ಮದ್ಯ ಖರೀದಿಗೆ ಇದ್ದ ವಯೋಮಿತಿ 18 ವರ್ಷಕ್ಕೆ ಇಳಿಕೆ ಪ್ರಸ್ತಾಪ
ಬಿ.ಎನ್.ಧನಂಜಯಗೌಡ
ಮೈಸೂರು: ಯುವ ಜನತೆಯನ್ನು ಮಾನಸಿಕ ಮತ್ತು ದೈಹಿಕವಾಗಿ ಬಲಿಷ್ಠವಾಗಿಸಬೇಕಾದ ಸರ್ಕಾರ, ಅವರನ್ನು ನಶೆಯತ್ತ ದೂಡಲು ನಿರ್ಧರಿಸಿದೆ.
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧವನ್ನು ಸಡಿಲಿಸಿ, ಈ ವಯಸ್ಸನ್ನು 18ಕ್ಕೆ ಇಳಿಸಲು ಸರ್ಕಾರ ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ಕ್ಕೆ ತಿದ್ದುಪಡಿ ಮಾಡಲಾಗುತ್ತಿದೆ.
ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆಯು ಸಿದ್ಧಪಡಿಸಿರುವ ಕರಡು ಪ್ರತಿಯನ್ನು ಜನವರಿ 9ರ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ರ ಸೆಕ್ಷನ್ 10 (1) (ಇ)ರಡಿ ಮದ್ಯ ಖರೀದಿದಾರನ ವಯಸ್ಸಿಗೆ ವಿಧಿಸಿದ್ದ ನಿರ್ಬಂಧವನ್ನು ಸಡಿಲಿಸುವ ಉಲ್ಲೇಖ ತಿದ್ದುಪಡಿ ಕರಡಿನಲ್ಲಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಸೆಕ್ಷನ್ 10 (1) (ಇ)ನಲ್ಲಿ ಹೇಳಲಾಗಿತ್ತು. ಅದನ್ನು ಬದಲಿಸಿ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯಮಾರಾಟ ಮಾಡುವಂತಿಲ್ಲ ಎಂಬುದನ್ನು ಸೇರಿಸುವ ಪ್ರಸ್ತಾವವಿದೆ ಎನ್ನಲಾಗಿದೆ.
ನಿರ್ಬಂಧ ಪಾಲನೆಯಾಗುತ್ತಿಲ್ಲ : 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿಯಮ ಇರುವಾಗಲೇ ಇದಕ್ಕೂ ಕಡಿಮೆ ವಯಸ್ಸಿನ ಯುವಕರು ಮದ್ಯ ಖರೀದಿಸಿ ಸೇವಿಸುತ್ತಿದ್ದರು. ಆದರೆ, ಈಗ ಸರ್ಕಾರವೇ ವಯೋಮಿತಿಯನ್ನು ಕಡಿಮೆ ಮಾಡಿ, ಕುಡಿಯಲು ಪ್ರೋತ್ಸಾಹಿಸಲು ಮಂದಾಗಿದೆ.
ನಶೆಯುಕ್ತ ರಾಜ್ಯ ಮಾಡಲು ಮುಂದಾದ ಸರ್ಕಾರ
ಇಂತಹ ನಿಮಯಗಳು ಕಾನೂನು ಪುಸ್ತಕಗಳಲ್ಲಿ ಇರುತ್ತವೆಯೇ ವಿನಾ ಅವುಗಳು ಪಾಲನೆಯಾಗುವುದು ಕಡಿಮೆ. ಅಲ್ಲದೇ, ನಿಯಮಗಳಿಗೆ ಅನುಗುಣವಾಗಿಯೂ ಯಾವುದೇ ಮದ್ಯ ಮಾರಾಟ ಅಂಗಡಿಯ ವ್ಯಾಪಾರಿಗಳು ನಡೆದುಕೊಳ್ಳುವುದೂ ಇಲ್ಲ. ಮದ್ಯ ಸೇವನೆಗೆ ಕಡಿವಾಣ ಹಾಕಬೇಕಾದ ಹೊಣೆಗಾರಿಕೆ ಇರುವ ಸರ್ಕಾರ ಈಗ ರಾಜ್ಯವನ್ನು ನಶೆಯುಕ್ತ ಮಾಡಲು ಮುಂದಾಗಿದೆ.
ಮದ್ಯಸೇವನೆಯಿಂದ ಈಗಾಗಲೇ ದಿನನಿತ್ಯ ಸಾಕಷ್ಟು ಕುಟುಂಬಗಳು ಹಾಳಾಗುತ್ತಿವೆ. ಹೀಗಿರುವಾಗ ಇದನ್ನು ನಿಯಂತ್ರಿಸಬೇಕಾದ ಸರ್ಕಾರ, ಯುವ ಜನರು ಕುಡುಕರಾಗಿ ಎಂದು ಪ್ರೋತ್ಸಾಹಿಸಿ ಈ ನಿರ್ಬಂಧವನ್ನು ಸಡಿಸಲು ಮುಂದಾಗಿದೆ. ಇದು ಆಗಬಾರದು.
ಡಾ.ಬಿ.ಟಿ.ರಘು, ಸಹಾಯಕ ಪ್ರಾಧ್ಯಾಪಕರು
—————–
ಜವಾಬ್ದಾರಿ ಕುಡಿತಕ್ಕೆ ನಮ್ಮ ಅಡ್ಡಿಯಿಲ್ಲ. ಆದರೆ, ಬೇಜವಾಬ್ದಾರಿ ಕುಡಿತಕ್ಕೆ ನಮ್ಮ ವಿರೋಧ ಯಾವಾಗಲೂ ಇದೆ. ಆದರೆ, ಈಗ ಮದ್ಯಖರೀದಿಗೆ ೨೧ ವರ್ಷದಿಂದ ೧೮ ವರ್ಷ ಮಾಡಲು ಹೊರಟಿರುವುದು ಖಂಡನೀಯ. ಇದರ ಬಗ್ಗೆ ಜನರಿಗೆ ಅರಿವು ಬರಬೇಕು. ಅವರೇ ಹೋರಾಟಕ್ಕೆ ಸ್ವಯಂಪ್ರೇರಣೆಯಿಂದ ಮುಂದಾಗಬೇಕು.
– ಪ್ರೊ.ಇ.ರತಿರಾವ್, ಮಹಿಳಾ ಹೋರಾಟಗಾರ್ತಿ
————————–
ಯುವ ಸಮಾಜವನ್ನು ಸಶಕ್ತಗೊಳಿಸಬೇಕಾದ ಸರ್ಕಾರ. ಈ ರೀತಿ ಕಾನೂನು ತಿದ್ದುಪಡಿ ಮಾಡಿ ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿ ಮಾಡಲು ಮುಂದಾಗಿದೆ. ನಶೆ ಮುಕ್ತ ಭಾರತಕ್ಕಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಯುವ ಸಮೂಹವನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಬೇಕು.
– ಪ್ರಜ್ಞಾ ಕಶ್ಯಪ್, ಕಾನೂನು ವಿದ್ಯಾರ್ಥಿನಿ.
———————————
ಈಗಾಗಲೇ ಪಿಯುಸಿ ವಿದ್ಯಾರ್ಥಿಗಳೇ ರಾಜರೋಷವಾಗಿ ಕುಡಿಯುತ್ತಿದ್ದಾರೆ. ಸರ್ಕಾರ ಈ ರೀತಿಯಲ್ಲಿ ಕಾನೂನಿಗೆ ತಿದ್ದುಪಡಿ ತರಲು ಮುಂದಾಗಿ ಮತ್ತಷ್ಟು ಚಿಕ್ಕ ವಯಸ್ಸಿನ ವಿದ್ಯಾರ್ಥಿಗಳನ್ನು ಕುಡಿಯಲು ಉತ್ತೇಜಿಸಿದೆ.
– ಎಚ್.ಎಸ್.ಶಶಾಂಕ್, ವಿದ್ಯಾರ್ಥಿ
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…