? ಯಾವ ವಿಧಾನದಲ್ಲಿ ಮಕ್ಕಳಿಗೆ ಬೋಧನೆ ಮಾಡಬೇಕು? ಎಂಬುದಾಗಿ ಶಿಕ್ಷಕರನ್ನು ಕಾಡುವ ಪ್ರಶ್ನೆಗಳಿಗೆ, ಉತ್ತರ ದೊರೆಯಲೂ ಇದು ಸಹಕಾರಿಯಾಗಲಿದೆ.

ಸರ್ಕಾರ ಕೂಡ ಯೋಜನೆ ಜಾರಿಗೊಳಿಸುವ ಮುನ್ನವೇ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಂಡಿರುತ್ತದೆ. ಮಕ್ಕಳ ಕಲಿಕೆಯ ಸುಧಾರಣೆಗಾಗಿ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡರೂ ಏಕಾಏಕಿ ಸಾರ್ವಜನಿಕರು ಅದರ ಸಾಧಕ ಬಾಧಕಗಳನ್ನು ವಿಶ್ಲೇ ಷಿಸುವುದು ಅಷ್ಟು ಸಮಂಜಸ ಅನಿಸುವುದಿಲ್ಲ. ಅದಕ್ಕೆ ಸಾಕಷ್ಟು ಸಮಯಾ ವಕಾಶ ಬೇಕಾಗುತ್ತದೆ. ಯಾವುದೇ ನೂತನ ಶಿಕ್ಷಣ ವ್ಯವಸ್ಥೆಗಳು ಜಾರಿಯಾದಾ ಗಲೂ ಅದು ಮಕ್ಕಳ ಮೇಲೆ ಯಾವ ರೀತಿ ಪರಿಣಾಮ ಬೀರಬಲ್ಲದು ಎಂಬುದು ಒಂದು ಅಥವಾ ಎರಡು ವರ್ಷಗಳು ಕಳೆದ ಬಳಿಕವಷ್ಟೇ ಅರ್ಥವಾಗುತ್ತದೆ.

ಮುಂದಿನ ಪರೀಕ್ಷೆಗಳು ಅಂದರೆ ಮಕ್ಕಳು ತಮ್ಮ ಭವಿಷ್ಯದಲ್ಲಿ ಎದುರಿಸಬಹುದಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸೂಕ್ತ ತಯಾರಿ ನಡೆಸಲು ಈ ಯೋಜನೆ ಸೂಕ್ತವಾಗಬಹುದಾಗಿದೆ. ಅಂತಹ ಸಂದರ್ಭಗಳನ್ನು ಎದುರಿಸಲು ಮಕ್ಕಳಲ್ಲಿ ಕಲಿಕೆ ಮಟ್ಟ ಹಾಗೂ ಅವರಲ್ಲಿನ ಕೊರತೆಯನ್ನು ತಿಳಿದು, ಅದನ್ನು ನಿವಾರಿಸಲು ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಯೋಜಿಸಲು ಸರ್ಕಾರಕ್ಕೆ ಅನುಕೂಲವಾಗುತ್ತದೆ.

ಇನ್ನು ಕೋವಿಡ್ ಸಂದರ್ಭದಲ್ಲಿ ಮಕ್ಕಳಿಗೆ ೨ವರ್ಷಗಳು ಶಾಲೆ ಇಲ್ಲದೆ ಕಲಿಕಾ ಮಟ್ಟ ತೀರಾ ಕುಸಿದಿತ್ತು. ಈ ಸಂಧರ್ಭದಲ್ಲಿ ಸರ್ಕಾರ ಆನ್‌ಲೈನ್ ತರಗತಿಗಳನ್ನು ನಡೆಸಿತಾದರೂ ೨ ವರ್ಷದಲ್ಲಿ ಪಠ್ಯಕ್ರಮ ಚಟು ವಟಿಕೆಗಳಲ್ಲಿ ಉಂಟಾದ ಏರುಪೇರುಗಳನ್ನು ಸರಿದೂಗಿಸಲು ಶಾಲೆಗಳು ಪುನಾರಂಭವಾಗ ಬೇಕಾಯಿತು. ಅದರಿಂದ ಮಕ್ಕಳು ಮರಳಿ ತಮ್ಮ ಪಠ್ಯ ಚಟುವಟಿಕೆಗಳ ಕಡೆ ಆಸಕ್ತಿ ವಹಿಸಲು ಸಹಾಯಕವಾಯಿತು.

ಇನ್ನು ಈ ವಾರ್ಷಿಕ ಪರೀಕ್ಷೆ ಜಾರಿಯಿಂದ ಶಿಕ್ಷಕರಿಗೂ ಒಂದು ಪ್ರತಿಕ್ರಿಯೆ ದೊರಕುತ್ತದೆ ಎಂದರೆ ತಪ್ಪಾಗಲಾರದು. ಮಕ್ಕಳಿಗೆ ತಾವು ಯಾವ ವಿಚಾರ ವನ್ನು ಹೇಗೆ ಬೋಽಸಬೇಕು? ಎಷ್ಟು ಪ್ರಮಾಣದಲ್ಲಿ ಅದನ್ನು ಅರ್ಥೈ ಸಿಕೊಳ್ಳಲು ಸಾಧ್ಯವೆಂಬುದನ್ನು ಶಿಕ್ಷಕರು ತಿಳಿದು ಮುಂದಿನ ಹಂತದ ತಯಾರಿ ಗೆ ಅನುಕೂಲ ಕಲ್ಪಿಸುತ್ತದೆ. ಒಟ್ಟಾರೆ ಇದು ಯಾವ ರೀತಿ ಪರಿಣಾಮ ಕಾರಿಯಾಗಲಿದೆ ಎಂಬುದನ್ನು ಒಂದೆರಡು ವರ್ಷಗಳು ಕಾದು ನೋಡಬೇಕಿದೆ.

ನಿರೂಪಣೆ: ಅನಿಲ್ ಅಂತರಸಂತೆ

andolanait

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

15 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

17 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

17 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

22 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

23 hours ago