ಎಡಿಟೋರಿಯಲ್

ಪರೀಕ್ಷೆಗಳು ಮಕ್ಕಳ ಕಲಿಕಾ ಕೊರತೆ ನೀಗಿಸಲು ಸಹಾಯಕ

ಬಿ.ಕೆ.ಬಸವರಾಜ,

ನಿವೃತ್ತ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ.

ರಾಜ್ಯ ಸರ್ಕಾರ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ೫ನೇ ಮತ್ತು ೮ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಮಟ್ಟವನ್ನು ಸುಧಾರಿಸುವ ಸಲುವಾಗಿ ವಾರ್ಷಿಕ ಪರೀಕ್ಷೆಯನ್ನು ನಡೆಸುವುದಾಗಿ ಆದೇಶಿಸಿದ್ದು, ಮಕ್ಕಳ ಕಲಿಕಾ ದೃಷ್ಟಿಯಿಂದ ಇದು ಉತ್ತಮ ನಿರ್ಧಾರ ಎನ್ನಬಹುದು.

ಮಕ್ಕಳಿಗೆ ಯಾವುದೇ ಒಂದು ಪ್ರಾಯೋಗಿಕ ಕೆಲಸಗಳನ್ನು ನೀಡುವುದರ ಉದ್ದೇಶ ಅವರ ಕಲಿಕಾ ಕೊರತೆಯನ್ನು ನೀಗಿಸುವುದು ಮತ್ತು ಕಲಿಕೆಯ ಸುಧಾರಣೆ ಹೇಗಿದೆ ಎಂಬುದನ್ನು ತಿಳಿಯುವುದಾಗಿರುತ್ತದೆ. ಆದ್ದರಿಂದ ಈ ಬಾರಿ ಸರ್ಕಾರ ೫ನೇ ಮತ್ತು ೮ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನೀಡುತ್ತಿರುವುದು ಒಂದೆಡೆ ಸ್ವಾಗತಾರ್ಹವಾದರೂ, ಅದು ಯಾವ ರೀತಿ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬುದನ್ನು ಒಂದು ಅಥವಾ ಎರಡು ವರ್ಷಗಳ ಬಳಿಕವಷ್ಟೇ ಚರ್ಚಿಸುವುದು ಸೂಕ್ತವೆನಿಸುತ್ತದೆ.

ಪ್ರಸ್ತುತ ೧ ರಿಂದ ೯ನೇ ತರಗತಿವರೆಗೆ ಮಕ್ಕಳನ್ನು ಪಾಸ್ ಮಾಡಲಾಗುತ್ತಿದೆ. ಇದರಿಂದ ಮಕ್ಕಳ ಕಲಿಕಾ ಆಸಕ್ತಿ ಕಡಿಮೆಯಾಗಿದೆ ಎಂಬ ಆಪಾದನೆಯೂ ಇದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ರೀತಿಯ ವಾರ್ಷಿಕ ಪರೀಕ್ಷೆಗಳು ಸೂಕ್ತ ವಿಧಾನಎನ್ನಬಹುದು. ಇದರಿಂದ ಮಕ್ಕಳ ಕಲಿಕಾ ಮಟ್ಟಕ್ಕೆ ಅನುಗುಣವಾಗಿ ಬೋಧನಾ ವಿಧಾನವನ್ನು ಅನುಸರಿಸಲು ಸಹಾಯಕವಾಗಿದೆ. ಮಕ್ಕಳ ಬೌದ್ಧಿಕ ಮಟ್ಟ ಹೇಗಿದೆ? ಯಾವ ವಿಧಾನದಲ್ಲಿ ಮಕ್ಕಳಿಗೆ ಬೋಧನೆ ಮಾಡಬೇಕು? ಎಂಬುದಾಗಿ ಶಿಕ್ಷಕರನ್ನು ಕಾಡುವ ಪ್ರಶ್ನೆಗಳಿಗೆ, ಉತ್ತರ ದೊರೆಯಲೂ ಇದು ಸಹಕಾರಿಯಾಗಲಿದೆ.

ಸರ್ಕಾರ ಕೂಡ ಯೋಜನೆ ಜಾರಿಗೊಳಿಸುವ ಮುನ್ನವೇ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಂಡಿರುತ್ತದೆ. ಮಕ್ಕಳ ಕಲಿಕೆಯ ಸುಧಾರಣೆಗಾಗಿ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡರೂ ಏಕಾಏಕಿ ಸಾರ್ವಜನಿಕರು ಅದರ ಸಾಧಕ ಬಾಧಕಗಳನ್ನು ವಿಶ್ಲೇ ಷಿಸುವುದು ಅಷ್ಟು ಸಮಂಜಸ ಅನಿಸುವುದಿಲ್ಲ. ಅದಕ್ಕೆ ಸಾಕಷ್ಟು ಸಮಯಾ ವಕಾಶ ಬೇಕಾಗುತ್ತದೆ. ಯಾವುದೇ ನೂತನ ಶಿಕ್ಷಣ ವ್ಯವಸ್ಥೆಗಳು ಜಾರಿಯಾದಾ ಗಲೂ ಅದು ಮಕ್ಕಳ ಮೇಲೆ ಯಾವ ರೀತಿ ಪರಿಣಾಮ ಬೀರಬಲ್ಲದು ಎಂಬುದು ಒಂದು ಅಥವಾ ಎರಡು ವರ್ಷಗಳು ಕಳೆದ ಬಳಿಕವಷ್ಟೇ ಅರ್ಥವಾಗುತ್ತದೆ.

ಮುಂದಿನ ಪರೀಕ್ಷೆಗಳು ಅಂದರೆ ಮಕ್ಕಳು ತಮ್ಮ ಭವಿಷ್ಯದಲ್ಲಿ ಎದುರಿಸಬಹುದಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸೂಕ್ತ ತಯಾರಿ ನಡೆಸಲು ಈ ಯೋಜನೆ ಸೂಕ್ತವಾಗಬಹುದಾಗಿದೆ. ಅಂತಹ ಸಂದರ್ಭಗಳನ್ನು ಎದುರಿಸಲು ಮಕ್ಕಳಲ್ಲಿ ಕಲಿಕೆ ಮಟ್ಟ ಹಾಗೂ ಅವರಲ್ಲಿನ ಕೊರತೆಯನ್ನು ತಿಳಿದು, ಅದನ್ನು ನಿವಾರಿಸಲು ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಯೋಜಿಸಲು ಸರ್ಕಾರಕ್ಕೆ ಅನುಕೂಲವಾಗುತ್ತದೆ.

ಇನ್ನು ಕೋವಿಡ್ ಸಂದರ್ಭದಲ್ಲಿ ಮಕ್ಕಳಿಗೆ ೨ವರ್ಷಗಳು ಶಾಲೆ ಇಲ್ಲದೆ ಕಲಿಕಾ ಮಟ್ಟ ತೀರಾ ಕುಸಿದಿತ್ತು. ಈ ಸಂಧರ್ಭದಲ್ಲಿ ಸರ್ಕಾರ ಆನ್‌ಲೈನ್ ತರಗತಿಗಳನ್ನು ನಡೆಸಿತಾದರೂ ೨ ವರ್ಷದಲ್ಲಿ ಪಠ್ಯಕ್ರಮ ಚಟು ವಟಿಕೆಗಳಲ್ಲಿ ಉಂಟಾದ ಏರುಪೇರುಗಳನ್ನು ಸರಿದೂಗಿಸಲು ಶಾಲೆಗಳು ಪುನಾರಂಭವಾಗ ಬೇಕಾಯಿತು. ಅದರಿಂದ ಮಕ್ಕಳು ಮರಳಿ ತಮ್ಮ ಪಠ್ಯ ಚಟುವಟಿಕೆಗಳ ಕಡೆ ಆಸಕ್ತಿ ವಹಿಸಲು ಸಹಾಯಕವಾಯಿತು.

ಇನ್ನು ಈ ವಾರ್ಷಿಕ ಪರೀಕ್ಷೆ ಜಾರಿಯಿಂದ ಶಿಕ್ಷಕರಿಗೂ ಒಂದು ಪ್ರತಿಕ್ರಿಯೆ ದೊರಕುತ್ತದೆ ಎಂದರೆ ತಪ್ಪಾಗಲಾರದು. ಮಕ್ಕಳಿಗೆ ತಾವು ಯಾವ ವಿಚಾರ ವನ್ನು ಹೇಗೆ ಬೋಽಸಬೇಕು? ಎಷ್ಟು ಪ್ರಮಾಣದಲ್ಲಿ ಅದನ್ನು ಅರ್ಥೈ ಸಿಕೊಳ್ಳಲು ಸಾಧ್ಯವೆಂಬುದನ್ನು ಶಿಕ್ಷಕರು ತಿಳಿದು ಮುಂದಿನ ಹಂತದ ತಯಾರಿ ಗೆ ಅನುಕೂಲ ಕಲ್ಪಿಸುತ್ತದೆ. ಒಟ್ಟಾರೆ ಇದು ಯಾವ ರೀತಿ ಪರಿಣಾಮ ಕಾರಿಯಾಗಲಿದೆ ಎಂಬುದನ್ನು ಒಂದೆರಡು ವರ್ಷಗಳು ಕಾದು ನೋಡಬೇಕಿದೆ.

ನಿರೂಪಣೆ: ಅನಿಲ್ ಅಂತರಸಂತೆ

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

8 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

12 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

13 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

14 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

14 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

14 hours ago