ಎಡಿಟೋರಿಯಲ್

ದುಷ್ಟ ಸಿದ್ಧಾಂತಿಗಳ ಹುಸಿ ಓಲೈಕೆ!

-ಕೆ.ವೆಂಕಟರಾಜು, ಚಾಮರಾಜನಗರ

ದೇವನೂರ ಮಹಾದೇವ ಅವರ ‘ಆರೆಸೆಸ್- ಆಳ, ಅಗಲ’ ಕೃತಿಯ ಬಗ್ಗೆ ಪ್ರಸನ್ನ ಅವರ ಲೇಖನ ಪ್ರಕಟವಾಗಿದೆ. ಆರೆಸೆಸ್ ಅನ್ನು ವಿರೋಧಿಸುತ್ತಿದ್ದ ಮಾರ್ಕ್ಸ್‌ವಾದಿಗಳು , ಸಮಾಜವಾದಿಗಳು ಮತ್ತು ಗಾಂಧಿವಾದಿಗಳು ವಿವಿಧ ಸಂದರ್ಭದಲ್ಲಿ ಕೈ ಜೋಡಿಸಿದ್ದಾರೆ ಎಂದು ಹೇಳಿ ಎರಡು ಸಂದರ್ಭ ಉಲ್ಲೇಖಿಸುತ್ತಾರೆ.

೧೯೭೧ ರ ಲೋಕಸಭಾ (ಮಧ್ಯಂತರ) ಚುನಾವಣೆ ಸಂದರ್ಭ. ಪ್ರೊ. ಎಮ್. ಗೋಪಾಲಕೃಷ್ಣ ಅಡಿಗರು ಬೆಂಗಳೂರಿನಲ್ಲಿ ಜನಸಂಘದಿಂದ ಚುನಾವಣೆಗೆ ನಿಂತಾಗ ಆರೆಸೆಸ್ ಜತೆ ಕಮ್ಯುನಿಸ್ಟರು, ಸಮಾಜವಾದಿಗಳು ಕೈಗೂಡಿಸಿದ್ದರು ಎಂದು ಹೇಳಿದ್ದಾರೆ. ಇದು ಅರ್ಧ ಸತ್ಯ. ಕಾಂಗ್ರೆಸ್ಸೇತರ ಚಳವಳಿ (ಇದನ್ನು ಲೋಹಿಯಾ ಹಿಂದೆಯೇ ಪ್ರಬಲವಾಗಿ ಪ್ರತಿಪಾದಿಸಿ ಜನಸಂಘವನ್ನೂ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು. ಇದಕ್ಕೆ ಹಿಂದೆ ರಾಷ್ಟ್ರಪತಿ ಚುನಾವಣೆಯಲ್ಲಿ ಕೋಕಾ ಸುಬ್ಬರಾವ್ ಅವರನ್ನು ಬೆಂಬಲಿಸಿ ಈ ಕೂಟದ ಆರಂಭವಾಗಿತ್ತು ) ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ಸನ್ನು ಅಥವಾ ಆಡಳಿತ ಪಕ್ಷವನ್ನೂ ವಿರೋಧಿಸಿ ಅಡಿಗರನ್ನು ಬೆಂಬಲಿಸಿ ಕೆಲಸ ಮಾಡಿದರು. ಆರೆಸೆಸ್‌ನವರೂ ಕೆಲಸ ಮಾಡಿದರು ಇತರರೂ ಕೆಲಸ ಮಾಡಿದರು. ಬೆಂಗಳೂರಿನಲ್ಲಿ ಕೇಶವ ಕೃಪಾದಲ್ಲಿ ಮೀಟಿಂಗ್‌ಗಳು ನಡೆದಿರಬಹುದು.

ಈ ಚುನಾವಣಾ ವ್ಯಾವಹಾರ ಹೊರತು ಪಡಿಸಿ ಸಹಕಾರ, ಸ್ನೇಹ ಇತ್ಯಾದಿ ಯಾವುವೂ ಇರಲಿಲ್ಲ. ಇನ್ನು ಬಿಜೆಪಿ ಹುಟ್ಟಿದ ಸಂದರ್ಭದ ಮಾತು ಆಡುತ್ತಾರೆ. ಅವರು ಆಗ ಹೇಳಿದ ಗಾಂಧಿಪ್ರಣೀತ ಸಮಾಜವಾದವನ್ನು ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಜನರನ್ನು ಯಾಮಾರಿಸಲು ಈ ಪದ ಪುಂಜ ಬಳಸಲಾಗಿತ್ತು. ಆರ್‌ಎಸ್‌ಎಸ್ಸಿನ ಗೆಳೆಯರು ಒಳಿತಿನ ಭಾವಾವೇಷಕ್ಕೆ ಒಳಗಾಗಿ ಎಂದು ಪ್ರಸನ್ನ ಬರೆಯುತ್ತಾರೆ. ಯಾವ ಒಳಿತೂ, ಯಾವ ಭಾವಾವೇಷವೂ ಇರಲಿಲ್ಲ. ಆಡಳಿತದಲ್ಲಿದ್ದ ಜನತಾ ಇಂದ ಹೊರಬಂದ ಜನಸಂಘದ ಗುಂಪು ಬಿಜೆಪಿ ಮಾಡಿಕೊಂಡಿತು. (ಜನತಾ ಸರಕಾರ ಗಬ್ಬೇಳಲು ಜನಸಂಘದ ಗುಂಪಿನ ದೇಣಿಗೆಯೂ ಇದೆ. ಕೊನೆಗೆ ಇದನ್ನು ಚರಣ್ ಸಿಂಗ್ ಮತ್ತು ರಾಜನಾರಾಯಣ್ ತಲೆಗೆ ಕಟ್ಟಲಾಯಿತು.) ಆಗ ಗಾಂಧಿಪ್ರಣೀತ ಸಮಾಜವಾದ ಎಂಬ ಅರ್ಥಹೀನ ಬಾವುಟ ಏರಿಸಲಾಯಿತು. ಹಾಗೆ ನೋಡಹೋದರೆ ೧೯೭೭ರಲ್ಲಿ ಜನತಾ ಸರಕಾರ ಕೇಂದ್ರದಲ್ಲಿ ಬಂದಾಗ ಬಹಳ ಅಲ್ಪ ಕಾಲಕ್ಕೆ ಒಂದು ರೀತಿಯ ಸಹಕಾರ ಇತ್ತು. ಅಧಿಕಾರ ಸಿಮೆಂಟ್ ಅಲ್ಲವೇ ? ಇದರಿಂದ ದೊಡ್ಡ ಹೊಡೆತ ಬಿದ್ದಿದ್ದು ಸಮಾಜವಾದಿ ಪಕ್ಷಕ್ಕೆ . ದೇಶದ ಎಲ್ಲ ಕಡೆ ಸೋಷಲಿಸ್ಟ್ ಕಚೇರಿ ಮುಚ್ಚಿ ಮೇಜು ಕುರ್ಚಿ ಸಮೇತ ಅವರು ಜನತಾ ಕಚೇರಿಗೆ ಬಂದರು !!

ಹೌದು ನಮ್ಮ ವಿರೋಧಿಗಳು ಶತ್ರುಗಳೇನಲ್ಲ. ಅವರನ್ನು ದ್ವೇಷಿಸಬೇಕಾದ ಅಗತ್ಯ ಇಲ್ಲ. ಇದು ಪ್ರಜಾಪ್ರಭುತ್ವದ ನಿಯಮ ಹಾಗೂ ಸನ್ನಡತೆ. ಆದರೆ ಪ್ರಸನ್ನರ ಮಾತುಗಳು ಅನಗತ್ಯವಾಗಿ ಒಂದು ದುಷ್ಟ ಸಿಧ್ದಾಂತಿಗಳ ಹುಸಿ ಓಲೈಕೆಯಂತೆ ಕಾಣುತ್ತದೆ.

 

andolana

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

56 mins ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

1 hour ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

1 hour ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

2 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

2 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

3 hours ago