ಎಡಿಟೋರಿಯಲ್

ಯುವಕರನ್ನು ಮದ್ಯದ ನಶೆಯತ್ತ ಸೆಳೆಯಲು ಮುಂದಾದ ಸರ್ಕಾರ

ಮದ್ಯ ಖರೀದಿಗೆ ಇದ್ದ ವಯೋಮಿತಿ 18 ವರ್ಷಕ್ಕೆ ಇಳಿಕೆ ಪ್ರಸ್ತಾಪ

ಬಿ.ಎನ್.ಧನಂಜಯಗೌಡ

ಮೈಸೂರು: ಯುವ ಜನತೆಯನ್ನು ಮಾನಸಿಕ ಮತ್ತು ದೈಹಿಕವಾಗಿ ಬಲಿಷ್ಠವಾಗಿಸಬೇಕಾದ ಸರ್ಕಾರ, ಅವರನ್ನು ನಶೆಯತ್ತ ದೂಡಲು ನಿರ್ಧರಿಸಿದೆ.

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧವನ್ನು ಸಡಿಲಿಸಿ, ಈ ವಯಸ್ಸನ್ನು 18ಕ್ಕೆ ಇಳಿಸಲು ಸರ್ಕಾರ ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ಕ್ಕೆ ತಿದ್ದುಪಡಿ ಮಾಡಲಾಗುತ್ತಿದೆ.

ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆಯು ಸಿದ್ಧಪಡಿಸಿರುವ ಕರಡು ಪ್ರತಿಯನ್ನು ಜನವರಿ 9ರ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ರ ಸೆಕ್ಷನ್ 10 (1) (ಇ)ರಡಿ ಮದ್ಯ ಖರೀದಿದಾರನ ವಯಸ್ಸಿಗೆ ವಿಧಿಸಿದ್ದ ನಿರ್ಬಂಧವನ್ನು ಸಡಿಲಿಸುವ ಉಲ್ಲೇಖ ತಿದ್ದುಪಡಿ ಕರಡಿನಲ್ಲಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಸೆಕ್ಷನ್ 10 (1) (ಇ)ನಲ್ಲಿ ಹೇಳಲಾಗಿತ್ತು. ಅದನ್ನು ಬದಲಿಸಿ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯಮಾರಾಟ ಮಾಡುವಂತಿಲ್ಲ ಎಂಬುದನ್ನು ಸೇರಿಸುವ ಪ್ರಸ್ತಾವವಿದೆ ಎನ್ನಲಾಗಿದೆ.

ನಿರ್ಬಂಧ ಪಾಲನೆಯಾಗುತ್ತಿಲ್ಲ : 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿಯಮ ಇರುವಾಗಲೇ ಇದಕ್ಕೂ ಕಡಿಮೆ ವಯಸ್ಸಿನ ಯುವಕರು ಮದ್ಯ ಖರೀದಿಸಿ ಸೇವಿಸುತ್ತಿದ್ದರು. ಆದರೆ, ಈಗ ಸರ್ಕಾರವೇ ವಯೋಮಿತಿಯನ್ನು ಕಡಿಮೆ ಮಾಡಿ, ಕುಡಿಯಲು ಪ್ರೋತ್ಸಾಹಿಸಲು ಮಂದಾಗಿದೆ.

ನಶೆಯುಕ್ತ ರಾಜ್ಯ ಮಾಡಲು ಮುಂದಾದ ಸರ್ಕಾರ

ಇಂತಹ ನಿಮಯಗಳು ಕಾನೂನು ಪುಸ್ತಕಗಳಲ್ಲಿ ಇರುತ್ತವೆಯೇ ವಿನಾ ಅವುಗಳು ಪಾಲನೆಯಾಗುವುದು ಕಡಿಮೆ. ಅಲ್ಲದೇ, ನಿಯಮಗಳಿಗೆ ಅನುಗುಣವಾಗಿಯೂ ಯಾವುದೇ ಮದ್ಯ ಮಾರಾಟ ಅಂಗಡಿಯ ವ್ಯಾಪಾರಿಗಳು ನಡೆದುಕೊಳ್ಳುವುದೂ ಇಲ್ಲ. ಮದ್ಯ ಸೇವನೆಗೆ ಕಡಿವಾಣ ಹಾಕಬೇಕಾದ ಹೊಣೆಗಾರಿಕೆ ಇರುವ ಸರ್ಕಾರ ಈಗ ರಾಜ್ಯವನ್ನು ನಶೆಯುಕ್ತ ಮಾಡಲು ಮುಂದಾಗಿದೆ.


ಮದ್ಯಸೇವನೆಯಿಂದ ಈಗಾಗಲೇ ದಿನನಿತ್ಯ ಸಾಕಷ್ಟು ಕುಟುಂಬಗಳು ಹಾಳಾಗುತ್ತಿವೆ. ಹೀಗಿರುವಾಗ ಇದನ್ನು ನಿಯಂತ್ರಿಸಬೇಕಾದ ಸರ್ಕಾರ, ಯುವ ಜನರು ಕುಡುಕರಾಗಿ ಎಂದು ಪ್ರೋತ್ಸಾಹಿಸಿ ಈ ನಿರ್ಬಂಧವನ್ನು ಸಡಿಸಲು ಮುಂದಾಗಿದೆ. ಇದು ಆಗಬಾರದು.

ಡಾ.ಬಿ.ಟಿ.ರಘು, ಸಹಾಯಕ ಪ್ರಾಧ್ಯಾಪಕರು

—————–

ಜವಾಬ್ದಾರಿ ಕುಡಿತಕ್ಕೆ ನಮ್ಮ ಅಡ್ಡಿಯಿಲ್ಲ. ಆದರೆ, ಬೇಜವಾಬ್ದಾರಿ ಕುಡಿತಕ್ಕೆ ನಮ್ಮ ವಿರೋಧ ಯಾವಾಗಲೂ ಇದೆ. ಆದರೆ, ಈಗ ಮದ್ಯಖರೀದಿಗೆ ೨೧ ವರ್ಷದಿಂದ ೧೮ ವರ್ಷ ಮಾಡಲು ಹೊರಟಿರುವುದು ಖಂಡನೀಯ. ಇದರ ಬಗ್ಗೆ ಜನರಿಗೆ ಅರಿವು ಬರಬೇಕು. ಅವರೇ ಹೋರಾಟಕ್ಕೆ ಸ್ವಯಂಪ್ರೇರಣೆಯಿಂದ ಮುಂದಾಗಬೇಕು.

– ಪ್ರೊ.ಇ.ರತಿರಾವ್, ಮಹಿಳಾ ಹೋರಾಟಗಾರ್ತಿ

————————–

ಯುವ ಸಮಾಜವನ್ನು ಸಶಕ್ತಗೊಳಿಸಬೇಕಾದ ಸರ್ಕಾರ. ಈ ರೀತಿ ಕಾನೂನು ತಿದ್ದುಪಡಿ ಮಾಡಿ ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿ ಮಾಡಲು ಮುಂದಾಗಿದೆ. ನಶೆ ಮುಕ್ತ ಭಾರತಕ್ಕಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಯುವ ಸಮೂಹವನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಕಾನೂನು ರೂಪಿಸಬೇಕು.

– ಪ್ರಜ್ಞಾ ಕಶ್ಯಪ್, ಕಾನೂನು ವಿದ್ಯಾರ್ಥಿನಿ.

———————————

ಈಗಾಗಲೇ ಪಿಯುಸಿ ವಿದ್ಯಾರ್ಥಿಗಳೇ ರಾಜರೋಷವಾಗಿ ಕುಡಿಯುತ್ತಿದ್ದಾರೆ. ಸರ್ಕಾರ ಈ ರೀತಿಯಲ್ಲಿ ಕಾನೂನಿಗೆ ತಿದ್ದುಪಡಿ ತರಲು ಮುಂದಾಗಿ ಮತ್ತಷ್ಟು ಚಿಕ್ಕ ವಯಸ್ಸಿನ ವಿದ್ಯಾರ್ಥಿಗಳನ್ನು ಕುಡಿಯಲು ಉತ್ತೇಜಿಸಿದೆ.

– ಎಚ್.ಎಸ್.ಶಶಾಂಕ್, ವಿದ್ಯಾರ್ಥಿ

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

4 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

4 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

5 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

5 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

6 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

6 hours ago