ಎಡಿಟೋರಿಯಲ್

ಸಂಪಾದಕೀಯ : ಕಾಡು ಪ್ರಾಣಿಗಳ ರಕ್ಷಣೆಗೆ ಬೇಕಿದೆ ಸೂಕ್ತ ಕ್ರಮ

ಶ್ರೇಯಸ್ ದೇವನೂರು

ಪ್ರಕೃತಿಯಲ್ಲಿ ಮನುಷ್ಯನು ಸೃಷ್ಟಿಸಿರುವ ಹಸ್ತಕ್ಷೇಪಗಳು ಇಂದು ಮಾನವ -ಪ್ರಾಣಿಗಳ ಸಂಘರ್ಷಕ್ಕೆ ಬಹುದೊಡ್ಡ ಕಾರಣಗಳಾಗಿ ಪರಿಣಮಿಸಿವೆ. ಕಾಡಿನಿಂದ ನಾಡಿಗೆ ಬಂದು ಪ್ರಾಣಿಗಳು ದಾಳಿ ಮಾಡಿದಾಗ ಅವುಗಳ ವಿರುದ್ಧ ಒಗ್ಗೂಡುವ ಧ್ವನಿಗಳು, ಕಾಡಿನಲ್ಲಿಯೇ ಮನುಷ್ಯನಿಂದ ಅವುಗಳಿಗಾಗುವ ಅಪಾಯಗಳಿಗೆ ಮೌನವಹಿಸುತ್ತವೆ.

ಪ್ರಸ್ತುತ ದಿನಗಳಲ್ಲಿ ಪ್ರಾಣಿಗಳಿಂದ ಮನುಷ್ಯನ ಮೇಲೆ, ಮನುಷ್ಯನಿಂದ ಪ್ರಾಣಿಗಳ ಮೇಲೆ ದಾಳಿ ಹೆಚ್ಚಾಗತೊಡಗಿದೆ. ಉದ್ದೇಶ ಪೂರ್ವಕ ವಾಗಿ ನಡೆಯುತ್ತಿರುವ ಕಳ್ಳಬೇಟೆಗಳು ಒಂದೆಡೆ ಯಾದರೆ, ಅಪಘಾತದಂತಹ ಸಂದರ್ಭಗಳಲ್ಲಿ ಪ್ರಾಣಿಗಳು ಹೆಚ್ಚು ಜೀವ ಕಳೆದುಕೊಳ್ಳುತ್ತಿವೆ. ಇತ್ತೀಚೆಗೆ ಬಂಡೀಪುರದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ ಆನೆಯ ವರೆಗೂ ಮನುಷ್ಯನಿಂದ ಪ್ರಾಣ ಕಳೆದುಕೊಂಡ ಪ್ರಾಣಿಗಳ ಸಾಕಷ್ಟು ಉದಾಹರಣೆಗಳನ್ನು ನೋಡಬಹುದಾಗಿದೆ.

ಈ ಸಾವುಗಳಿಗೆ ಕಾರಣವೇನು? ಹುಡುಕುತ್ತಾ ಹೋದರೆ ಬೆರಳು ನಮ್ಮತ್ತ ತೋರುತ್ತದೆ. ಈಗಾಗಲೇ ಸಾಕಷ್ಟು ಪ್ರಮಾಣದ ಕಾಡು ನಶಿಸಿದೆ. ಜೊತೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳೂ ರಾಷ್ಟ್ರೀಯ ಹೆದ್ದಾರಿ ಎಂಬ ಹೆಸರಿನಲ್ಲಿ ಅತಿಯಾಗಿ ಅಭಿವೃದ್ಧಿಗೊಂಡು ವಾಹನಗಳ ಸಂಖ್ಯೆ ಮತ್ತು ವೇಗ ಹೆಚ್ಚಾಗಲು ಕಾರಣವಾಗಿದೆ. ಬಂಡೀಪುರದಲ್ಲಿಯೂ ಇದೇ ಸಮಸ್ಯೆಯನ್ನು ಕಾಣಬಹುದಾಗಿದೆ.

ರಸ್ತೆ ಅಭಿವೃದ್ಧಿ ಮಾಡುವುದು ಸಂಚಾರಕ್ಕೆ ಪೂರಕವಾಗಿದ್ದರೆ, ಪ್ರಾಣಿಗಳ ಜೀವಕ್ಕೆ ಅದುಮಾರಕವಾಗಿದೆ. ಹುಲಿ, ಚಿರತೆ, ಜಿಂಕೆ, ಲಂಗೂರ್‌ನಂತಹ ಪ್ರಾಣಿಗಳು,ಸಾಕಷ್ಟು ಬಾರಿ ಪಕ್ಷಿಗಳು ವಾಹನಗಳಿಗೆ ಸಿಲುಕಿ ಸಾವನ್ನಪ್ಪುವ ಪ್ರಕರಣಗಳು ಹೆಚ್ಚಾಗಿದ್ದು, ಪ್ರಾಣಿ ಪ್ರಿಯರ ಬೇಸರಕ್ಕೆ ಕಾರಣವಾಗಿದೆ.

ಬಂಡೀಪುರ ಅರಣ್ಯದೊಳಗಿನ ರಸ್ತೆಯಲ್ಲಿ ಸಂಚಾರ ನಿಯಮಗಳು ಸಡಿಲವಾಗಿವೆಯೇ? ಎಂಬುದು ಸಾರ್ವಜನಿಕ ವಲಯದ ಪ್ರಶ್ನೆಯಾಗಿದೆ. ಬಂಡೀಪುರದಲ್ಲಿ ರಾತ್ರಿ ೯ರಿಂದ ಬೆಳಿಗ್ಗೆ ೬ಗಂಟೆವರೆಗೂ ಕಾಡಂಚಿನ ೨ ಗೇಟ್‌ಗಳನ್ನು ಬಂದ್ ಮಾಡುವ ಕಾರಣ ಅಷ್ಟರೊಳಗೆ ಗೇಟ್ ದಾಟಲು ವಾಹನಗಳು ಅತಿಯಾದ ವೇಗದಲ್ಲಿ ಸಂಚಾರ ಮಾಡುವುದರಿಂದ ರಾತ್ರಿ ವೇಳೆಯೇ ಅಪಘಾತಗಳು ಹೆಚ್ಚಾಗಲು ಕಾರಣವಾಗಿವೆ. ಅಪಘಾತಗಳನ್ನು ತಪ್ಪಸಿ ಪ್ರಾಣಿಗಳನ್ನು ಸಂರಕ್ಷಿಸಲು ಅರಣ್ಯ ಇಲಾಖೆ ಎಷ್ಟೇ ಪ್ರಯತ್ನಗಳನ್ನು ಮಾಡಿದರೂ ಒಂದಲ್ಲ ಒಂದು ಕಡೆ ಇಂತಹ ಪ್ರಕರಣಗಳು ವರದಿಯಾಗುತ್ತಲೇ ಇವೆ.

ಈಗ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದೆ. ಬಹುಶಃ ಆ ತಂತ್ರಜ್ಞಾನದ ಬಳಕೆ ಕಾಡಿನ ರಸ್ತೆಗಳಲ್ಲಾದರೆ ಇಂತಹ ಅಪಘಾತಗಳನ್ನು ತಪ್ಪಿಸಲು ಉಪಯೋಗವಾಗಬಹುದಾಗಿದೆ. ಕಾಡಿನಲ್ಲಿ ಹಾದುಹೋಗುವ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸ್ವಯಂ ಚಾಲಿತವಾಗಿ ವಾಹನದ ವೇಗ ಗುರುತಿಸುವ ಕ್ಯಾಮೆರಾಗಳನ್ನು ಅಳವಡಿಸಿ ನಿಗದಿತ ವೇಗಕ್ಕಿಂತ ಅತಿಯಾಗಿ ಚಾಲನೆ ಮಾಡುವವರನ್ನು ಗುರುತಿಸಿ ಕೂಡಲೆ ಆ ವಾಹನಗಳಿಗೆ ದಂಡ ಅಥವಾ ಕಾನೂನು ಕ್ರಮ ಜರುಗಿಸಬೇಕಿದೆ. ಇದು ಉಳಿದ ವಾಹನಚಾಲಕರಿಗೆ ಎಚ್ಚರಿಕೆ ಯಾಗಲಿದೆ. ಜೊತೆಗೆ ಅರಣ್ಯದೊಳಗೆ ರಸ್ತೆಯಲ್ಲಿ ಅಲ್ಲಲ್ಲಿ ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸುವುದು ಸೂಕ್ತವೆನಿಸುತ್ತದೆ. ಇನ್ನು ರಾತ್ರಿಯ ವೇಳೆ ಅರಣ್ಯದೊಳಗಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿಷೇಧ ಮಾಡುವುದು ಮತ್ತಷ್ಟು ಸೂಕ್ತವೆನಿಸುತ್ತದೆ. ಹಾಗೆಯೇ ಪ್ರವಾಸಿಗರು ವಾಹನ ನಿಲ್ಲಿಸಿ ಪ್ರಾಣಿಗಳಿಗೆ ಕೀಟಲೆ ಮಾಡುವುದು, ಮದ್ಯವ್ಯಸನಿಗಳು ಕಾಡಿನಲ್ಲಿ ವಾಹನ ನಿಲ್ಲಿಸಿ ಮದ್ಯ ಸೇವನೆ ಮಾಡುವ ಪ್ರಕರಣಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಿದ್ದೇವೆ. ಅವುಗಳಿಗೆ ಸೂಕ್ತ ಕಾನೂನು ಕ್ರಮವಾದಲ್ಲಿ ಮಾತ್ರ ಇಂತಹ ಸಮಸ್ಯೆಗಳನ್ನು ತಪ್ಪಿಸಲು ಸಾಧ್ಯ.

ರಾತ್ರಿಯ ವೇಳೆ ವಾಹನಗಳ ಬೆಳಕು ಪ್ರಾಣಿಗಳಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಬೆಳಕಿನ ತೀವ್ರತೆಗೆ ಅವು ದಿಕ್ಕು ಕಾಣದೆ ರಸ್ತೆ ಬಿಟ್ಟು ಹೋಗಲಾ ರದೇ ವಾಹನಗಳಿಗೆ ಸಿಲುಕುವ ಸಾಧ್ಯತೆಯೇ ಹೆಚ್ಚು ಅದರಲ್ಲೂ ನಿಶಾಚರಿ ಪ್ರಾಣಿಗಳೇ ಹೆಚ್ಚಾಗಿ ಸಿಲುಕುತ್ತವೆ. ಆದ್ದರಿಂದ ವನ್ಯಸಂಪತ್ತು ಹೆಚ್ಚಾಗಿರುವ ಬಂಡೀಪುರದಂತಹ ಪ್ರದೇಶಗಳಲ್ಲಿ ರಾತ್ರಿ ಸಂಚಾರಕ್ಕೆ ಕೊಂಚ ಬ್ರೇಕ್ ನೀಡಬೇಕಿದೆ. ಏಕೆಂದರೆ ನಮ್ಮಂತೆಯೇ ಮುಂದಿನ ಪೀಳಿಗೆಯೂ ಪ್ರಾಣಿಗಳನ್ನು ನೈಜ್ಯವಾಗಿ ನೋಡಬೇಕಿದೆ ಅಲ್ಲವೇ?

andolanait

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

11 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

11 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

12 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

12 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

12 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

13 hours ago