ಎಡಿಟೋರಿಯಲ್

ದುಷ್ಟ ಸಿದ್ಧಾಂತಿಗಳ ಹುಸಿ ಓಲೈಕೆ!

-ಕೆ.ವೆಂಕಟರಾಜು, ಚಾಮರಾಜನಗರ

ದೇವನೂರ ಮಹಾದೇವ ಅವರ ‘ಆರೆಸೆಸ್- ಆಳ, ಅಗಲ’ ಕೃತಿಯ ಬಗ್ಗೆ ಪ್ರಸನ್ನ ಅವರ ಲೇಖನ ಪ್ರಕಟವಾಗಿದೆ. ಆರೆಸೆಸ್ ಅನ್ನು ವಿರೋಧಿಸುತ್ತಿದ್ದ ಮಾರ್ಕ್ಸ್‌ವಾದಿಗಳು , ಸಮಾಜವಾದಿಗಳು ಮತ್ತು ಗಾಂಧಿವಾದಿಗಳು ವಿವಿಧ ಸಂದರ್ಭದಲ್ಲಿ ಕೈ ಜೋಡಿಸಿದ್ದಾರೆ ಎಂದು ಹೇಳಿ ಎರಡು ಸಂದರ್ಭ ಉಲ್ಲೇಖಿಸುತ್ತಾರೆ.

೧೯೭೧ ರ ಲೋಕಸಭಾ (ಮಧ್ಯಂತರ) ಚುನಾವಣೆ ಸಂದರ್ಭ. ಪ್ರೊ. ಎಮ್. ಗೋಪಾಲಕೃಷ್ಣ ಅಡಿಗರು ಬೆಂಗಳೂರಿನಲ್ಲಿ ಜನಸಂಘದಿಂದ ಚುನಾವಣೆಗೆ ನಿಂತಾಗ ಆರೆಸೆಸ್ ಜತೆ ಕಮ್ಯುನಿಸ್ಟರು, ಸಮಾಜವಾದಿಗಳು ಕೈಗೂಡಿಸಿದ್ದರು ಎಂದು ಹೇಳಿದ್ದಾರೆ. ಇದು ಅರ್ಧ ಸತ್ಯ. ಕಾಂಗ್ರೆಸ್ಸೇತರ ಚಳವಳಿ (ಇದನ್ನು ಲೋಹಿಯಾ ಹಿಂದೆಯೇ ಪ್ರಬಲವಾಗಿ ಪ್ರತಿಪಾದಿಸಿ ಜನಸಂಘವನ್ನೂ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದರು. ಇದಕ್ಕೆ ಹಿಂದೆ ರಾಷ್ಟ್ರಪತಿ ಚುನಾವಣೆಯಲ್ಲಿ ಕೋಕಾ ಸುಬ್ಬರಾವ್ ಅವರನ್ನು ಬೆಂಬಲಿಸಿ ಈ ಕೂಟದ ಆರಂಭವಾಗಿತ್ತು ) ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ಸನ್ನು ಅಥವಾ ಆಡಳಿತ ಪಕ್ಷವನ್ನೂ ವಿರೋಧಿಸಿ ಅಡಿಗರನ್ನು ಬೆಂಬಲಿಸಿ ಕೆಲಸ ಮಾಡಿದರು. ಆರೆಸೆಸ್‌ನವರೂ ಕೆಲಸ ಮಾಡಿದರು ಇತರರೂ ಕೆಲಸ ಮಾಡಿದರು. ಬೆಂಗಳೂರಿನಲ್ಲಿ ಕೇಶವ ಕೃಪಾದಲ್ಲಿ ಮೀಟಿಂಗ್‌ಗಳು ನಡೆದಿರಬಹುದು.

ಈ ಚುನಾವಣಾ ವ್ಯಾವಹಾರ ಹೊರತು ಪಡಿಸಿ ಸಹಕಾರ, ಸ್ನೇಹ ಇತ್ಯಾದಿ ಯಾವುವೂ ಇರಲಿಲ್ಲ. ಇನ್ನು ಬಿಜೆಪಿ ಹುಟ್ಟಿದ ಸಂದರ್ಭದ ಮಾತು ಆಡುತ್ತಾರೆ. ಅವರು ಆಗ ಹೇಳಿದ ಗಾಂಧಿಪ್ರಣೀತ ಸಮಾಜವಾದವನ್ನು ಯಾರೂ ಗಂಭೀರವಾಗಿ ಪರಿಗಣಿಸಲಿಲ್ಲ. ಜನರನ್ನು ಯಾಮಾರಿಸಲು ಈ ಪದ ಪುಂಜ ಬಳಸಲಾಗಿತ್ತು. ಆರ್‌ಎಸ್‌ಎಸ್ಸಿನ ಗೆಳೆಯರು ಒಳಿತಿನ ಭಾವಾವೇಷಕ್ಕೆ ಒಳಗಾಗಿ ಎಂದು ಪ್ರಸನ್ನ ಬರೆಯುತ್ತಾರೆ. ಯಾವ ಒಳಿತೂ, ಯಾವ ಭಾವಾವೇಷವೂ ಇರಲಿಲ್ಲ. ಆಡಳಿತದಲ್ಲಿದ್ದ ಜನತಾ ಇಂದ ಹೊರಬಂದ ಜನಸಂಘದ ಗುಂಪು ಬಿಜೆಪಿ ಮಾಡಿಕೊಂಡಿತು. (ಜನತಾ ಸರಕಾರ ಗಬ್ಬೇಳಲು ಜನಸಂಘದ ಗುಂಪಿನ ದೇಣಿಗೆಯೂ ಇದೆ. ಕೊನೆಗೆ ಇದನ್ನು ಚರಣ್ ಸಿಂಗ್ ಮತ್ತು ರಾಜನಾರಾಯಣ್ ತಲೆಗೆ ಕಟ್ಟಲಾಯಿತು.) ಆಗ ಗಾಂಧಿಪ್ರಣೀತ ಸಮಾಜವಾದ ಎಂಬ ಅರ್ಥಹೀನ ಬಾವುಟ ಏರಿಸಲಾಯಿತು. ಹಾಗೆ ನೋಡಹೋದರೆ ೧೯೭೭ರಲ್ಲಿ ಜನತಾ ಸರಕಾರ ಕೇಂದ್ರದಲ್ಲಿ ಬಂದಾಗ ಬಹಳ ಅಲ್ಪ ಕಾಲಕ್ಕೆ ಒಂದು ರೀತಿಯ ಸಹಕಾರ ಇತ್ತು. ಅಧಿಕಾರ ಸಿಮೆಂಟ್ ಅಲ್ಲವೇ ? ಇದರಿಂದ ದೊಡ್ಡ ಹೊಡೆತ ಬಿದ್ದಿದ್ದು ಸಮಾಜವಾದಿ ಪಕ್ಷಕ್ಕೆ . ದೇಶದ ಎಲ್ಲ ಕಡೆ ಸೋಷಲಿಸ್ಟ್ ಕಚೇರಿ ಮುಚ್ಚಿ ಮೇಜು ಕುರ್ಚಿ ಸಮೇತ ಅವರು ಜನತಾ ಕಚೇರಿಗೆ ಬಂದರು !!

ಹೌದು ನಮ್ಮ ವಿರೋಧಿಗಳು ಶತ್ರುಗಳೇನಲ್ಲ. ಅವರನ್ನು ದ್ವೇಷಿಸಬೇಕಾದ ಅಗತ್ಯ ಇಲ್ಲ. ಇದು ಪ್ರಜಾಪ್ರಭುತ್ವದ ನಿಯಮ ಹಾಗೂ ಸನ್ನಡತೆ. ಆದರೆ ಪ್ರಸನ್ನರ ಮಾತುಗಳು ಅನಗತ್ಯವಾಗಿ ಒಂದು ದುಷ್ಟ ಸಿಧ್ದಾಂತಿಗಳ ಹುಸಿ ಓಲೈಕೆಯಂತೆ ಕಾಣುತ್ತದೆ.

 

andolana

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

20 mins ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

52 mins ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

2 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

2 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

3 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

4 hours ago